ವೀಳ್ಯದೆಲೆ ರೈತರ ಮೌನ ಹೋರಾಟ
Team Udayavani, May 22, 2020, 5:11 AM IST
ಮಳವಳ್ಳಿ: ವೀಳ್ಯದೆಲೆ ಬೆಳೆಗಾರರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ವೀಳ್ಯದೆಲೆ ಬೆಳೆಗಾರರ ಹೋರಾಟ ಸಮಿತಿ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಮುಂದೆ ಮೌನ ಹೋರಾಟ ನಡೆಸಲಾಯಿತು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಭರತ್ ರಾಜ್ ಮಾತನಾಡಿ, ತಾಲೂಕಿನ ಬಾಳೆಹೊನ್ನಿಗ, ಡಿ.ಕೆ.ಹಳ್ಳಿ, ನಿಟ್ಟೂರು, ಹುಸ್ಕೂರು, ಗೊಲ್ಲರಹಳ್ಳಿ, ದಾಸನ ದೊಡ್ಡಿ, ಪಟ್ಟಣ ಸೇರಿದಂತೆ ಹಲವೆಡೆ ವೀಳೈದೆಲೆ ಬೆಳೆದು ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿದ್ದ ಹಿಂದುಳಿದ ಗಂಗಾಮತಸ್ಥರ (ಬೆಸ್ತರು) ಜನಾಂಗದವರು ಈಗ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕೋವಿಡ್-19ದಿಂದಾಗಿ ದೇಶಾದ್ಯಂತ ಲಾಕ್ಡೌನ್ ಘೋಷಣೆಯಾದ ಬಳಿಕ ಬೆಳೆದ ವೀಳೈದೆಲೆಗೆ ಬೆಲೆ ಇಲ್ಲದೆ ಮಾರುಕಟ್ಟೆ ಸಮಸ್ಯೆಯಿಂದ ನಷ್ಟಕ್ಕೆ ಒಳಗಾಗಿ ಜೀವನ ನಡೆಸುವುದೇ ಕಷ್ಟವಾಗಿದೆ. ಅಲ್ಲದೇ ಬಹುತೇಕ ಮಂದಿ ಗುತ್ತಿಗೆ ಆಧಾರದ ಮೇಲೆ ಬೇರೆಯವರ ಜಮೀನನ್ನು ಪಡೆದು ಬೆಳೆ ಬೆಳೆಯುತ್ತಿರುವ ಕಾರಣ ಅವ ರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಜೀವನೋಪಾಯಕ್ಕಾಗಿ ಸರ್ಕಾರ ಕೊರೊನಾ ಪ್ಯಾಕೇಜಿನಡಿ ಸೂಕ್ತ ಪರಿಹಾರವನ್ನು ಎಲ್ಲಾ ಬೆಳೆಗಾರರಿಗೆ ನೀಡಬೇಕು. ಬೆಳೆ ವಿಸ್ತರಣೆ ಮತ್ತು ಅಭಿವೃದ್ಧಿಗಾಗಿ ಸಹಾಯಧನ ಹಾಗೂ ಬ್ಯಾಂಕ್ ಸಾಲ ನೀಡಬೇಕು. ವೀಳೈದೆಲೆ ಬೆಳೆಗೆ ಸಂಬಂಧಿಸಿದ ಪರಿಕರಗಳು ಮತ್ತು ಗೊಬ್ಬರ, ಔಷಧಿಗಳನ್ನು ಸಂಪರ್ಕವಾಗಿ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಮಹೇಶ್ಕುಮಾರ್, ಶಂಕರ್ ಶಾಂತರಾಜ್, ಸ್ವಾಮಿ ನಾಗರಾಜ್, ವೆಂಕಟೇಶ್, ಕೃಷ್ಣ, ನಾಗರಾಜ್, ಸಿದ್ದರಾಜ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ