K.R.Pete: ತೆಂಡೇಕೆರೆ ಗ್ರಾಮದಲ್ಲಿ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ


Team Udayavani, May 27, 2024, 11:49 AM IST

K.R.Pete: ತೆಂಡೇಕೆರೆ ಗ್ರಾಮದಲ್ಲಿ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಕೆ.ಆರ್‌.ಪೇಟೆ: ತಾಲೂಕಿನ ತೆಂಡೇಕೆರೆ ಗ್ರಾಮದಲ್ಲಿ ದಲಿತ ಕುಟುಂಬವೊಂದಕ್ಕೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ್ದು, ಬದುಕಲು ಅಗತ್ಯವಾಗಿ ಬೇಕಾದ ಕುಡಿಯುವ ನೀರು, ಬೀದಿದೀಪ, ರಸ್ತೆ ವ್ಯವಸ್ಥೆಯನ್ನು ಬಂದ್‌ ಮಾಡಿದ್ದಾರೆ.

ಗ್ರಾಮದ ಕೆಲವು ಜನರ ಒತ್ತಡದಿಂದ ಮೂಲಸೌಕರ್ಯಗಳನ್ನು ಒದಗಿಸದೇ ಅಮಾನವೀಯವಾಗಿ ನಡೆದು ಕೊಳ್ಳುತ್ತಿರುವ ತೆಂಡೇಕೆರೆ ಗ್ರಾಪಂ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡು ನಮಗೆ ಬದುಕಲು ಅಗತ್ಯ ಸೌಕರ್ಯಗಳನ್ನು ಒದಗಿಸಿ ಕೊಡಬೇಕೆಂದು ತೆಂಡೇಕೆರೆ ಗ್ರಾಮದ ದಲಿತ ಕುಟುಂಬವೊಂದರ ಸದಸ್ಯರು ರಾಜ್ಯ ಎಸ್ಸಿ-ಎಸ್ಟಿ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ತಾಲೂಕಿನ ತೆಂಡೇಕೆರೆ ಗ್ರಾಮದಲ್ಲಿ ತಮಗಾಗುತ್ತಿರುವ ಸಮಸ್ಯೆಗಳು ಹಾಗೂ ನೋವನ್ನು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ನೀಡಿದ ದೂರಿನ ಪ್ರತಿ ಬಿಡುಗಡೆಗೊಳಿಸಿ ಮಾತನಾಡಿದ ತೆಂಡೇಕೆರೆ ಗ್ರಾಮದ ಸಿ.ರಾಮಸ್ವಾಮಿ, ಪರಿಶಿಷ್ಟ ಜಾತಿಗೆ ಸೇರಿದ ನಾವು ಗ್ರಾಮದಲ್ಲಿ ನಮ್ಮ ಸ್ವಂತ ನಿವೇಶನದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದೇವೆ. ಆದರೆ, ಅಕ್ಕಪಕ್ಕದವರು ವಿನಾಕಾರಣ ನಮಗೆ ಕಿರುಕುಳ ನೀಡುತ್ತಿದ್ದಾರೆಂದು ದೂರಿದರು.

ನಮ್ಮ ಮನೆಗೆ ಹೋಗಲು ಇರುವ ಸರ್ಕಾರಿ ರಸ್ತೆಗೆ ಅಡ್ಡಲಾಗಿ ಕಲ್ಲುದಿಂಡುಗಳನ್ನು ಟ್ರ್ಯಾಕ್ಟರ್‌ ಮೂಲಕ ತಂದು ಹಾಕಿದ್ದಾರೆ. ಇದರಿಂದ ಮನೆಗೆ ಹೋಗಲು ತೀವ್ರ ತೊಂದರೆಯಾಗುತ್ತದೆ. ಜೊತೆಗೆ ನಮ್ಮ ಮನೆಗೆ ಜೆಜೆಎಂ ವತಿಯಿಂದ ಹಾಕಲಾಗಿದ್ದ ಕುಡಿಯುವ ನೀರಿನ ಪೈಪ್‌ಲೈನ್‌ ಅನ್ನು ಒಡೆದು ಹಾಕಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಗಮನಹರಿಸಿ ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದರು.

ಭಾರತಿ ರಾಮಸ್ವಾಮಿ, ಮಕ್ಕಳಾದ ಆರ್‌.ಅಮುದಾವೇಣಿ, ಆರ್‌. ಪದ್ಮಾವತಿ ಇದ್ದರು.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

Mandya: Theft of sandal trees from school premises after threatening security guards

Mandya: ಸೆಕ್ಯೂರಿಟಿ ಗಾರ್ಡ್ ಬೆದರಿಸಿ ಶಾಲಾ ಆವರಣದ ಗಂಧದ ಮರಗಳ ಕಳವು

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

police crime

Srirangapatna; ಕಾರಿನಲ್ಲಿ ಜಾನುವಾರು ಸಾಗಾಟ:ಉಸಿರುಗಟ್ಟಿ 6 ಕರುಗಳು ಸಾವು

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.