ವಿಶೇಷ ಅಧ್ಯಯನ ತರಗತಿಗೆ ಚಾಲನೆ
Team Udayavani, Jan 13, 2020, 5:29 PM IST
ಮದ್ದೂರು: ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಬೇಕೆಂಬ ಸದುದ್ದೇಶದಿಂದ ಇಂತಹ ಅಧ್ಯಯನ ತರಗತಿಗಳನ್ನು ಆಯೋಜಿಸುತ್ತಿರುವುದಾಗಿ ಮಾನಸ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ವಿ.ಕೆ.ಜಗದೀಶ್ ತಿಳಿಸಿದರು. ತಾಲೂಕಿನ ಬೆಸಗರಹಳ್ಳಿ ಗ್ರಾಮದ ಮಾನಸ ಎಜುಕೇಷನ್ ಟ್ರಸ್ಟ್ ಆಯೋಜಿಸಿರುವ ರಾತ್ರಿ ವೇಳೆ ವಿಶೇಷ ಅಧ್ಯಯನ ತರಗತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವರು ಮಾತನಾಡಿದರು.
ವಿದ್ಯಾರ್ಥಿಗಳ ಬೌದ್ಧಿಕ ಹಾಗೂ ಗುಣಾತ್ಮಕ ಫಲಿತಾಂಶಕ್ಕಾಗಿ ವಿಶೇಷ ಅಧ್ಯಯನ ತರಗತಿಗಳನ್ನು ಆರಂಭಿಸಲಾಗಿದೆ. ಇದರ ಸದುಪಯೋಗಕ್ಕೆ ಮುಂದಾಗುವ ಮೂಲಕ ಉತ್ತಮ ಫಲಿತಾಂಶ ಪಡೆಯಬೇಕು. ಪರೀಕ್ಷೆ ಭಯದಿಂದ ಹೊರಬಂದು ಈಗಿನಿಂದಲೇ ಶ್ರದ್ಧಾಸಕ್ತಿಯಿಂದ ಓದಬೇಕು ಎಂದರು.
ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಂತಹ ಶಿಬಿರಗಳನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು ಏಕಾಗ್ರತೆ, ಗುರಿ, ಸಾಧನೆ ಅಳವಡಿಸಿಕೊಂಡು ಶೈಕ್ಷಣಿಕವಾಗಿ ಮುಂದುವರಿದು ಉತ್ತಮ ಸಾಧನೆ ಮಾಡಬೇಕು. ಅನಗತ್ಯವಾಗಿ ಕಾಲಾಹರಣ ಮಾಡದೆ ಈಗಿನಿಂದಲೇ ಪರೀಕ್ಷೆಗೆ ತಯಾರಿ ನಡೆಸಬೇಕೆಂದು ಸಲಹೆ ನೀಡಿದರು.
ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಂಜೆ 4.30ರಿಂದ ರಾತ್ರಿ 8 ಗಂಟೆವರೆಗೆ ಅಧ್ಯಯನ ತರಗತಿ ಪ್ರಾರಂಭಿಸಲಾಯಿತು. ಈ ವೇಳೆ ಪ್ರಾಂಶುಪಾಲ ಪುಟ್ಟಸ್ವಾಮಿ, ನಿವೃತ್ತ ಶಿಕ್ಷಕರಾದ ಸಿದ್ದಯ್ಯ, ನಾಗರಾಜು, ಶಿಕ್ಷಕರಾದ ಪ್ರವೀಣ್, ನಿಶ್ಚಲ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ