ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವದ ವೈಭವ


Team Udayavani, Mar 29, 2021, 2:05 PM IST

ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವದ ವೈಭವ

ನಾಗಮಂಗಲ: ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಶ್ರೀಗಂಗಾಧರೇಶ್ವರಸ್ವಾಮಿ ರಥೋತ್ಸವ ಸಹಸ್ರಾರು ಭಕ್ತಾದಿಗಳ ನಡುವೆ ವೈಭವದಿಂದ ನಡೆಯಿತು.

ಹೋಳಿ ಹುಣ್ಣಿಮೆಯ ಹಿಂದಿನ ರಾತ್ರಿ ಅಂದರೆ ಮಾ.27ರಂದು ಶ್ರೀ ಕ್ಷೇತ್ರದ ಶ್ರೀ ಕಾಲ ಭೈರವೇಶ್ವರ ಪುಷ್ಕರಣಿಯಲ್ಲಿ ತೆಪ್ಪೋತ್ಸವ ಮುಗಿದು ಮಧ್ಯರಾತ್ರಿಕಳೆಯುತ್ತಿದ್ದಂತೆಯೇ ಗಂಗಾಧರೇಶ್ವರ ರಥೋ ತ್ಸವಕ್ಕೆಕ್ಷಣಗಣನೆ ಪ್ರಾರಂಭವಾಯಿತು. ಬೆಳಗಿನಜಾವ ಬ್ರಾಹ್ಮೀ ಮುಹೂರ್ತದಲ್ಲಿ ನಡೆಯುವ ಗಂಗಾಧರೇಶ್ವರಸ್ವಾಮಿ ಮಹಾ ರಥೋತ್ಸವ ಮತ್ತು ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮಿ ಗಳವರ ಅಡ್ಡಪಲ್ಲಕ್ಕಿ ಉತ್ಸವ ಭಕ್ತಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು.

ಜೈಕಾರ: ಭಾನುವಾರ ಬೆಳಗಿನ ಜಾವ (ಶನಿವಾರ ರಾತ್ರಿ) ಬ್ರಾಹ್ಮೀ ಮುಹೂರ್ತ ಪ್ರಾರಂಭ ವಾಗುತ್ತಿದ್ದಂತೆಯೇ ಶ್ರೀಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರುಸರ್ವಾಲಂಕಾರ ಭೂಷಿತರಾಗಿ, ಸುವರ್ಣಕಿರೀಟಧಾರಿಗಳಾಗಿ ಭಕ್ತರಿಗೆ ದರ್ಶನ ನೀಡುತ್ತಾವಟುಗಳ ವೇಧ ಘೋಷ, ಮಂತ್ರ ಪಠಣ,ವಿದ್ವಾಂಸರ ವೇದಘೋಷ ಹಾಗೂ ಮಂಗಳವಾದ್ಯಗಳ ಸಮೇತ ಅಡ್ಡಪಾಲಕಿಯಲ್ಲಿ ವಿರಾಜಮಾನ ರಾಗಿ ಗಿರಿಯ ಕೆಳಗಿರುವ ರಥಬೀದಿಗೆಬಿಜಯಂಗೈಯ್ಯುತ್ತಿದ್ದಂತೆಯೇ ಎಲ್ಲೆಲ್ಲೂಜೈಕಾರಗಳು ಮೊಳಗಿದವು. ಶ್ರೀ ಭೈರವೇಶ್ವರ, ಶ್ರೀಗಂಗಾಧರೇಶ್ವರ ಮತ್ತು ಚುಂಚಶ್ರೀಗಳಿಗೆ ಮೊಳಗಿಸಿದಜಯಕಾರಗಳು ಮುಗಿಲು ಮುಟ್ಟಿದವು. ಹೋಳಿ ಹುಣ್ಣಿಮೆಯ ತುಂಬು ಚಂದ್ರನ ಹಾಲುಬೆಳದಿಂಗಳಲ್ಲಿ ಭಕ್ತರಿಂದ ತುಂಬಿ ತುಳುಕುತ್ತಿದ್ದವಿಶಾಲವಾದ ರಥಬೀದಿ ಭಕ್ತಸಾಗರದಲ್ಲಿತೇಲಾಡುತ್ತಿದೆಯೇನೋ ಎನ್ನುವಂತೆ ಭಾಸವಾಗುತ್ತಿತ್ತು.

ರಥಕ್ಕೆ ವಿಶೇಷ ಪೂಜೆ: ವಿಧ ವಿಧ ಪುಷ್ಪಗಳಿಂದಹಾಗೂ ವಿದ್ಯುತ್‌ ದೀಪಮಾಲೆಗಳಿಂದ ಅಲಂಕೃತ ಗೊಂಡಿದ್ದ ಗಂಗಾಧರೇಶ್ವರಸ್ವಾಮಿ ರಥದ ಸನಿಹಕ್ಕೆಆಗಮಿಸಿದ ಮಹಾಸ್ವಾಮಿಗಳವರು ಪಾಲಕಿಯಿಂದ ಇಳಿದು ರಥಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ರಥವನ್ನುಮುಂದೆ ಚಲಿಸಲು ಪ್ರಾರ್ಥಿಸಿ ಪಾಲಕಿಯಲ್ಲಿ ಆಸೀನರಾಗುತ್ತಿದ್ದಂತೆಯೇ ರಥವುನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆನೆರೆದಿದ್ದ ಭಕ್ತಸಾಗರ ಗಂಗಾಧರೇಶ್ವರನಿಗೂ, ಭೈರವೇಶ್ವರನಿಗೂ, ಶ್ರೀ ಗುರುಗಳಿಗೂ ಕೂಗಿದ ಜೈಕಾರ ಇಡೀ ಗಿರಿಯ ತುಂಬೆಲ್ಲ ಪ್ರತಿಧ್ವನಿಸಿತ್ತು.

ಭಕ್ತಿ ಸಮರ್ಪಣೆ: ಮಹಾರಥದಮುಂದೆ ಮುಂದೆ ಶ್ರೀಗಳವರಪಾಲಕಿಯೂ, ಪಾಲಕಿಯ ಹಿಂದೆ ಮಹಾರಥವೂ ಸಾಗುತ್ತಿದ್ದಂತೆ ಭಕ್ತರ ಭಕ್ತಿಯಪರಾಕಾಷ್ಠೆ ಮೇರೆ ಮೀರಿತ್ತು. ನೆರೆದಿದ್ದ ಸಹಸ್ರ ಸಹಸ್ರಸಂಖ್ಯೆಯಲ್ಲಿ ಭಕ್ತಗಣ ರಥವನ್ನು ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು.

ಸೂರ್ಯೋದಯಕ್ಕೂ ಮುನ್ನ ಮೂಲ ಸ್ಥಾನಕ್ಕೆ: ರಥಕ್ಕೆ ಹೂವು, ದವನ ಹಾಗೂ ಬಾಳೆಹಣ್ಣನ್ನು ಅರ್ಪಿಸಿ ತಮ್ಮ ಹರಕೆ ತೀರಿಸಿದರು. ವಿದ್ಯುತ್‌ ದೀಪಗಳ ಕಣ್ಣುಕೋರೈಸುವ ಬೆಳಕಿನ ನಡುವೆ ಭಕ್ತರ ಜಯಘೋಷಗಳ ನಡುವೆ, ಶ್ರೀ ಗಂಗಾಧರೇಶ್ವರನರಥವನ್ನು ಎಳೆದು ಭಕ್ತಿ ಪರವಶ ರಾದರು. ಮಹಾಸ್ವಾಮಿ ಗಳವರ ಅಡ್ಡಪಾಲಕಿ ಉತ್ಸವವನ್ನುಹೊತ್ತು ಮೆರೆಸಿ ಧನ್ಯತಾಭಾವ ಹೊಂದಿದರು. ಬ್ರಾಹ್ಮೀ ಮುಹೂರ್ತ ದಲ್ಲಿ ಪ್ರಾರಂಭವಾಗುವರಥೋತ್ಸವವು ರಥ ಬೀದಿಯಲ್ಲಿ ಚಲಿಸಿ ಅಪಾರಭಕ್ತರಿಗೆ ದರ್ಶನ ನೀಡಿ ಸೂರ್ಯೋದಯಕ್ಕೂ ಮುನ್ನ ವಾಪಸ್‌ ಮೂಲ ಸ್ಥಾನಕ್ಕೆ ಬಂದು ನಿಂತಿತು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.