ಮೇಲುಕೋಟೆಯಲ್ಲಿ ಶ್ರೀಕೃಷ್ಣರಾಜಮುಡಿ ಉತ್ಸವ
Team Udayavani, Jul 13, 2020, 11:13 AM IST
ಮೇಲುಕೋಟೆ: ರಾಜ್ಯದಲ್ಲಿ ಕೋವಿಡ್- 19 ಪರಿಣಾಮ ಲಾಕ್ಡೌನ್ನಿಂದ ಭಾನುವಾರ ಸ್ತಬ್ಧವಾಗಿದ್ದರೆ, ಮೇಲುಕೋಟೆಯಲ್ಲಿ ಶ್ರೀ ಚೆಲುವನಾರಾಯಣಸ್ವಾಮಿಗೆ ಶ್ರೀಕೃಷ್ಣ ರಾಜ ಮುಡಿ ಉತ್ಸವ ಶಾಸ್ತ್ರೋಕ್ತವಾಗಿ ನೆರವೇರಿತು.
ದೇವಾಲಯದ ಒಳಪ್ರಾಕಾರದಲ್ಲಿ ನಡೆದ ಉತ್ಸವದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮಾತ್ರ ಭಾಗವಹಿಸಿದ್ದರು. ಶೀಘ್ರ ಕೋವಿಡ್ ಮುಕ್ತವಾಗಿ ನಾಡು ಸುಭೀಕ್ಷವಾಗಲಿ ಎಂದು ಪ್ರಾರ್ಥಿಸಿ, ಸ್ವಾಮೀಯ ಉತ್ಸವಕ್ಕೆ ಚಾಲನೆ ನೀಡಲಾಯಿತು. ಭಾನುವಾರ ಸಂಜೆ 6.30 ಗಂಟೆಗೆ ಆರಂಭವಾದ ಉತ್ಸವ ಮಂಗಳವಾದ್ಯ ಮತ್ತು ದಿವ್ಯಪ್ರಬಂಧ ಪಾರಾಯಣದೊಂದಿಗೆ ಒಳಪ್ರಕಾರದಲ್ಲಿ ನೆರವೇರಿತು. ಶನಿವಾರವೇ ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದು ಪರಿಶೀಲಿಸಿದ್ದ ವಜ್ರಖಚಿತ ಶ್ರೀಕೃಷ್ಣರಾಜ ಮುಡಿ ಕಿರೀಟವನ್ನು ಕೈ ಬೊಕ್ಕಸದಿಂದ ತೆಗೆದು ಶ್ರೀದೇವಿ ಭೂ ದೇವಿಯರೊಂದಿಗೆ ಗರುಡಾ ರೂಢನಾಗಿ ಅಲಂಕಾರಗೊಂಡ ಚೆಲುವ ನಾರಾಯಣ ಸ್ವಾಮಿಗೆ ತೊಡಿಸಲಾಯಿತು. ಗರುಡದೇವನ ಉತ್ಸವವನ್ನು ನಡೆಸಿದ ನಂತರ ಉಪವಿಭಾಗಧಿಕಾರಿ ಶಿವಾನಂದ ಮೂರ್ತಿ ಸಮಕ್ಷಮ ಸ್ವಾಮಿಗೆ ಮಂಗಳಾರತಿ ನೆರವೇರಿಸಿ, ಉತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯದ ಹೊರಭಾಗದಲ್ಲಿ ಉತ್ಸವ ನಡೆಸಲು ಅನುಮತಿಯಿಲ್ಲದ ಕಾರಣ ವೈರಮುಡಿ ಕಿರೀಟಧಾರಣೆಯಾಗುವ ಆಚಾರ್ಯ ರಾಮಾನುಜರ ಸನ್ನಿಧಿಯ ಆವರಣದಲ್ಲೇ ಸ್ವಾಮಿಗೆ ಅಲಂಕಾರ ಮಾಡಿ, ಉತ್ಸವ ಮಾಡಲಾಯಿತು.
ಹತ್ತುದಿನಗಳ ಕಾಲ ಉತ್ಸವ: ಮೈಸೂರು ದೊರೆ ಮುಮ್ಮುಡಿ ಶ್ರೀಕೃಷ್ಣರಾಜ ಒಡೆಯರ್ ಭಕ್ತಿಪೂರ್ವಕವಾಗಿ ವಜ್ರಖಚಿತ ಕೃಷ್ಣರಾಜಮುಡಿ ಹಾಗೂ ಮೈಸೂರು ಲಾಂಛನ ಗಂಡುಬೇರುಂಡ ಪದಕವನ್ನು ಸಮರ್ಪಿಸಿ, ಆಷಾಡದಲ್ಲಿ ತಮ್ಮದೇ ಹೆಸರಲ್ಲಿ ಬ್ರಹ್ಮೋತ್ಸವ ಆರಂಭಿಸಿದ್ದರು. ಪ್ರತಿವರ್ಷ ಆಷಾಡ ಬಹುಳ ದ್ವಿತೀಯದಂದು ಮಹಾಭಿಷೇಕದೊಂದಿಗೆ ಆರಂಭವಾಗುವ ಉತ್ಸವ ಹತ್ತುದಿನಗಳ ಕಾಲ ನಡೆಯಲಿದೆ. ಒಡೆಯರ್ ಆಶಯ ಅಂದಿ ನಿಂದ ಅನೂಚಾನವಾಗಿ ನಡೆದ ಬರುತ್ತಿರುವ ಕೃಷ್ಣರಾಜಮುಡಿ ಬ್ರಹ್ಮೋತ್ಸವ ಕೋವಿಡ್ ನಡುವೆಯೂ ನಡೆದದ್ದು ವಿಶೇಷವಾಗಿದೆ. ಈ ವರ್ಷ ವೈರಮುಡಿ ಜಾತ್ರಾಮಹೋತ್ಸವ ಮುಂದೂಡಿಕೆಯಾಗಿದ್ದರೂ, ಕೃಷ್ಣರಾಜಮುಡಿ ಬ್ರಹ್ಮೋತ್ಸವ ಸರಳವಾಗಿಯಾದರೂ ನಡೆದದ್ದು, ಭಕ್ತರಾದ ಮಹಾರಾಜರ ಮನಸ್ಸಿನ ಪರಿಶುದ್ಧ ಮತ್ತು ನಿಷ್ಕಲ್ಮಶ ಭಕ್ತಿಗೆ ಸಾಕ್ಷಿಯಾಗುತ್ತದೆ.
ಚೆಲುವನಾರಾಯಣ ಸ್ವಾಮಿ ಖಂಡಿತ ನಾಡಿಗೆ ಅಂಟಿದ ಕೋವಿಡ್ದಿಂದ ಭಕ್ತರನ್ನು ಪಾರುಮಾಡುತ್ತಾನೆ ಎಂದು ದೇವಾಲಯದ ಸ್ಥಾನೀಕರು ಭಕ್ತಿಭಾವ ಪ್ರದರ್ಶಿಸಿದರು. ಬ್ರಹ್ಮೋತ್ಸವ 17ರವರೆಗೆ ನಡೆಯಲಿದ್ದು, ಕೃಷ್ಣರಾಜಮುಡಿ ಕಿರೀಟವನ್ನು ಒಂದುವಾರ ಕಾಲ ಪ್ರತಿ ಸಂಜೆ ಸ್ವಾಮಿಯನ್ನು ಅಲಂಕರಿಸಲಿದೆ. ಪಾಂಡವಪುರ ತಹಶೀಲ್ದಾರ್ ಪ್ರಮೋದ್ ಪಾಟೀಲ್, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ನಂಜೇಗೌಡ ಮತ್ತು ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ