ಹಳ್ಳಿ ದಸರಾಗೆ ಶ್ರೀನಿವಾಸ ಅಗ್ರಹಾರ ಸಜ್ಜು

ಪ್ರವಾಸಿಗರಿಗೆ ಎತ್ತಿನ ಗಾಡಿಗಳಲ್ಲಿ ಜಾಲಿ ರೈಡ್‌

Team Udayavani, Sep 30, 2019, 4:21 PM IST

MANDYA-TDY-2

ಮಂಡ್ಯ: ಅ.3 ರಿಂದ ಮೂರು ದಿನಗಳ ಕಾಲ ನಡೆಯುವ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಪ್ರಯುಕ್ತ ಹಳ್ಳಿ ದಸರಾಗೆ ಆಯ್ಕೆ ಮಾಡಲಾಗಿರುವ ಶ್ರೀನಿವಾಸ ಅಗ್ರಹಾರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ.

ಭತ್ತ ನಾಟಿ ಹಾಗೂ ರಾಗಿ ಬಿತ್ತನೆಗೆ ಜಮೀನುಗಳನ್ನು ಆಯ್ಕೆ ಮಾಡಲಾಗಿದೆ. ಪ್ರವಾಸಿಗರು ಗ್ರಾಮೀಣ ಶೈಲಿಯ ಸಸ್ಯಾಹಾರಿ ಹಾಗೂ ಮಾಂಸಾಹಾರಿ ಭೋಜನ ಸವಿಯಲು 16 ಕಂಬಗಳ ಮೂರು ಮನೆಗಳನ್ನು ಆಯ್ಕೆ ಮಾಡಲಾಗಿದೆ. ಶ್ರೀನಿವಾಸ ಅಗ್ರಹಾರದಿಂದ ಶ್ರೀ ನಿಮಿಷಾಂಭ ದೇವಸ್ಥಾನ, ಕರೀಘಟ್ಟ ಹಾಗೂ ಶ್ರೀರಂಗನಾಥ ದೇವಸ್ಥಾನದವರೆಗೆ ಪ್ರವಾಸಿಗರು ಸಂಚರಿಸಲು ಅನುಕೂಲವಾಗುವಂತೆ 20 ಎತ್ತಿನ ಗಾಡಿಗಳನ್ನು ಸಜ್ಜುಗೊಳಿಸಲಾಗಿದೆ.

ಪ್ರವಾಸಿಗರಿಗೆ ರಂಜನೆ: ಶ್ರೀರಂಗಪಟ್ಟಣ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಎತ್ತಿನ ಗಾಡಿಯಲ್ಲಿ ಜಾಲಿ ರೈಡ್‌ ನಡೆಸುವುದಕ್ಕೆ ಈ ಬಾರಿಯ ದಸರೆಯಲ್ಲಿ ಮುಕ್ತ ಅವಕಾಶ ಕಲ್ಪಿಸಿದೆ. ಎತ್ತುಗಳ ಕೊರಳಿಗೆ ಗಂಟೆ ಕಟ್ಟಿ, ಎತ್ತಿನ ಗಾಡಿಯನ್ನು ಬಾಳೆ ಕಂದು, ಮಾವಿನ ಸೊಪ್ಪು, ಹೂವು, ಬಲೂನ್‌ಗಳಿಂದ ಅಲಂಕರಿಸಿ ಪ್ರವಾಸಿಗರನ್ನು ಅದರೊಳಗೆ ಕೂರಿಸಿಕೊಂಡು ಸಂಚರಿಸಲು ವ್ಯವಸ್ಥೆ ಮಾಡಿದೆ.

ಶ್ರೀನಿವಾಸ ಅಗ್ರಹಾರದಿಂದ ಶ್ರೀನಿಮಿಷಾಂಬ ದೇಗುಲ, ಕರೀಘಟ್ಟ ಹಾಗೂ ಶ್ರೀರಂಗನಾಥ ಸ್ವಾಮಿ ದೇವಾಲಯದವರೆಗೆ ಎತ್ತಿನಗಾಡಿಯಲ್ಲಿ ಕರೆದೊಯ್ಯಲಾಗುವುದು. ಒಂದೊಂದು ಸ್ಥಳಕ್ಕೆ ಒಂದೊಂದು ರೀತಿಯ ದರ ನಿಗದಿಪಡಿಸಲಾಗಿರುತ್ತದೆ. ಇದರ ಅನುಭವ ಪಡೆಯಲಿಚ್ಚಿಸುವವರು ಹಣ ಪಾವತಿಸಿ ಸಂಚರಿಸಬಹುದು. ಪ್ರವಾಸಿಗರನ್ನು ಹಳ್ಳಿ ದಸರಾದೊಂದಿಗೆ ತೊಡಗಿಸಿಕೊಳ್ಳುವುದು ಇದರ ಹಿಂದಿನ ಪ್ರಮುಖ ಉದ್ದೇಶವಾಗಿದೆ. ಶ್ರೀನಿವಾಸ ಅಗ್ರಹಾರದಿಂದ ಹೊರಡುವ ಸಂಚಾರದ ದಾರಿಯುದ್ದಕ್ಕೂ ಮನೆಗಳ ಎದುರು ಸಗಣಿ ನೀರು ಹಾಕಿ, ಹಾದಿಯನ್ನು ರಂಗೋಲಿಗಳಿಂದ ಸಿಂಗರಿಸಿ ಮೆರುಗು ನೀಡಲಾಗುವುದು.

ಗ್ರಾಮೀಣ ಶೈಲಿಯ ಆಹಾರ ಮೇಳ: ಹಳ್ಳಿ ದಸರಾದಲ್ಲಿ ಅಪ್ಪಟ ಹಳ್ಳಿ ಸೊಗಡಿನ ಆಹಾರವನ್ನು ಹೊರರಾಜ್ಯ ಹಾಗೂ ವಿದೇಶದಿಂದ ಬರುವ ಪ್ರವಾಸಿಗರಿಗೆ ಪರಿಚಯಿಸಲಾಗುತ್ತಿದೆ. ಇದಕ್ಕಾಗಿ 16 ಕಂಬಗಳ ಮೂರು ಮನೆಗಳನ್ನು ಆಯ್ಕೆ ಮಾಡಲಾಗಿದೆ. ರಾಗಿ ಮುದ್ದೆ, ಉಪ್ಪೆಸರು, ಬಸ್ಸಾರು, ಸೊಪ್ಪಿನ ಸಾರು, ತರಕಾರಿ ಸಾಂಬರು, ಮೊಳಕೆ ಕಾಳು ಸಾರು, ಕಳಲೆ ಸಾಂಬಾರು, ಕಡಲೆಕಾಳು, ಹೆಸರುಕಾಳು,ಹುರಳಿಕಾಳುಗಳನ್ನೊಳಗೊಂಡ ಸಾಂಬಾರು, ಅವರೆಕಾಳು ಗೊಜ್ಜು, ಕಡಲೆಕಾಳು ಗುಗ್ಗರಿ, ಮೊಸರು, ಮಜ್ಜಿಗೆ, ಅನ್ನ ಸೇರಿದಂತೆ ನಾನಾ ಮಾದರಿಯ ತಿನಿಸುಗಳನ್ನು ತಯಾರಿಸಿ ನೀಡಲುಸಿದ್ಧತೆ ನಡೆಸಲಾಗಿದೆ.

ಹಳ್ಳಿ ಶೈಲಿಯ ಮಾಂಸಾಹಾರಿ ತಿನಿಸುಗಳಿಗೂ ಅವಕಾಶ ದೊರಕಿಸಿದ್ದು, ನಾಟಿಕೋಳಿ ಸಾರು, ಮುದ್ದೆ, ತಲೆಮಾಂಸದ ಸಾರು, ಕಾಲ್‌ಸೂಪ್‌, ಮಾಂಸದ ಸಾರು, ಈರುಳ್ಳಿ-ಬೆಳ್ಳುಳ್ಳಿ ಮಸಾಲೆಯೊಂದಿಗೆ ಹುರಿದ ಮಾಂಸ, ಬಿರಿಯಾನಿ, ಬೋಟಿಗೊಜ್ಜು, ಪಲಾವ್‌, ಚಾಪ್ಸ್‌, ಮೀನು ಸಾಂಬಾರು, ಬೇಯಿಸಿದ ನಾಟಿಕೋಳಿ ಮೊಟ್ಟೆ ಸೇರಿದಂತೆ ಹಲವು ಮಾದರಿಗಳಲ್ಲಿ ರುಚಿಯಾದ ಭೋಜನ ಸಿದ್ಧಪಡಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಸ್ಯಾಹಾರಿ ಹಾಗೂ ಮಾಂಸಾಹಾರಿ ಭೋಜನ ಪ್ರತ್ಯೇಕ ಮನೆಗಳಲ್ಲಿ ತಯಾರಿಸಲಾಗುತ್ತದೆ. ಒಂದೊಂದು ಊಟಕ್ಕೂ ಒಂದೊಂದು ರೀತಿಯ ಬೆಲೆ ನಿಗದಿಪಡಿಸಿದ್ದು, ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರು ಅಪ್ಪಟ ಗ್ರಾಮೀಣ ಶೈಲಿಯ ತಿನಿಸುಗಳ ಸವಿಯನ್ನು ಸವಿಯಬಹುದು. ನೆಲದ ಮೇಲೆ ಚಾಪೆ ಹಾಸಿ ಅದರ ಮೇಲೆ ಕುಳಿತು ಊಟ ಮಾಡುವ ಅನುಭವ ಪ್ರವಾಸಿಗರಿಗೆ ದೊರಕಲಿದೆ.

ಭತ್ತ ನಾಟಿ, ರಾಗಿ ಬಿತ್ತನೆ ವ್ಯವಸ್ಥೆ: ಹೊರಗಿನಿಂದ ಬರುವ ಪ್ರವಾಸಿಗರಿಗೆ ಭತ್ತ ನಾಟಿ, ರಾಗಿ ಬಿತ್ತನೆ ಮಾಡುವುದಕ್ಕೂ ಅವಕಾಶ ಮಾಡಿಕೊಡಲಾಗುವುದು. ಇದಕ್ಕಾಗಿ ಜಮೀನುಗಳನ್ನು ಗುರುತಿಸಿದ್ದು, ಭತ್ತ ನಾಟಿ ಮಾಡಲು ಇಚ್ಚಿಸುವವರು ಗ್ರಾಮೀಣ ಶೈಲಿಯ ಬಟ್ಟೆ ತೊಟ್ಟು ಕೆಸರುಗದ್ದೆಗೆ ಇಳಿದು ನಾಟಿ ಮಾಡಬಹುದು.ರಾಗಿ ಹೇಗೆ ಬಿತ್ತನೆ ಮಾಡುವರು ಎನ್ನುವುದನ್ನು ಸ್ವತಃ ತಾವೇ ಅನುಭವ ಪಡೆಯುಬಹುದು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.