ರಥಸಪ್ತಮಿಯಂದು ಶ್ರೀರಂಗನಾಥಸ್ವಾಮಿ ರಥೋತ್ಸವ
Team Udayavani, Jan 27, 2023, 12:37 PM IST
ಶ್ರೀರಂಗಪಟ್ಟಣ: ರಥಸಪ್ತಮಿ ಅಂಗವಾಗಿ ಐತಿಹಾಸಿಕ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ಜ.28ರಂದು ವೈಭವಯುತವಾಗಿ ನಡೆಯಲಿದೆ.
ಶನಿವಾರ ಮುಂಜಾನೆ ಸೂರ್ಯಉದಯಕ್ಕೂ ಮುನ್ನ ದೇಗುಲದಲ್ಲಿನ ಸೂರ್ಯ ಮಂಡಲ, ಗಜಲಕ್ಷ್ಮೀ ರಥಗಳು ಅಲಂಕೃತಗೊಂಡು, ದೇವರ ಅನುಷ್ಠಾನದ ಬಳಿಕ ಪೂಜೆಗೆ ಒಳಪಟ್ಟುನಂತರ ಪಟ್ಟಣದ ರಾಜಬೀದಿ ಮೂಲಕ ಪಟ್ಟಣದ ಮುಖ್ಯಪೇಟೆಯಲ್ಲಿ ಭವ್ಯರಥಗಳು ಸಂಚರಿಸಲಿದೆ.
ಭಕ್ತರು ರಸ್ತೆಯ ಬದಿ ನಿಂತು ಹಣ್ಣು, ಕಾಯಿ ಹೊಡೆದು ರಥಕ್ಕೆ ಪೂಜೆಸಲ್ಲಿಸಲಿದ್ದಾರೆ. ಮಧ್ಯಾಹ್ನ ವೇದಮಂತ್ರ ಪಠಣೆಯೊಂದಿಗೆ ಪ್ರಧಾನ ಅರ್ಚಕ ವಿಜಯಸಾರಥಿ ನೇತೃತ್ವದಲ್ಲಿ ವಜ್ರ ವೈಡೂ ರ್ಯ ರತ್ನ ಖಚಿತ ಆಭರಣಗಳಿಂದ ಅಲಂಕೃತಗೊಂಡ ಶ್ರೀರಂಗನಾಯಕಿ ಅಮ್ಮನವರ ಸಮೇತವಿರುವ ಶ್ರೀರಂಗನ ಉತ್ಸವ ಮೂರ್ತಿಯನ್ನು ಅಲಂತಗೊಂಡು ರಥೋತ್ಸವದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ದೇವಾಲಯದಲ್ಲಿ ಶ್ರೀರಂಗನಿಗೆ ವಿಶೇಷಪೂಜಾ ಅಲಂಕಾರಗಳ ಬಳಿಕ ಬ್ರಹ್ಮರಥೋತ್ಸವಕ್ಕೆ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ ಪೂಜೆಸಲ್ಲಿಸಿದ ಬಳಿಕ ದೇಗುಲದ ಸುತ್ತಲೂ 1 ಸುತ್ತು ರಥೋತ್ಸವದ ಮೆರವಣಿಗೆ ಮಾಡಲಾಗುತ್ತದೆ. ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಮುಖ್ಯ ಅರ್ಚಕ ವಿಜಯ ಸಾರಥಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್