ಯಂತ್ರ ಖರೀದಿ ಬಗ್ಗೆ ಪುರಸಭೆ ಅಧ್ಯಕ್ಷರ ಗಮನಕ್ಕೆ ತನ್ನಿ


Team Udayavani, Feb 27, 2021, 1:45 PM IST

ಯಂತ್ರ ಖರೀದಿ ಬಗ್ಗೆ ಪುರಸಭೆ ಅಧ್ಯಕ್ಷರ ಗಮನಕ್ಕೆ ತನ್ನಿ

ಶ್ರೀರಂಗಪಟ್ಟಣ: ಪುರಸಭೆಗೆ ಸಂಬಂಧಿಸಿದ ಯಾವುದೇ ಯಂತ್ರ ಖರೀದಿ ಹಾಗೂ ದುರಸ್ಥಿ ವೇಳೆ ಅಧ್ಯಕ್ಷರು, ಉಪಾಧ್ಯಕ್ಷರ ಗಮನಕ್ಕೆ ತಂದು ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು.

ಪುರಸಭೆ ಅಧ್ಯಕ್ಷೆ ನಿರ್ಮಲಾ ವೇಣುಗೋಪಾಲ್‌ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಜಮೆ-ಖರ್ಚು ವಿವರ ಕುರಿತು ನಡೆದ ಸಭೆಯಲ್ಲಿ ಈ ವಿಷಯ ಚರ್ಚೆಯಾಯಿತು.

ಖರ್ಚು ಮಾಡಿದ್ದಕ್ಕೆ ವಿರೋಧ: ಪುರಸಭೆ ವ್ಯಾಪ್ತಿಯ ಕಳೆದ 5 ತಿಂಗಳಲ್ಲಿ ಮೋಟಾರ್‌ ದುರಸ್ಥಿಗಾಗಿ 5,54,359 ರೂ. ಖರ್ಚಾಗಿರುವುದನ್ನು ಪ್ರಶ್ನಿಸಿದ ಗಂಜಾಂ ಶಿವು ಹಾಗೂ ಎಂ.ಎಲ್‌.ದಿನೇಶ್‌ ವಿರೋಧ ವ್ಯಕ್ತಪಡಿಸಿದರು.

ಸುಂಕ ವಸೂಲಿ ಅಕ್ರಮ: ನೆಲ, ವಾಣಿಜ್ಯ ಕಟ್ಟಡಗಳ ಬಾಡಿಗೆ, ಪಾರ್ಕಿಂಗ್‌ ಹಾಗೂ ಪಿಂಡಪ್ರಧಾನ ಶುಲ್ಕ ವಸೂಲಾತಿ ಲೆಕ್ಕದಲ್ಲಿ ಸಿಬ್ಬಂದಿ ಅಕ್ರಮವೆಸಗಿದ್ದಾರೆ ಎಂದು ಸದಸ್ಯ ಗಂಜಾಂ ಶಿವು ನೇರವಾಗಿ ಆರೋಪಿಸಿದರು. ಧ್ವನಿಗೂಡಿಸಿದ ಎಸ್‌.ನಂದೀಶ್‌, ನರಸಿಂಹೇಗೌಡ ಕೆಲವೆಡೆ ನಕಲಿ ಬಿಲ್‌ ಸೃಷ್ಟಿಸಿ ಹಣ ವಸೂಲಿ ಮಾಡಲಾಗುತ್ತಿದೆ. ಜತೆಗೆ ಬಿಲ್‌ ವಸೂಲಾತಿಗೆ ನೇಮಿಸಿರುವ ಸಿಬ್ಬಂದಿ ಅವರ ಅನುಕೂಲಕ್ಕೆ ತಕ್ಕಂತೆ ಮತ್ತೂಬ್ಬರನ್ನು ನೇಮಿಸಿಕೊಂಡು ಪುರಸಭೆ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿದ್ದಾರೆಂದು ದೂರಿದರು.

ಈ ವೇಳೆ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಉಪಾಧ್ಯಕ್ಷ ಎಸ್‌ .ಪ್ರಕಾಶ್‌ ಸಭೆಯನ್ನು ಶಾಂತಗೊಳಿಸಿ, ಬಿಲ್‌ ನೀಡಲಾಗುವ ಯಂತ್ರದಲ್ಲಿ ಒಂದು ವರ್ಷದ ಲೆಕ್ಕ ಸಿಗಲಿದೆ. ಅಧಿಕಾರಿಗಳೇಕೆ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರಲ್ಲದೇ ಕೂಡಲೇ ಸಿಬ್ಬಂದಿಯನ್ನು ಬದಲಿಸಿ ಪಾರದರ್ಶಕ ಶುಲ್ಕ ವಸೂಲಾತಿಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ವಕೀಲರ ಬದಲಾವಣೆಗೆ ಪರ-ವಿರೋಧ: ಪುರಸಭೆಗೆ ನಿಯೋಜನೆಗೊಂಡಿದ್ದ ವಕೀಲರು ಮರಣ ಹೊಂದಿರುವ ಹಿನ್ನೆಲೆಯಲ್ಲಿ ಬದಲಿ ವಕೀಲರ ನೇಮಕಕ್ಕೆ ಮೂವರು ವಕೀಲರ ಹೆಸರನ್ನು ಉಪಾಧ್ಯಕ್ಷ ಎಸ್‌.ಪ್ರಕಾಶ್‌ ಸೂಚಿಸಿದ ವೇಳೆ ಎಸ್‌ .ನಂದೀಶ್‌ ಆಕ್ಷೇಪ ವ್ಯಕ್ತಪಡಿಸಿ, ವಕೀಲರ ಬದಲಾವಣೆ ಕಾನೂನಿನ ಪ್ರಕಾರವಾಗಿಯೇಆಗಬೇಕು. ಪತ್ರಿಕಾ ಪ್ರಕಟಣೆ ಹಾಗೂ ವಕೀಲರಸಂಘಕ್ಕೆ ಪ್ರಕಟಣೆ ಹೊರಡಿಸಿ ಸರ್ವ ಸದಸ್ಯರು ಅಭಿಪ್ರಾಯದ ಮೇರೆಗೆ ನುರಿತ ವಕೀಲರನ್ನು ಆಯ್ಕೆ ಮಾಡುವಂತೆ ಒತ್ತಾಯಿಸಿದರು. ಇವರಿಗೆಎಂ.ನಂದೀಶ್‌, ಎಂ.ಎಲ್‌.ದಿನೇಶ್‌ ಧ್ವನಿಗೂಡಿಸಿ ಕಾನೂನಿನ ಚೌಕಟ್ಟಿನಲ್ಲಿ ವಕೀಲರನ್ನು ನೇಮಿಸಲು ಸಲಹೆ ನೀಡಿದರು.

ಒತ್ತಾಯ: ಅಂಗನವಾಡಿ ವಿಚಾರದಲ್ಲಿ 23 ವಾರ್ಡ್‌ ಮಕ್ಕಳಿಗೆ ಆಯಾ ವಾರ್ಡ್‌ಗೆ ಸಂಬಂಧಿಸಿದಂತೆಅಂಗನವಾಡಿ ನಿರ್ಮಿಸಿ ಅನುಕೂಲ ಮಾಡಿಕೊಡಲು 14ನೇ ವಾರ್ಡ್‌ನ ಸದಸ್ಯೆ ವಸಂತಕುಮಾರಿ ಒತ್ತಾಯಿಸಿದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ಸದಸ್ಯರಾದ ಕೃಷ್ಣಪ್ಪ, ಶ್ರೀನಿವಾಸ್‌, ನಿಂಗರಾಜು, ಚೈತ್ರಾ, ಪೂರ್ಣಿಮಾ, ರಾಧಾ ಶ್ರೀಕಂಠು ಸರ್ವ ಸದಸ್ಯರು, ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.