ಶ್ರೀರಂಗಪಟ್ಟಣ: ಪ್ರತ್ಯೇಕ ಘಟನೆಯಲ್ಲಿ 3 ಸಾವು
Team Udayavani, Nov 28, 2021, 5:32 PM IST
ಶ್ರೀರಂಗಪಟ್ಟಣ: ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ತಾಲೂ ಕಿನ ಗಂಜಾಮ್ ಬಳಿ ಇರುವ ಕಾವೇರಿ ಸಂಗಮದಲ್ಲಿನ ಕಾವೇರಿ ನದಿಯಲ್ಲಿ ಈಜಲು ಹೋಗಿ ನದಿಯಲ್ಲಿ ಕೊಚ್ಚಿ ಹೊಗಿರುವ ಘಟನೆ ನಡೆದಿದೆ.
ಬೆಂ ಳೂರು ಮೂಲದ ಮಂಜುನಾಥ್(30) ಕೊಚ್ಚಿ ಹೋಗಿರುವ ಯುವಕನಾಗಿದ್ದು, ನಿನ್ನೆ ಸ್ನೇಹಿತರ ಜೊತೆ ಟಿಟಿ ವಾಹನದಲ್ಲಿ ಬಂದಿದ್ದ ಈತ ನದಿಯಲ್ಲಿ ಈಜಲು
ಹೋಗಿದ್ದು,ನೀರು ಹೆಚ್ಚಿದ ಕಾರಣಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಸ್ಥಳೀ ಯರು ಶವದ ಹುಡುಕಾಟ ನಡೆಸಿದ್ರು, ಶವ ಪತ್ತೆಯಾಗಿಲ್ಲ ಪೊಲೀಸರು ಸೇರಿ ದಂತೆ ಅಗ್ನಿಶಾಮಕ ಠಾಣೆ ಪೊಲೀಸ ರು ಶವದ ಹುಡುಕಾಟ ನಡೆಸಿದ್ದಾರೆ.
ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವೇರಿ ನದಿಗೆ ಬಿದ್ದು ಗೃಹಣಿ ಆತ್ಮಹತ್ಯೆ:
ಶ್ರೀರಂಗಪಟ್ಟಣ : ಪಟ್ಟಣದ ವೆಲ್ಲೆಸ್ಲಿ ಸೇತುವೆ ಮೇಲಿಂದ ಕಾವೇರಿ ನದಿಗೆ ಹಾರಿ ಗೃಹಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರಿನ ನಿವಾಸಿ ಮಧು ಎಂಬುವರ ಪತ್ನಿ ರಕ್ಷಿತ(31)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯಾಗಿದ್ದು, ಸ್ಥಳೀಯರು ಆಕೆಯನ್ನು ರಕ್ಷಣಿಸಲು ಮುಂದಾದರೂ ಆಕೆ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ:
ಶ್ರೀರಂಗಪಟ್ಟಣ : ಜಮೀನನಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತಾಲೂಕಿನ ರಾಂಪುರ ಗ್ರಾಮದ ರೈತನೋರ್ವನ ಜಮೀನಿನಲ್ಲಿ ಮೈಸೂರಿನ ಗೋಕುಲಂ ನಿವಾಸಿ ಸತೀಶ್(45) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ