ಕಿಡ್ನಿ ವೈಫ‌ಲ್ಯ ರೋಗಿಗಳ ಪಾಲಿನ ಸಂಜೀವಿನಿ

ಶ್ರೀರಂಗಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಿತ್ಯ 12 ರೋಗಿಗಳಿಗೆ ಉಚಿತ ಮೂತ್ರಪಿಂಡ ಡಯಾಲಿಸಿಸ್‌

Team Udayavani, Mar 2, 2020, 5:50 PM IST

0

ಶ್ರೀರಂಗಪಟ್ಟಣ: ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹತ್ತು, ಹಲವು ರೋಗಗಳಿಗೆ ಉಚಿತ ಯಶಸ್ವಿ ಚಿಕಿತ್ಸೆ ಲಭ್ಯ ವಿದ್ದು ಮೂತ್ರಪಿಂಡ ವೈಫಲ್ಯಕ್ಕೆ ತುತ್ತಾಗಿರುವ ರೋಗಿಗಳ ಪಾಲಿಗೆ ಶ್ರೀರಂಗಪಟ್ಟಣ ಆಸ್ಪತ್ರೆ ಸಂಜೀವಿನಿಯಾಗಿದೆ.

ಮೂತ್ರಪಿಂಡ ವೈಫಲ್ಯಕ್ಕೆ ತುತ್ತಾಗಿರುವ ರೋಗಿಗಳಿಗೆ ಡಯಾಲಿಸಿಸ್‌ ಮಾಡಲು ಆಸ್ಪತ್ರೆಯಲ್ಲಿ ಒಟ್ಟು 4 ಯಂತ್ರಗಳಿದ್ದು ನಿತ್ಯ 12 ಮಂದಿ ರೋಗಿಗಳಿಗೆ ಉಚಿತವಾಗಿ ಮೂತ್ರಪಿಂಡ ಡಯಾಲಿಸಿಸ್‌ ನಡೆಸಲಾಗುತ್ತಿದೆ. ಡಯಾಲಿಸಿಸ್‌ ಕೇಂದ್ರದಲ್ಲಿ 4 ಮಂದಿ ಟೆಕ್ನಿಷಿಯನ್‌, ಒಬ್ಬರು ಸ್ಟಾಫ್‌ ನರ್ಸ್‌, ಇಬ್ಬರು ಡಿ ಗ್ರೂಫ್‌ ನೌಕರರನ್ನು ನೇಮಕ ಮಾಡಲಾಗಿದೆ.

ಎಚ್‌ಐವಿ ಪರೀಕ್ಷೆ ಕಡ್ಡಾಯ: ವಾರಕ್ಕೊಮ್ಮೆ ನೆಪ್ರೋಲಾಜಿಸ್ಟ್‌ ವಿಭಾಗದ ತಜ್ಞ ವೈದ್ಯರು ಡಯಾಲಿಸಿಸ್‌ ಮಾಡಿಸಿಕೊಳ್ಳುವ ರೋಗಿಗಳ ತಪಾಸಣೆ ನಡೆಸುತ್ತಾರೆ. ಡಯಾಲಿಸಿಸ್‌ಗೆ ಒಳಗಾಗುವ ರೋಗಿಗಳಿಗೆ ಅಗತ್ಯವಿರುವಾಗ ರಕ್ತ ಹೆಚ್ಚಳ ಮಾಡುವ ಯರಿತ್ರೋಪಯೋಟಿನ್‌ ಮತ್ತು ಐರನ್‌ ಸುಕ್ರೋಸ್‌ ಇಂಜೆಕ್ಷನ್‌ಗಳನ್ನು ನೀಡಲಾಗುತ್ತಿದೆ. ರೋಗಿಗಳಿಗೆ ಯಾವುದೇ ಸೊಂಕು ತಗಲದಂತೆ ಮುನ್ನೆಚ್ಚರಿಕೆಯಾಗಿ ಡಯಾಲಿಸಿಸ್‌ಗೆ ಒಳಗಾಗುವ ರೋಗಿಗಳ ಹೆಪಟೈಟಿಸ್‌ ಸಿ.ಬಿ ಹಾಗೂ ಎಚ್‌ಐವಿ ಪರೀಕ್ಷೆ ಕಡ್ಡಾಯವಾಗಿ ಮಾಡಲಾಗುತ್ತಿದೆ.

ನಾಲ್ಕು ಯಂತ್ರ ಕೊಡುಗೆ: ಸನ್‌ಪ್ಯೂರ್‌ ಅಡುಗೆ ಎಣ್ಣೆ ಕಾರ್ಖಾನೆ (ಎಂ.ಕೆ ಆಗ್ರೋಟೆಕ್‌ ಪ್ರವೇಟ್‌ ಲಿಮಿಟಿಡ್‌) 2 ಡಯಾಲಿಸಿಸ್‌ ಯಂತ್ರಗಳನ್ನು ಉಚಿತವಾಗಿ ನೀಡಿದೆ. ಬಿಎಸ್‌ಆರ್‌ ಹೆಲ್ತ್‌ ಅಂಡ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಸರಕಾರದ ವತಿಯಿಂದ ಎರಡು ಡಯಾಲಿಸಿಸ್‌ ಯಂತ್ರಗಳನ್ನು ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ.

ಎಪಿಎಲ್‌ ಕಾರ್ಡ್‌ನವರಿಗೂ ಉಚಿತ ಸೇವೆ: ಒಂದು ಯಂತ್ರದಿಂದ ನಿತ್ಯ ತಲಾ ಮೂರು ಮಂದಿಯಂತೆ 4 ಯಂತ್ರಗಳಿಂದ 12 ಮಂದಿಗೆ ನಿತ್ಯ ಡಯಾಲಿಸಿಸ್‌ ಮಾಡಲಾಗುತ್ತಿದೆ. ಎಪಿಎಲ್‌ ಹಾಗೂ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಎಲ್ಲಾ ರೋಗಿಗಳಿಗೂ ಉಚಿತವಾಗಿ ಡಯಾಲಿಸಿಸ್‌ ಮಾಡಲಾಗುತ್ತಿದೆ. ತಾಲೂಕು ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯದಿಂದ ರೋಗಿಗಳು ಮಾತ್ರವಲ್ಲದೇ ಸಾರ್ವಜನಿಕ ರಿಂದಲೂ ಆಸ್ಪತ್ರೆ ಮೆಚ್ಚುಗೆ ಗಳಿಸಿದೆ.

100 ಹಾಸಿಗೆಗಳುಳ್ಳ ಆಸ್ಪತ್ರೆ: ಒಟ್ಟು 100 ಹಾಸಿಗೆಯುಳ್ಳ ಆಸ್ಪತ್ರೆಯಲ್ಲಿ ನಿತ್ಯ 300 ರಿಂದ 400 ಮಂದಿ ವಿವಿಧ ಕಾಯಿಲೆಗಳಿಗೆ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಿತ್ಯ 15 ಮಂದಿ ರೋಗಿಗಳನ್ನು ಆಸ್ಪತ್ರೆಯಲ್ಲಿ ಅಡ್ಮಿಟ್‌ ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಮೊಳೆರೋಗ, ಅಪೆಂಡಿಸ್‌, ಹರ್ನಿಯಾ, ಗೆಡ್ಡೆ ತೆಗೆಯುವುದು. ಸಂತಾನ ಹರಣ ಚಿಕಿತ್ಸೆ, ಗರ್ಭಕೋಶ ಶಸ್ತ್ರ ಚಿಕಿತ್ಸೆ ನೀಡಲಾಗುತ್ತಿದೆ.

ತಿಂಗಳಿಗೆ 30 ಮಂದಿ ಮಹಿಳೆಯರು ಹೆರಿಗೆ ಮಾಡಿಸಿಕೊಳ್ಳಲು ದಾಖಲಾಗುತ್ತಾರೆ. ಇಎನ್‌ಟಿ ಶಸ್ತ್ರ ಚಿಕಿತ್ಸೆ, ಜತೆಗೆ 500 ಎಂಎ ಸಾಮರ್ಥ್ಯವುಳ್ಳ ಸಿಆರ್ಮ್ ಯಂತ್ರದ ಸಹಾಯದಿಂದ ಆಧುನಿಕ ಮೂಳೆ ಶಸ್ತ್ರಚಿಕಿತ್ಸೆ ಮಾಡಿ ರೋಗಿಗಳನ್ನು ಗುಣಪಡಿಸ ಲಾಗುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ರೋಗಿಗಳಿಗೆ ಉಚಿತ ರಕ್ತ, ಮೂತ್ರ, ಕಫ, ಎಕ್ಸರೇ ತಪಾಸಣೆ ಸೌಲಭ್ಯವಿದೆ.

24/7 ವೈದ್ಯರ ಸೇವೆ: 24 ಗಂಟೆಯೂ ವೈದ್ಯರ ಸೇವೆ ಲಭ್ಯವಿದ್ದು ರಾತ್ರಿ ವೇಳೆ ಆಸ್ಪತ್ರೆಗೆ ಬರುವ ರೋಗಿಗಳು ವೈದ್ಯರು ಅಪ್ಪಿತಪ್ಪಿ ಮಲಗಿದ್ದರೆ ಎಚ್ಚರಿಸುವ ಸಲುವಾಗಿ ಆಸ್ಪತ್ರೆ ಗೇಟ್‌ ಬಳಿ ಗಂಟೆ ವ್ಯವಸ್ಥೆ ಮಾಡಲಾಗಿದೆ. ಶ್ರೀರಂಗಪಟ್ಟಣ ಮಾತ್ರವಲ್ಲದೇ ಕೆ.ಆರ್‌.ಪೇಟೆ, ನಾಗಮಂಗಲ ಹಾಗೂ ಪಾಂಡವಪುರ ತಾಲೂಕಿನಿಂದಲೂ ರೋಗಿಗಳು ಬಂದು ಇಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 2018-19 ನೇ ಸಾಲಿನಲ್ಲಿ ಆಸ್ಪತ್ರೆಗೆ ರಾಜ್ಯ ಸರಕಾರ ನೀಡುವ ಕಾಯಕಲ್ಪ ಪ್ರಶಸ್ತಿ ಲಭಿಸಿದೆ.

12 ಮಂದಿಗೆ ಉಚಿತ ಡಯಾಲಿಸಿಸ್‌ :  ಆಸ್ಪತ್ರೆಯಲ್ಲಿ ಅನಸ್ತೇನಿಯಾ, ಜನರಲ್‌ ಸರ್ಜರಿ, ಇಎನ್‌ಟಿ, ಮಕ್ಕಳ ತಜ್ಞ, ಗರ್ಭಿಣಿ ಹಾಗೂ ಸ್ತ್ರೀ ರೋಗ ತಜ್ಞ, ಪಿಜಿಸಿಯನ್‌, ಚರ್ಮರೋಗ, ಕಣ್ಣು, ದಂತ, ಮೂಳೆ ರೋಗ ತಜ್ಞ ವೈದ್ಯರಿದ್ದಾರೆ. 4 ಡಯಾಲಿಸಿಸ್‌ ಯಂತ್ರಗಳಿದ್ದು ನಿತ್ಯ ಮೂತ್ರಪಿಂಡ ವಿಫಲವಾಗಿರುವ 12 ಮಂದಿಗೆ ಉಚಿತ ಡಯಾಲಿಸಿಸ್‌ ಮಾಡಲಾಗುತ್ತಿದೆ. 350 ರಿಂದ 400 ಹೊರ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಅಥವಾ 15 ಮಂದಿ ರೋಗಿಗಳು ನಿತ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗುತ್ತಾರೆ. ತಿಂಗಳಿಗೆ ಕನಿಷ್ಠ 25 ರೋಗಿಗಳಿಗೆ ಸರ್ಜರಿ ಮಾಡಿ, ಅಗತ್ಯ ಔಷಧಗಳನ್ನು ನೀಡಲಾಗುತ್ತಿದೆ. ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಆಸ್ಪತ್ರೆಯಲ್ಲಿ ಮಾಡುವ ಎಲ್ಲಾ ಸರ್ಜರಿಗಳನ್ನು ಉಚಿತವಾಗಿ ಮಾಡಲಾಗುತ್ತಿದೆ ಎಂದು ತಾಲೂಕು ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಮಾರುತಿ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಸ್ಟಾಪ್‌ ಹಾಗೂ ವೈದ್ಯರ ಸೇವೆ ತುಂಬಾ ಚೆನ್ನಾಗಿದೆ. ಇಲ್ಲಿ ಎರಡೂವರೆ ವರ್ಷದಿಂದ ಡಯಾಲಿಸಿಸ್‌ ಮಾಡಿಸುತ್ತಿದ್ದೇನೆ. ಮೊದಲು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ತಿಂಗಳಿಗೆ 16 ಸಾವಿರ ಖರ್ಚಾಗುತ್ತಿತ್ತು. ಜತೆಗೆ ಪ್ರಯಾಣಕ್ಕೆ ಹೆಚ್ಚು ಖರ್ಚಾಗುತ್ತಿತ್ತು. ಹೆಚ್ಚುವರಿಯಾಗಿ ಡಯಾಲಿಸಿಸ್‌ ಮಾಡಿಸಬೇಕಿದ್ದರೆ ದಿನಗಟ್ಟಲೆ ಕಾಯಬೇಕಿತ್ತು. ಅದು ತಪ್ಪಿದೆ, ಜತೆಗೆ ರಕ್ತ ಹೆಚ್ಚಳ ಮಾಡುವ ಇಂಜೆಕ್ಷನ್‌ನ್ನು ಡಯಾಲಿಸಿಸ್‌ ರೋಗಿಗಳಿಗೆ ಉಚಿತವಾಗಿ ಸಿಗುತ್ತಿದೆ.  –ಮಂಜುನಾಥ್‌, ಡಯಾಲಿಸಿಸ್‌ ರೋಗಿ

 

-ಗಂಜಾಂ ಮಂಜು

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.