ಶ್ರೀರಂಗಪಟ್ಟಣ: ಹನುಮ ಮಾಲಾಧಾರಿಗಳ ಯಾತ್ರೆ; ಜಾಮಿಯಾ ಮಸೀದಿ ಬಳಿ ಉದ್ವಿಗ್ನ ಪರಿಸ್ಥಿತಿ
ವಿವಾದಿತ ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಿದ್ದ ಪೊಲೀಸರು ...
Team Udayavani, Dec 4, 2022, 5:18 PM IST
ಮಂಡ್ಯ : ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಭಾನುವಾರ ನಡೆಯುತ್ತಿದ್ದ ವೇಳೆ ಜಾಮಿಯಾ ಮಸೀದಿ ಬಳಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
10.30 ಕ್ಕೆ ನಿಮಿಷಾಂಬ ದೇವಾಲಯದಿಂದ ಹೊರಟ ಸಂಕೀರ್ತನಾ ಯಾತ್ರೆ ಜಾಮಿಯಾ ಮಸೀದಿ ವೃತ್ತದ ಮೂಲಕ ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ತಲುಪಬೇಕಾಗಿದ್ದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸಾವಿರಾರು ಸಂಖ್ಯೆಯಲ್ಲಿದ್ದ ಹನುಮ ಮಾಲಾಧಾರಿಗಳಿಂದ ಮಸೀದಿ ಬಳಿ ಜೈ ಶ್ರೀರಾಮ್ ಘೋಷವಾಕ್ಯಗಳು ಮೊಳಗಿದ್ದು,ಮಸೀದಿ ಸುತ್ತ ಹಾಕಲಾಗಿದ್ದ ಬ್ಯಾರಿಕೇಡ್ ಮುರಿದು ಒಳಹೋಗಲು ಯತ್ನಿಸಲಾಗಿದೆ.
ಅಲ್ಲಿ ರಾಮ ಮಂದಿರ, ಇಲ್ಲಿ ಹನುಮ ಮಂದಿರ
ಸಂಕೀರ್ತನಾ ಯಾತ್ರೆ ಜಾಮಿಯಾ ಮಸೀದಿ ಎದುರು ಬರುತ್ತಿದ್ದಂತೆ ‘ಅಲ್ಲಿ ರಾಮ ಮಂದಿರ, ಇಲ್ಲಿ ಹನುಮ ಮಂದಿರ’ ಎಂಬ ಘೋಷಣೆಗಳು ಮೊಳಗಿದವು. ಹನುಮನ ಪಾದದ ಮೇಲಾಣೆ ಮಂದಿರವಿಲ್ಲೆ ಕಟ್ಟುವೇವು ಎಂದು ಹನುಮ ಮಾಲಾಧಾರಿಗಳು ಕೂಗಿದರು.
ಸ್ಥಳದಲ್ಲಿದ್ದ ಭಾರಿ ಸಂಖ್ಯೆಯ ಪೊಲೀಸರು ಹಿಂದೂ ಕಾರ್ಯಕರ್ತರನ್ನ ಒಳ ನುಗ್ಗದಂತೆ ತಡೆದರು. ಹನುಮ ಮಾಲಾಧಾರಿಗಳು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬ್ಯಾರಿಕೇಡ್ ಗಳ ಬಳಿಯೇ ಕುಳಿತ ಮಾಲಾಧಾರಿಗಳು ಮಂದಿರವಿಲ್ಲೇ ಕಟ್ಟುವೆವು ಎಂದು ಘೋಷಣೆಗಳನ್ನು ಮೊಳಗಿಸಿದರು.
ಮಸೀದಿ ಸುತ್ತ ಮುತ್ತ ಬ್ಯಾರಿಕೇಡ್ ಅಳವಡಿಸಿದ್ದ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಭದ್ರತೆಗಾಗಿ ಒಂದು ಸಾವಿರಕ್ಕು ಅಧಿಕ ಪೊಲೀಸರ ನೀಯೋಜನೆ ಮಾಡಲಾಗಿತ್ತು. 25 ಸಿಸಿ ಕ್ಯಾಮರಾಗಳ ಗಳನ್ನ ಅಳವಡಿಕೆ ಮಾಡಿ, ದ್ರೋಣ್ ಕಣ್ಗಾವಲು ಇಡಲಾಗಿತ್ತು. ಸಂಕೀರ್ತನಾ ಯಾತ್ರೆಯಲ್ಲಿ ಸಾವಿರಾರು ಹನುಮಮಾಲಾಧಾರಿಗಳು, ಹಲವು ಕಲಾತಂಡಗಳು ಭಾಗಿಯಾಗಿದ್ದವು.
ವಿವಾದಿತ ಪ್ರದೇಶಕ್ಕೆ ಮಂಡ್ಯ ಎಸ್ ಪಿ ಎನ್. ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ: ಆಕಾಂಕ್ಷಿಗಳಲ್ಲಿ ತಳಮಳ
ಹಿರಿಯ-ಕಿರಿಯ ಶಾಲೆಗಳ ವಿಲೀನ ಹತ್ತಿರದಲ್ಲಿರುವ ಶಾಲೆಗಳನ್ನು ಒಂದೆಡೆ ಸೇರಿಸಿ
ದಾವಣಗೆರೆಯಲ್ಲಿ ಕೇಸರಿ ಮಹಾಸಂಗಮ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ
ರಾಜ್ಯಕ್ಕೆ ಬಂಪರ್: ಬಜೆಟ್ನಲ್ಲಿ ನೈಋತ್ಯ ರೈಲ್ವೇಗೆ 9,200 ಕೋ.ರೂ. ಅನುದಾನ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ನಾದಿನಿಗೆ ದೈಹಿಕ, ವರದಕ್ಷಿಣೆ ಕಿರುಕುಳ: ಡ್ಯಾನ್ಸರ್ ಸ್ವಪ್ನ ಚೌಧರಿ, ಕುಟುಂಬದ ವಿರುದ್ಧ FIR
ಗುಪ್ತಚರ ಇಲಾಖೆ ನಿರ್ದೇಶಕರ ಮನೆಯಲ್ಲಿ ಸಿಆರ್ ಪಿಎಫ್ ಜವಾನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಅಡೆತಡೆಗಳ ದಾಟಿ ಗೆದ್ದ ‘ತನುಜಾ’
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ