20ರವರೆಗೆ ಶ್ರೀರಂಗಪಟ್ಟಣ ಪ್ರವಾಸಿ ತಾಣ ಪ್ರವೇಶ ನಿಷೇಧ
Team Udayavani, Mar 17, 2020, 5:45 PM IST
ಶ್ರೀರಂಗಪಟ್ಟಣ: ಕೊರೊನಾ ವೈರಸ್ ಮುಂಜಾಗ್ರತಾ ಕ್ರಮ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಾದ ಟಿಪ್ಪು ಬೇಸಿಗೆ ಅರಮನೆ, ದರಿಯಾ ದೌಲತ್ ಮತ್ತು ಟಿಪ್ಪು ಸಮಾಧಿ ಸ್ಥಳ, ಗುಂಬಸ್ಗೆ ಮಾ.16 ರಿಂದ 20ರ ವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್ ಎಂ.ವಿ.ರೂಪಾ ತಿಳಿಸಿದರು.
ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಕೆಆರ್ಎಸ್ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರವೇಶಕ್ಕೆ ನಿರ್ಬಂಧ ಹೇರಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ಶ್ರೀರಂಗಪಟ್ಟಣ ಪ್ರವಾಸಿ ತಾಣಗಳ ಬಳಿ ಕಂದಾಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಗೂ ಅರಿವು ಮೂಡಿಸುವ ಸಂಬಂಧ ಜಾಗೃತಿ ಕಾರ್ಯ ನಡೆಸಿ ಸ್ಥಳ ಪರಿಶೀಲನೆ ಮಾಡಿ ಪ್ರವಾಸಿ ತಾಣಗಳ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ದೇಶ ವಿದೇಶದಿಂದ ಶ್ರೀರಂಗಪಟ್ಟಣ ಪ್ರವಾ ಸಿಕ್ಕೆ ಪ್ರವಾಸಿಗರು ಹೆಚ್ಚಿನ ರೀತಿಯಲ್ಲಿ ಪ್ರತಿನಿತ್ಯ ಆಗಮಿಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳ ಪ್ರವೇಶ ನಿಷೇಧಿಸಿದರೆ ಪ್ರವಾಸಿಗರ ಸಂಖ್ಯೆ ಇಳಿಮುಖ ವಾಗಲಿದ್ದು ಇದರಿಂದ ಕೊರೊನಾ ವೈರಸ್ ತಡೆ ಗಟ್ಟಲು ಸಹಕಾರವಾದಂತಾಗುತ್ತದೆ ಎಂದರು.
ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ 1ರಿಂದ 9 ನೇ ತರಗತಿ ಶಾಲಾ ಮಕ್ಕಳಿಗೆ ರಜೆ ಘೋಷಿಸಿ ಮನೆಯಿಂದ ಮಕ್ಕಳು ಹೊರ ಬರದಂತೆ ಎಚ್ಚರ ವಹಿಸಲು ಪೋಷಕರಿಗೂ ಮಾಹಿತಿ ನೀಡಲಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಜನರು ಗುಂಪು ಗುಂಪಾಗಿ ಸೇರಬಾರದೆಂದು ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಪ್ರಮುಖವಾಗಿ ಮಾಲ್ಗಳು, ನೈಟ್ ಕ್ಲಬ್, ಸ್ವಿಮ್ಮಿಂಗ್ಪೂಲ್ ಹಾಗೂ ಸಮಾರಂಭ ನಿಷೇಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಕೂಡ ಸ್ವಯಂ ಪ್ರೇರಿತವಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ