Mandya: ಇನ್ನೂ ಮುಗಿಯದ ಕ್ರೀಡಾಂಗಣ ಅಭಿವೃದ್ಧಿ


Team Udayavani, Aug 7, 2023, 4:29 PM IST

Mandya: ಇನ್ನೂ ಮುಗಿಯದ ಕ್ರೀಡಾಂಗಣ ಅಭಿವೃದ್ಧಿ

ಮಂಡ್ಯ: ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ 11 ತಿಂಗಳು ಕಳೆಯುತ್ತಾ ಬಂದರೂ ಕಾಮಗಾರಿ ಮುಗಿದಿಲ್ಲ. ಇದರಿಂದ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ಪೊಲೀಸ್‌ ಡಿಎಆರ್‌ ಮೈದಾನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

ಸರ್ಕಾರ ಕ್ರೀಡಾಂಗಣ ಮೇಲ್ದರ್ಜೆಗೇರಿಸುವ ಹಿನ್ನೆಲೆ ಯಲ್ಲಿ 10 ಕೋಟಿ ರೂ. ಅನುದಾನ ನೀಡಿ 11 ತಿಂಗಳೊಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ನೀಡಲಾಗಿತ್ತು. ಕಳೆದ ಜು.31ಕ್ಕೆ ಕಾಮಗಾರಿ ಪೂರ್ಣ ಗೊಳ್ಳಬೇಕಿತ್ತು. ಆದರೆ ಇದುವರೆಗೂ 5 ಕೋಟಿ ರೂ. ವೆಚ್ಚದ ಶೇ.75ರಷ್ಟು ಕಾಮಗಾರಿ ಮಾತ್ರ ಮುಗಿದಿದ್ದು, ಇನ್ನೂ 4.75 ಕೋಟಿ ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ.

ಟೆನ್ಸಿಲ್‌ ರೂಫಿಂಗ್‌ ಕಾಮಗಾರಿ: ಕ್ರೀಡಾಂಗ ಣವನ್ನು ಅಭಿವೃದ್ಧಿಪಡಿಸಲು ನಾಲ್ಕು ಕಾಮ ಗಾರಿಗಳಿಗೆ ಅನು ಮೋದನೆ ನೀಡಲಾಗಿದೆ. ಟೆನ್ಸಿಲ್‌ ರೂಫಿಂಗ್‌, 400 ಮೀಟರ್‌ ಮಡ್‌ ಟ್ರ್ಯಾಕ್‌, ಮಳೆ ಬಂದಾಗ ಕೆರೆಯಂತಾಗುವ ಕ್ರೀಡಾಂಗಣಕ್ಕೆ 10 ಕಡೆ ಯುಜಿಡಿ ನಿರ್ಮಾಣ ಹಾಗೂ ಮಣ್ಣಿನಿಂದ ಮೈದಾನ ಫಿಟ್ಟಿಂಗ್‌ ಮಾಡುವ ಕಾಮಗಾರಿ ಕೈಗೊಳ್ಳಲಾಗಿದೆ. ಅದರಂತೆ ಈಗಾಗಲೇ ಟೆನ್ಸಿಲ್‌ ರೂಫಿಂಗ್‌ ಅಳವಡಿಸಲಾಗಿದೆ. 400 ಮೀಟರ್‌ ಮಡ್‌ ಟ್ರ್ಯಾಕ್‌ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನುಳಿದ  ಕಾಮಗಾರಿ ನಡೆಯಬೇಕಿದೆ.

ಅಕ್ಟೋಬರ್‌ಗೆ ಕಾಮಗಾರಿ ಮುಗಿಯುವ ಸಾಧ್ಯತೆ:

ಈಗಾಗಲೇ ಗುತ್ತಿಗೆದಾರರಿಗೆ ನೀಡಿರುವ ಅವಧಿ ಪೂರ್ಣಗೊಂಡಿದೆ. ಇನ್ನೂ ಮೂರು ತಿಂಗಳು ಕಾಮಗಾರಿ ನಡೆಯಲಿದ್ದು, ಅಕ್ಟೋಬರ್‌ಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನವೆಂಬರ್‌ ತಿಂಗಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಮೈದಾನ ಲಭ್ಯವಾಗಲಿದೆ ಎಂದು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್‌ ತಿಳಿಸಿದರು.

ಅಭಿವೃದ್ಧಿಗೆ ಸಂಬಂಧಿ ಸಿದಂತೆ ಚರ್ಚೆ ಇಂದು:

ಸರ್‌ಎಂವಿ ಕ್ರೀಡಾಂಗಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಆ.7ರಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಹಾಗೂ ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ನೇತೃತ್ವದಲ್ಲಿ ಜಿಲ್ಲಾ ಕ್ರೀಡಾಂಗಣ ಉಸ್ತುವಾರಿ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಕಾಮಗಾರಿ, ಅಭಿವೃದ್ಧಿಗೆ ಸಂಬಂಧಿ ಸಿದಂತೆ ಚರ್ಚೆ ನಡೆಯಲಿದೆ. ಅದಕ್ಕೂ ಮುನ್ನ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ ನಡೆಯಲಿದೆ.

ಸಿಂಥೆಟಿಕ್‌ ಟ್ರ್ಯಾಕ್‌ ಕೈಬಿಟ್ಟ ಸರ್ಕಾರ:

ಕಳೆದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಿಂಥೆಟಿಕ್‌ ಟ್ರ್ಯಾಕ್ ಮಾಡುವ ಯೋಜನೆ ರೂಪಿಸಲಾಗಿತ್ತು. ಅದಕ್ಕಾಗಿ ಅನುದಾನ ಘೋಷಿಸಲಾಗಿತ್ತು. ಆದರೆ ಆ ಯೋಜನೆಯನ್ನು ಕೈಬಿಡಲಾಗಿದೆ. ಸಿಂಥೆಟಿಕ್‌ ಕ್‌ ಮಾಡಿದರೆ ಜಿಲ್ಲಾಡಳಿತ ಆಚರಣೆ ಮಾಡುವ ರಾಷ್ಟ್ರೀಯ ದಿನಾಚ ರಣೆಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರತಿ ವರ್ಷ ನಡೆಸುವ ಕ್ರೀಡೆಗಳು ಹಾಗೂ ಸರ್ಕಾರಿ, ಖಾಸಗಿಯ ವಿವಿಧ ಸಂಘ-ಸಂಸ್ಥೆಗಳು ಯಾವುದೇ ಕ್ರೀಡಾ ಪಂದ್ಯಾವಳಿ ಆಯೋಜಿಸಲು

ಸಾಧ್ಯವಾಗುವುದಿಲ್ಲ. ಟೂರ್ನಿಮೆಂಟ್‌, ಪಂದ್ಯಾವಳಿ ನಡೆಸಲು ಶುಲ್ಕ ನಿಗದಿಪಡಿಸಲಾಗುತ್ತಿದೆ. ಆ ಆದಾಯ ನಿಂತು ಹೋಗಲಿದೆ. ಆ ಹಿನ್ನೆಲೆಯಲ್ಲಿ ಸಿಂಥೆಟಿಕ್‌ ಟ್ರ್ಯಾಕ್ ಯೋಜನೆ ಕೈಬಿಡಲಾಗಿದೆ.

ಕಳಪೆ ಕಾಮಗಾರಿ ಆರೋಪ: ಪರಿಶೀಲನೆ:

ಕ್ರೀಡಾಂಗಣ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಂದಿದ್ದು, ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಕ್ರೀಡಾಂಗಣ ಸುತ್ತಲೂ ಇರುವ ಕಲ್ಲುಗಳನ್ನು ತೆಗೆದು ಟೆನ್ಸಿಲ್‌ ರೂಫಿಂಗ್‌ ಅಳವಡಿಸಿ ನಂತರ ಕಲ್ಲು ಜೋಡಿಸುವ ಕಾರ್ಯ ನಡೆಸಬೇಕಾಗಿತ್ತು. ಆದರೆ ರೂಫಿಂಗ್‌ ಮಾಡುವ ಕಂಬಗಳ ಜಾಗದಲ್ಲಿ ಮಾತ್ರ ಕಲ್ಲು ತೆಗೆದು ಜೋಡಿಸಲಾಗುತ್ತಿದೆ ಎಂಬ ಆರೋಪ ಬಂದಿತ್ತು.ಈ ಹಿನ್ನೆಲೆಯಲ್ಲಿ ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ಇತ್ತೀಚೆಗೆ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ್ದರು. ಆಗ ಗುತ್ತಿಗೆದಾರನಿಗೆ ತರಾಟೆಗೆ ತೆಗೆದುಕೊಂಡು ಗುಣಮಟ್ಟದ ಕಾಮಗಾರಿ ನಡೆಸಿ, ಇಲ್ಲದಿದ್ದರೆ ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವ ಎಚ್ಚರಿಕೆ ನೀಡಿದ್ದರು.

ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ ಜು.31ರೊಳಗೆ ಮುಗಿಯಬೇಕಾಗಿತ್ತು. ಆದರೆ ಇದುವರೆಗೂ ಶೇ.75ರಷ್ಟು ಕಾಮಗಾರಿ ಮಾತ್ರ ಮುಗಿದಿದೆ. ಈಗಾಗಲೇ ಗುತ್ತಿಗೆದಾರರಿಗೆ ಬೇಗ ಮುಗಿಸುವಂತೆ ಸೂಚಿಸಲಾಗಿದೆ. ಅಕ್ಟೋಬರ್‌ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ನವೆಂಬರ್‌ನ ಕನ್ನಡ ರಾಜ್ಯೋತ್ಸವ ಆಚರಣೆಗೆ ಕ್ರಮ ವಹಿಸಲಾಗುವುದು. ಕಳಪೆ ಕಾಮಗಾರಿಗೆ ಆರೋಪಕ್ಕೆ ಸಂಬಂಧಪಟ್ಟಂತೆ ಕಾಮಗಾರಿಯನ್ನು ತಂತ್ರಜ್ಞ ಎಂಜಿನಿಯರ್‌ ಮೇಲುಸ್ತುವಾರಿ ಮಾಡಿ ಪರಿಶೀಲನೆ ನಡೆಸಿ ಪ್ರಮಾಣಿಕರಿಸುತ್ತಾರೆ. ಆ ರೀತಿಯ ಲೋಪ ಕಂಡು ಬಂದಿಲ್ಲ. ಕಂಡು ಬಂದರೆ ಕ್ರಮ ವಹಿಸಲಾಗುವುದು.-ಓಂಪ್ರಕಾಶ್‌, ಸಹಾಯಕ ನಿರ್ದೇಶಕ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಮಂಡ್ಯ

10 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಸಲಾಗುತ್ತಿದೆ. ಆದರೆ ಅಲ್ಲಿ ಅಷ್ಟು ವೆಚ್ಚದ ಕಾಮಗಾರಿ ಕಂಡು ಬಂದಿಲ್ಲ. ಅಲ್ಲದೆ, ಕಳಪೆ ಕಾಮಗಾರಿ ಆರೋಪ ಕೇಳಿ ಬಂದಿದ್ದರಿಂದ ನಾನೇ ಖುದ್ದಾಗಿ ಹೋಗಿ ಪರಿಶೀಲನೆ ನಡೆಸಿ ಗುತ್ತಿಗೆದಾರನ ಕಪ್ಪುಪಟ್ಟಿಗೆ ಸೇರ್ಪಡೆಗೆ ಸೂಚಿಸಿದ್ದೇನೆ. ಸೋಮವಾರ ಕ್ರೀಡಾಂಗಣ ಉಸ್ತುವಾರಿ ಸಮಿತಿ ಸಭೆ ನಡೆಯಲಿದ್ದು, ಇದರ ಬಗ್ಗೆಯೂ ಚರ್ಚೆ ನಡೆಸಲಾಗುವುದು.-ಪಿ.ರವಿಕುಮಾರ್‌ಗೌಡ ಗಣಿಗ, ಶಾಸಕ, ಮಂಡ್ಯ

 -ಎಚ್‌.ಶಿವರಾಜ

 

ಟಾಪ್ ನ್ಯೂಸ್

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.