ಅಂಗನವಾಡಿಗಳಲ್ಲೇ ನರ್ಸರಿ ಆರಂಭಿಸಿ
Team Udayavani, Dec 6, 2019, 4:03 PM IST
ಮಂಡ್ಯ: ಅಂಗನವಾಡಿ ಕೇಂದ್ರದಲ್ಲಿಯೇ ಶಾಲಾ ಪೂರ್ವಪ್ರಾಥಮಿಕ ಶಿಕ್ಷಣ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೊಡಗಿನಿಂದ ಬೆಂಗಳೂರಿನವರೆಗೆ ಆಗಮಿಸಿರುವ ಪಾದಯಾತ್ರೆ ಸ್ವಾಗತಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಕಾಲ ಧರಣಿ ಮಾಡಿದರು. ಸಮಾಜ ಬದವಾಲವಣೆ ಬಯಸುತ್ತಿದೆ. ಆದರೆ, ಅಂಗನವಾಡಿ ಕೇಂದ್ರಗಳು ಮಾತ್ರ ಹಳೆಯ ರೀತಿಯಲ್ಲಿಯೇ ಇವೆ. ಆದ್ದರಿಂದ, ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರವನ್ನಾಗಿಸಬೇಕು. ಹೊಸ ಶಿಕ್ಷಣ ನೀತಿಯ ಶಿಫಾರಸಿನಲ್ಲಿರುವ 3ರಿಂದ 9 ವರ್ಷದ ವರ್ಗೀಕರಣವನ್ನು ವಿರೋಧಿಸಬೇಕು. ಈಗಿರುವ ನಿವೃತ್ತಿ ಸೌಲಭ್ಯವನ್ನು ಬದಲಿಸಿ ಎಲ್ಐಸಿ ಆಧಾರಿತ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದರು.
ಬೇಡಿಕೆಗಳು: ಸೇವಾ ಜೇಷ್ಠತೆ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು. ಮೇಲ್ವಿಚಾರಕಿಯಾಗಿ ಮುಂಬಡ್ತಿ ಹೊಂದುವ ಹುದ್ದೆಯನ್ನು ಸಂಪೂರ್ಣವಾಗಿ ಅಂಗನವಾಡಿ ನೌಕರರಿಗೆ ನೀಡಬೇಕು. ಕೇಂದ್ರ ಸರ್ಕಾರ ಶೇ.45 ಮೀಸಲಾತಿ ಆಧಾರದಲ್ಲಿ ಕೆಪಿಎಸ್ಸಿ ಮುಖಾಂತರ ಮೇಲ್ವಿಚಾರಕಿ ಹುದ್ದೆ ಭರ್ತಿ ಮಾಡಿಕೊಳ್ಳುವ ನಿರ್ಧಾರದಿಂದ ನಮಗೆ ಅನ್ಯಾಯವಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಅನುಕಂಪದ ಆಧಾರದಲ್ಲಿರುವಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹೆಣ್ಣು ಮಕ್ಕಳಿಗೆ ಮಾತ್ರವಲ್ಲದೆ ಕುಟುಂಬದವರಿಗೂ ಎನ್ನುವ ತಿದ್ದುಪಡಿಯಾಗಬೇಕು. ಸೇವಾ ನಿಯಮಾವಳಿ ರಚಿಸಬೇಕು. ಐದು ವರ್ಷ ಪೂರೈಸಿದ ಮೇಲ್ವಿಚಾರಕಿಯರನ್ನು ಕಡ್ಡಾಯವಾಗಿ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಹಾಯಕ ಅಧಿಕಾರಿ ಕೃಷ್ಣಪ್ಪ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ಜಯಲಕ್ಷ್ಮಮ್ಮ, ಪ್ರಮೀಳಾಕುಮಾರಿ, ಸಿ.ಕುಮಾರಿ, ಎಂ.ಎಂ.ಶಿವಕುಮಾರ್, ಸುನಂದಾ ಜಯರಾಮು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್