ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Oct 6, 2019, 3:09 PM IST
ನಾಗಮಂಗಲ: ಐದು ಕೋಟಿ ರೂ. ಗಳಿಗೂ ಅಧಿಕ ವೆಚ್ಚದ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಶನಿವಾರ ಚಾಲನೆ ನೀಡಿದರು.
ತಾಲೂಕಿನ ಬಿಂಡಿಗನಲೆ ಹೋಬಳಿ ಮಂಗರವಳ್ಳಿ, ಎಚ್.ಕೋಡಿಹಳ್ಳಿ, ಎಚ್.ಭೂವನಹಳ್ಳಿ, ಹೊನ್ನೇನಹಳ್ಳಿ ಮತ್ತು ಬೋನಗೆರೆ ರಸ್ತೆಗಳನ್ನು ಸುಮಾರು 1.60 ಕೋಟಿ ರೂ. ವೆಚ್ಚದಲ್ಲಿ ನಬಾರ್ಡ್ ಅಡಿಯಲ್ಲಿ ಜಿಪಂ ಇಲಾಖೆಯಿಂದ ಅಭಿವೃದ್ಧಿ ಪಡಿಸುವ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಹೊನ್ನಾವರ ಗ್ರಾಪಂ ಅಧ್ಯಕ್ಷ ಕೃಷ್ಣೇಗೌಡ ಮಾಜಿ ಸದಸ್ಯ ರುದ್ರೇಶ್, ಮುಖಂಡರಾದ ನರೇಂದ್ರ, ಬಿಂಡಿಗನಲೆ ಗ್ರಾಪಂ ಸದಸ್ಯ ಮಂಜು, ದೊಡ್ಡಾಬಾಲ ಗ್ರಾಪಂ ಮಾಜಿ ಅಧ್ಯಕ್ಷ ಬೋನಗೆರೆ ಸುರೇಶ್ ಇದ್ದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಶಿಖರನಹಳ್ಳಿ, ಹುಳ್ಳೇನಹಳ್ಳಿ, ತೊಂಡಹಳ್ಳಿ ಮತ್ತು ಚಾಕೇನಹಳ್ಳಿ ಸಂಪರ್ಕಿಸುವ ರಸ್ತೆಗಳ 3.50 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ದೇವರಮಾವಿನಕೆರೆ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೂ ಚಾಲನೆ ದೊರೆಯಿತು. ಈ ವೇಳೆ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಕೆ.ಶಿವಪ್ರಕಾಶ್, ಗುತ್ತಿಗೆದಾರ ಡಿ.ಕೆ.ಪುಟ್ಟಸ್ವಾಮಿ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್