ರಾಜ್ಯದಲ್ಲಿರುವುದು ಕೋಮಾ ಸರ್ಕಾರ: ಅರುಣ್ ಶಹಾಪುರ್
Team Udayavani, Jun 5, 2018, 8:10 AM IST
ಮಂಡ್ಯ: ಈಗ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವುದು ಕೋಮಾ ಸರ್ಕಾರ ಎಂದು ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ್ ಲೇವಡಿ ಮಾಡಿದರು.
ಸರ್ಕಾರ ರಚನೆಯಾಗಿ ಹದಿನೈದು ದಿನಗಳಾಗಿದ್ದರೂ ಈಗ ಖಾತೆ ಹಂಚಿಕೆಯಾಗಿದೆ. ಆ ಖಾತೆಗಳಿಗೆ ಸಚಿವರನ್ನು ನೇಮಿಸಬೇಕಿದೆ. ಕಾಂಗ್ರೆಸ್-ಜೆಡಿಎಸ್ ಅಕ್ರಮ ಕೂಟದಿಂದ ಸರ್ಕಾರ ರಚನೆಯಾಗಿದ್ದು, ಹೊಸ ಸರ್ಕಾರದಿಂದ ಅಭಿವೃದ್ಧಿ ಕಾಣಬಹುದೆಂಬ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕುಮಾರಸ್ವಾಮಿ ಅವರು ಹೊಸ ಪಿಂಚಣಿ ಯೋಜನೆ ತೆಗೆದು ಹಳೇ ಮಾದರಿಯ ಪಿಂಚಣಿ ವ್ಯವಸ್ಥೆಯನ್ನೇ ಜಾರಿಗೊಳಿಸುವುದಾಗಿ ಹೇಳುತ್ತಿದ್ದಾರೆ. ಶಿಕ್ಷಕರ ವೇತನ ಬಡ್ತಿ, ವೇತನ ಆಯೋಗದ ಶಿಫಾರಸುಗಳ ಬಗ್ಗೆ ಮೊದಲು ತಮ್ಮ ನಿಲುವನ್ನು ಪ್ರಕಟಿಸಲಿ ಎಂದು ಸವಾಲು ಹಾಕಿದರು.
ಅಧಿಕಾರಿಗಳ ವರ್ಗಾವಣೆಗೆ ಕಾಂಗ್ರೆಸ್ ಸರ್ಕಾರ ತೋರಿದ ಆಸಕ್ತಿಯನ್ನು ಶಿಕ್ಷಕರ ವರ್ಗಾವಣೆಯತ್ತ ತೋರಿಸಲಿಲ್ಲ. ಎರಡು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಮಾಡಿಲ್ಲ. ಶಿಕ್ಷಕರಿಗೆ ನೆಮ್ಮದಿಯ ವಾತಾವರಣ ಕಲ್ಪಿಸಿಲ್ಲ. ದಂಪತಿಗಳು ಬೇರೆ ಬೇರೆ ಕಡೆ ಕೆಲಸ ನಿರ್ವಹಿಸುತ್ತಿದ್ದು ವರ್ಗಾವಣೆಯಾಗದೆ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಪ್ರತಿ ತಿಂಗಳ 5ನೇ ತಾರೀಖೀನೊಳಗೆ ಸಂಬಳ ಪಾವತಿಯಾಗುತ್ತಿಲ್ಲ. ವೇತನಕ್ಕಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ