ಅನಗತ್ಯ ವಿದ್ಯುತ್‌, ವಾಹನ ಬಳಕೆ ನಿಲ್ಲಿಸಿ; ಡಾ.ಎಂ.ಮಹಂತೇಶಪ್ಪ 

ಅಂತರ ಬೇಸಾಯ ಮಾಡುವುದರಿಂದ ಗುಣಮಟ್ಟದ ಶುಂಠಿ ಉತ್ಪಾದಿಸಬಹುದಾಗಿದೆ.

Team Udayavani, Jun 14, 2022, 6:18 PM IST

ಅನಗತ್ಯ ವಿದ್ಯುತ್‌, ವಾಹನ ಬಳಕೆ ನಿಲ್ಲಿಸಿ; ಡಾ.ಎಂ.ಮಹಂತೇಶಪ್ಪ 

ಹುಣಸೂರು: ಭೂಮಿಯ ಫಲವತ್ತತೆ-ಹಸಿರು ಸಂರಕ್ಷಣೆ, ಪ್ಲಾಸ್ಟಿಕ್‌ ಬಳಸದಿರುವುದು, ತ್ಯಾಜ್ಯದ ಸದ್ಭಳಕೆ, ವಿದ್ಯುತ್‌, ರಾಸಾಯನಿಕಗಳ ಹಾಗೂ ವಾಹನಗಳ ಮಿತ ಬಳಕೆ, ಪರಿಸರ ಸ್ನೇಹಿ ಜೀವನಕ್ರಮಗಳನ್ನು ಅನುಸರಿಸಿದಲ್ಲಿ ಪರಿಸರ ಸಂರಕ್ಷಣೆಗೆ ಪೂರಕವಾಗಲಿದೆ ಎಂದು ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮಹಂತೇಶಪ್ಪ ಹೇಳಿದರು.

ವಿಶ್ವಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಹೆಗ್ಗಂದೂರಿನಲ್ಲಿ ಒಡಿಪಿ ಸಂಸ್ಥೆಯು ನಾಗನಹಳ್ಳಿಯ ಕೃಷಿ ವಿಸ್ತರಣಾ ಶಿಕ್ಷಣ ಘಟಕ, ಮೈಸೂರಿನ ಕೃಷಿ ತಂತ್ರಜ್ಞರ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಹಾಗೂ ಶುಂಠಿ ಬೆಳೆಯಲ್ಲಿ ಉತ್ಪಾದನಾ ತಾಂತ್ರಿಕತೆ ಮತ್ತು ತೆಂಗಿನಲ್ಲಿ ರುಗೋಸ್‌ ಬಿಳಿನೊಣದ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪರಿಸರ ಮಾಲಿನ್ಯಕ್ಕೆ ಅರಣ್ಯನಾಶ, ನಗರೀಕರಣ, ಕೈಗಾರಿಕರಣ, ತಾಪಮಾನ ಏರಿಕೆ ಕಾರಣವಾಗಿದ್ದು, ಹಳ್ಳಿಗಳಿಂದಲೇ ಪರಿಸರಸಂರಕ್ಷಣೆಗಾಗಿ ನಿಮ್ಮ ಜಮೀನಿಗೆ ಬಳಸುವ ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಕಡಿಮೆ ಮಾಡಿ, ಅನಗತ್ಯವಾಗಿ ವಿದ್ಯುತ್‌ ಹಾಗೂ ವಾಹನ ಬಳಕೆ ಮಾಡಬೇಡಿ. ಗಿಡ-ಮರ ಬೆಳೆಸುವುದನ್ನು ಹವ್ಯಾಸವಾಗಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ನಾಗನಹಳ್ಳಿಯ ಕೃಷಿ ವಿಸ್ತರಣಾ ಶಿಕ್ಷಣಘಟಕದ ಬೇಸಾಯಶಾಸ್ತ್ರದ ಪ್ರಾಧ್ಯಾಪಕ ಡಾ.ಸಿ.ರಾಮಚಂದ್ರ ಮಾತನಾಡಿ, ಶುಂಠಿಬೆಳೆಯ ಸುಧಾರಿತ ಬೇಸಾಯ ಕ್ರಮದಲ್ಲಿ ತಳಿಗಳ ಆಯ್ಕೆಗೆ ಆದ್ಯತೆ ನೀಡಬೇಕು. ಅಗತ್ಯಕ್ಕೆ ತಕ್ಕಷ್ಟು ಮಾತ್ರ ರಸಗೊಬ್ಬರ, ಕ್ರಿಮಿನಾಶಕ ಬಳಸಬೇಕು. ನೀರಾವರಿ ವ್ಯವಸ್ಥೆ ಸಮರ್ಪಕ ವಾಗಿರಬೇಕು. ಅಂತರ ಬೇಸಾಯ ಮಾಡುವುದರಿಂದ ಗುಣಮಟ್ಟದ ಶುಂಠಿ ಉತ್ಪಾದಿಸಬಹುದಾಗಿದೆ. ಶುಂಠಿ ಬೆಳೆಯಲ್ಲಿ ಕಂಡು ಬರುವ ರೋಗಗಳು ಹಾಗೂ ಅವುಗಳ ನಿರ್ವಹಣಾ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ತೋಟಗಾರಿಕಾ ತಜ್ಞ ರಾಹುಲ್‌ದಾಸ್‌ ಹಾಗೂ ಸಸ್ಯಸಂರಕ್ಷಣೆ ವಿಭಾಗದ ಸಹಾಯಕ
ಪ್ರಾಧ್ಯಾಪಕಿ ಡಾ.ಆರ್‌.ಎನ್‌.ಪುಷ್ಪ ತೆಂಗಿನಲ್ಲಿ ಕಂಡುಬರುವ ರುಗೋಸ್‌ ಬಿಳಿನೊಣದ ನಿಯಂತ್ರಣಾ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.

ಒಡಿಪಿ ಸಂಸ್ಥೆಯ ರಮೇಶ್‌ ಸಂಸ್ಥೆಯ ಯೋಜನೆಗಳು ಮತ್ತು ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಹೈನುಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ಸಹಾಯಕ ಪ್ರಾಧ್ಯಾಪಕಿ ಡಾ.ನಾಗಮಣಿ, ಡಾ.ಕೃಷ್ಣಯಾದವ್‌, ಒಡಿಪಿ ಸಂಯೋಜಕರಾದ ಸುಶೀಲಾ, ಕಲಾವತಿ, ವಡ್ಡಂಬಾಳಿನ ಲಕ್ಷ್ಮಣತೀರ್ಥ, ರೈತ ಉತ್ಪಾದಕ ಸಮಿತಿ ಅಧ್ಯಕ್ಷ ಜಯಣ್ಣ, ಪದಾಧಿಕಾರಿಗಳಾದ ಚೆನ್ನವೀರಪ್ಪ, ಗಣೇಶ್‌ಗೌಡ, ಮುಖಂಡರಾದ ಚಂದ್ರಪ್ಪ, ರಾಜಯ್ಯ, ಕ್ಷೇತ್ರಸಹಾಯಕ ಧರಣೇಶ್‌ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಇತರರು ಇದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.