ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು


Team Udayavani, Jun 1, 2023, 1:51 PM IST

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿ: ಪಟ್ಟಣದಲ್ಲಿ ಒಂದೆಡೆ ವಯಸ್ಸಾದ, ರೋಗಪೀಡಿತ, ಕಜ್ಜಿ ನಾಯಿಗಳ ಕಾಟ, ಮತ್ತೂಂದೆಡೆ ಹೊರಗಡೆ ಬರುವ ಹೊಸ ನಾಯಿಗಳ ಕಾಟಕ್ಕೆ ಜನರು ರೋಸಿ ಹೋಗುವಂತಾಗಿದೆ. ನಾಯಿಗಳ ಕಾಟ ತಾರಕಕ್ಕೇರಿದ್ದು, ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

ಕೊರೊನಾ ಸಂದರ್ಭದಲ್ಲಿ ನಿಯಂತ್ರಣದಲ್ಲಿದ್ದ ನಾಯಿಗಳ ಉಪಟಳ ದಿಢೀರ್‌ ಹೆಚ್ಚಾಗಿದೆ. ಬಸ್‌ ನಿಲ್ದಾಣದ ಬಳಿ ಇರುವ ಮಾಂಸದ ಅಂಗಡಿ, ಲಕ್ಷ್ಮೀಪುರ ಗ್ರಾಮದ ಬಳಿ ಇರುವ ಮಾಂಸ, ಮೀನು ಅಂಗಡಿಗಳ ಬಳಿ ನಾಯಿಗಳ ಗುಂಪು ಸದಾ ಇರುತ್ತಿದ್ದು, ಸಾರ್ವಜನಿಕರು ಸಂಚಾರ ಮಾಡಲು ಕಷ್ಟವಾಗುತ್ತಿದೆ.

ಮನುಷ್ಯರ ಮೇಲೆ ದಾಳಿ: ರಸ್ತೆ ಬದಿಯಲ್ಲಿ ಬಹುತೇಕ ನಾಗರಿಕರು, ಹೋಟೆಲ್‌ ಮತ್ತಿತರ ಉದ್ಯಮಿಗಳು ತ್ಯಾಜ್ಯ ಸುರಿಯುತ್ತಿದ್ದಾರೆ. ಬೀದಿ ಬದಿಯಲ್ಲಿ ಮಾಂಸಹಾರಿ ಹೋಟೆಲ್‌ಗ‌ಳು ಇರುವುದರಿಂದ ನಾಯಿಗಳ ಹಿಂಡು ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ. ಮಾಂಸದ ಅಂಗಡಿಯ ಬಳಿ ಬಿಸಾಡುವ ಮಾಂಸದ ತುಂಡು, ರಕ್ತವನ್ನು ಕುಡಿದು ಮನುಷ್ಯರ ಮೇಲೆ ದಾಳಿ ಮಾಡಲು ಪಟ್ಟಣದಲ್ಲಿ ನಾಯಿಗಳು ಸಂಚಾರ ಮಾಡುತ್ತಿವೆ. ಬೆಳಗ್ಗಿನ ವೇಳೆ ಪಟ್ಟಣದ ಎಲ್ಲೆಡೆ ಸಂಚಾರ ಮಾಡಿ, ರಾತ್ರಿ ಬಸ್‌ ನಿಲ್ದಾಣದಲ್ಲಿ ಹಿಂಡಾಗಿ ತಂಗುತ್ತಿವೆ.

ಆತಂಕದಲ್ಲೇ ಸಂಚಾರ: ಮುಂಜಾನೆ ಬಸ್‌ನಿಲ್ದಾಣಕ್ಕೆ ಪ್ರಯಾಣಿಕರು ಕೈಯಲ್ಲಿ ಬ್ಯಾಗ್‌ ಹಿಡಿದುಕೊಂಡು ಹೋಗಲು ಭಯಪಡುವಂತಿದೆ. ಹಗಲು ವೇಳೆ ಬಹುತೇಕರು ಹಾಲು ಮತ್ತಿತರ ವಸ್ತುಗಳನ್ನು ಖರೀದಿಸಲು, ರೈತಾಪಿ ಜನರು ಹಾಲಿನ ಡೇರಿಗೆ ತೆರಳಲು ಭಯಪಡುವಂತಾಗಿದೆ. ಮಕ್ಕಳು ರಸ್ತೆಯಲ್ಲಿ ಕೈಯಲ್ಲಿ ಒಂದು ಸಣ್ಣ ಪೊಟ್ಟಣ ಕೂಡ ಹಿಡಿದು ಓಡಾಡಲು ದಿಗಿಲುಪಡು ವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಶುಕ್ರವಾರದ ಸಂತೆಗೆ ರೈತರೊಂದಿಗೆ ಹಳ್ಳಿಗಳಿಂದ ಬರುವ ನಾಯಿಗಳು ಮತ್ತಷ್ಟು ಸೇರ್ಪಡೆಯಾಗುತ್ತಿವೆ. ಮೊದಲು ಊರು ಹೊರವಲಯದಲ್ಲಿ ತಂಗುತ್ತಿದ್ದ ನಾಯಿಗಳು, ಈಗ ಬಸ್‌ನಿಲ್ದಾಣದಲ್ಲಿ ತಂಗಲು ಆರಂಭಿಸಿವೆ. ರಕ್ತ, ಮಾಂಸದ ರುಚಿ ನೋಡಿದ ನಾಯಿಗಳು ಜಾನುವಾರು, ಮಕ್ಕಳ ಮೇಲೆ ದಾಳಿ ಮಾಡುತ್ತಿವೆ. ನಾಯಿಗಳ ನಿಯಂತ್ರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕಾಗಿದೆ ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಮಾಂಸದ ಅಂಗಡಿ, ಹೋಟೆಲ್‌ಗ‌ಳು ಹೆಚ್ಚಿದ್ದು, ಎಲ್ಲೆಂದರಲ್ಲಿ ತ್ಯಾಜ್ಯ ವನ್ನು ಬಿಸಾಡುತ್ತಿರುವುದರಿಂದ ನಾಯಿಗಳ ಹಿಂಡು ಹೆಚ್ಚಾಗಿದೆ. ಇವುಗಳ ಕಡಿವಾಣಕ್ಕೆ ಅಧಿಕಾರಿಗಳು ಮುಂದಾಗಬೇಕು. – ಮೂರ್ತಿ, ಕಿಕ್ಕೇರಿ

ನಾಯಿಗಳ ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು. ಸಂತಾನ ಹರಣ ಚಿಕಿತ್ಸೆ ಮಾಡಿಸಲು ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲಾಗುವುದು. ಪ್ರಾಣಿದಯಾ ನಿಯಮ ಪಾಲಿಸಿ, ನಾಯಿಗಳ ನಿಯಂತ್ರಣಕ್ಕೆ ಬೇಕಿರುವ ಅಗತ್ಯ ಕ್ರಮ ವಹಿಸಲಾಗುವುದು. – ಚಲುವರಾಜು, ಪಿಡಿಒ, ಕಿಕ್ಕೇರಿ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.