ರಾಜ್ಯದ ಪೊಲೀಸ್ ಠಾಣೆಗಳ ಬಲವರ್ಧನೆ
Team Udayavani, Jun 20, 2020, 5:21 AM IST
ಮಂಡ್ಯ: ಆರ್ಥಿಕ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳನ್ನು ಬಲವರ್ಧನೆಗೊಳಿಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಆರ್ಥಿಕ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ.
ತಾಂತ್ರಿಕತೆ ಬಳಸಿ ಸುಲಭವಾಗಿ ಜನರನ್ನು ವಂಚಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಬ್ಯಾಂಕುಗಳೂ ಜಾಗೃತವಾಗಬೇಕಿದೆ. ಅವರ ನಿರ್ಲಕ್ಷ್ಯವೂ ಆರ್ಥಿಕ ಅಪರಾ ಧಗಳಿಗೆ ಪ್ರಮುಖ ಕಾರಣವಾಗಿದೆ. ಆರ್ಥಿಕ ಅಪರಾಧಗಳಲ್ಲಿ ಪೊಲೀಸರ ತನಿಖೆಗೆ ಅತ್ಯಾಧುನಿಕ ಸಲಕರಣೆ ಒದಗಿಸಲಾ ಗುವುದು. ಐಟಿ ಕ್ಷೇತ್ರದ ತಜ್ಞರನ್ನು ಇದಕ್ಕೆ ಜೋಡಣೆ ಮಾಡುವ ಯೋಚನೆ ಇದೆ ಎಂದರು.
ಲ್ಯಾಬ್ ಸ್ಥಾಪನೆ: ಎಲ್ಲಾ ಜಿಲ್ಲೆಗಳಲ್ಲೂ ಎಫ್ಎಸ್ಎಲ್ ಪರೀಕ್ಷಾಲಯ ತೆರೆಯಲಾಗುವುದು. ಇದರಿಂದ ವರದಿ ವರದಿ ವಿಳಂಬವಾಗದಂತೆ ತನಿಖೆಗೆ ಶಕ್ತಿ ತುಂಬಲಾಗುವು ದು. ಜಿಲ್ಲೆಯಲ್ಲಿ ಪೊಲೀಸರ ವಸತಿ ಗೃಹ ನಿರ್ಮಾಣ ಅರ್ಧಕ್ಕೆ ನಿಂತಿದೆ. ಈ ಕೆಲಸವನ್ನು ಶೀಘ್ರ ಪ್ರಾರಂಭಿಸದಿದ್ದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದರು.
ಮನೆಗಳ ನಿರ್ಮಾಣ: ಸರ್ಕಾರ ನಿವೇಶನದ ಅಳತೆ ಪರಿಷ್ಕರಿಸಿ, ಮುಂದಿನ 5 ವರ್ಷದೊಳಗೆ 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿ ದರು. ದಕ್ಷಿಣ ವಲಯ ಐಜಿಪಿ ವಿಪುಲ್ಕುಮಾರ್, ಡೀಸಿ ಡಾ.ಎಂ.ವಿ.ವೆಂಕಟೇಶ್, ಜಿಪಂ ಸಿಇಒ ಕೆ.ಯಾಲಕ್ಕೀಗೌಡ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಪರಶುರಾಮ ಇದ್ದರು.
ವರದಿ ನಿರೀಕ್ಷೆಯಲ್ಲಿದ್ದೇವೆ: ಕೆಆರ್ಎಸ್ ಜಲಾಶಯದ ಸುತ್ತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಅಣೆಕಟ್ಟೆಗೆ ಅಪಾಯವಿದ್ದು, ಈ ಬಗ್ಗೆ ವರದಿ ನಿರೀಕ್ಷೆಯಲ್ಲಿದ್ದೇವೆ. ವರದಿ ಬಂದ ಕೂಡಲೇ ನಿಷೇಧ ಜಾರಿಗೊಳಿಸುವುದಾಗಿ ಬಸವ ರಾಜ ಬೊಮ್ಮಾಯಿ ಭರವಸೆ ನೀಡಿದರು. ಜಿಲ್ಲಾಡಳಿತ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಬೇಬಿಬೆಟ್ಟದಲ್ಲಿ ಗಣಿಗಾರಿಕೆ ಮೇಲೆ ನಿಷೇಧ ಹೇರಿದೆ.
ಜಿಲ್ಲಾಡಳಿತದ ಕ್ರಮದ ವಿರುದ್ಧ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಾವೂ ಗಣಿ ಮತ್ತು ಭೂ ವಿಜ್ಞಾನ, ಜಲಸಂಪನ್ಮೂಲ ಹಾಗೂ ಪರಿಸರ ಇಲಾಖೆಯಿಂದ ಸರ್ವೆ ನಡೆಸಿ ವರದಿ ತರಿಸಿಕೊಳ್ಳುತ್ತಿದ್ದೇವೆ. ವರದಿ ಸರ್ಕಾರದ ಕೈಸೇರಿದ ಗಣಿಗಾರಿಕೆ ಮೇಲೆ ನಿಷೇಧ ಜಾರಿಗೊಳಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!