ಭೂ ಪರಿಹಾರ ನೀಡಲು ನಿರ್ಲಕ್ಷ್ಯ: ಉಪವಿಭಾಗಾಧಿಕಾರಿ ವಾಹನ ಜಪ್ತಿ
Team Udayavani, Jun 28, 2022, 3:48 PM IST
ಪಾಂಡವಪುರ: ಪಟ್ಟಣದ ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಜಮೀನು ನೀಡಿದ ರೈತರಿಗೆ ಪರಿಹಾರ ಒದಗಿಸಲು ವಿಫಲರಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಉಪವಿಭಾಗಾಧಿಕಾರಿಗಳ ವಾಹನ ಜಪ್ತಿ ಮಾಡಲಾಯಿತು.
ಏನಿದು ಪ್ರಕರಣ?: ಪಾಂಡವಪುರ ಪಟ್ಟಣದಲ್ಲಿ 2006 ರಲ್ಲಿ ನಿರ್ಮಾಣಗೊಂಡ ಒಳಚರಂಡಿ ವ್ಯವಸ್ಥೆಯ ಮಲಿನ ನೀರು ಸಂಸ್ಕರಣೆ ಮಾಡಲು ಪಟ್ಟಣದ ಹೊರವಲಯದಲ್ಲಿ ರೈತರ 5.20 ಎಕರೆ ಭೂಮಿಯನ್ನು ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿ 2008 ಮತ್ತು 2009ರಲ್ಲಿ ಸ್ವಾ ಧೀನಪಡಿಸಿಕೊಂಡಿತ್ತು. ಈ ವೇಳೆ ರೈತರಿಗೆ ಅಲ್ಪ ಮೊತ್ತದ ಪರಿಹಾರ ನೀಡಲು ಮುಂದಾಯಿತು. ಪರಿಹಾರದ ಮೊತ್ತಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರೈತರು, ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಅವಕಾಶ ನೀಡದೆ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ನೇತೃತ್ವದಲ್ಲಿ ಹೋರಾಟ ನಡೆಸಿ, ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು.
ಆದೇಶಿಸಿ 3 ವರ್ಷ ಕಳೆದರೂ ಪರಿಹಾರ ನೀಡಿರಲಿಲ್ಲ : ರೈತರ ಮನವಿಯನ್ನು ಪುರಸ್ಕರಿಸಿದ ಪಾಂಡವಪುರ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯ, ರೈತರ ಜಮೀನಿಗೆ ಪರಿಹಾರ ನೀಡಲು ಆದೇಶಿಸಿತ್ತು. ನ್ಯಾಯಾಲಯ ಆದೇಶ ನೀಡಿ ಮೂರು ವರ್ಷ ಕಳೆದರೂ ನ್ಯಾಯಾಲಯದ ಆದೇಶ ಪಾಲಿಸಿದ ಉಪವಿಭಾಗಾಧಿ ಕಾರಿಗಳ ನಡೆ ಪ್ರಶ್ನಿಸಿ ರೈತ ಸತ್ಯನಾರಾಯಣ ಎಂಬವರು ಅ ಧಿಕಾರಿಗಳ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ್ದರು. ಹೀಗಾಗಿ ಕೋರ್ಟ್ ಉಪವಿಭಾಗಾಧಿಕಾರಿಗಳ ವಾಹನ ಜಪ್ತಿಗೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!