ಅಭಿವೃದ್ಧಿಗೆ ಶ್ರಮಿಸುತ್ತೇನೆ ಸುಮಲತಾ ಅಂಬರೀಶ್
Team Udayavani, Apr 8, 2019, 3:00 AM IST
ಭಾರತೀನಗರ: ನನ್ನ ಪತಿ ಅಂಬರೀಶ್ ಅವರ ಹಾದಿಯಲ್ಲೇ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನಗೆ ಅವಕಾಶ ನೀಡಿ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾಅಂಬರೀಶ್ ಕೋರಿದರು.
ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಜಿ.ಪಂ ವ್ಯಾಪ್ತಿಯ ದೊಡ್ಡರಸಿನಕೆರೆ, ಶೆಟ್ಟಹಳ್ಳಿ, ಕರಡಕೆರೆ, ಗೌಡಯ್ಯನದೊಡ್ಡಿ ಭಾಗಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.
ನಾನು ಚುನಾವಣಾ ಪ್ರಚಾರಕ್ಕೆ ಹೋದಕಡೆಯಲೆಲ್ಲಾ ಅಂಬರೀಶ್ ಅಭಿಮಾನಿಗಳು, ಮತದಾರರು ನೀವು ಗೆದ್ದೇ ಗೆಲುತ್ತೀರಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕೆಂದು ಆಶಿಸುತ್ತಿದ್ದಾರೆ ಎಂದರು.
ನನ್ನ ಮೇಲೆ ಇಲ್ಲದ ಸಲ್ಲದ ಆರೋಪ, ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಮತದಾರರೇ ಶಕ್ತಿ ತುಂಬಿದ್ದಾರೆ. ನೀವು ನನ್ನ ಕೈಬಿಡುವುದಿಲ್ಲ ಎಂದು ನಂಬಿದ್ದೇನೆ ಎಂದರು.
ಮಂಡ್ಯ ಜಿಲ್ಲೆಯ ಲೋಕಸಭಾ ಚುನಾವಣೆಯನ್ನು ಇಡೀ ದೇಶವೇ ತಿರುಗಿ ನೋಡುತ್ತಿದೆ. ರಾಜಕೀಯ ಜೀವನವನ್ನು ಮಂಡ್ಯದಿಂದ ಪ್ರಾರಂಭಿಸಿದ್ದೇನೆ. ನೀವು ನನ್ನನ್ನು ಕೈಬಿಡದೆ ಮುನ್ನಡೆಸಿ ಎಂದರು.
ಅಭಿಷೇಕ್ಗೌಡ ಮಾತನಾಡಿದರು. ಇದೇ ವೇಳೆ ಮುಖಂಡರಾದ ಜಯಪ್ರಕಾಶ್ಗೌಡ, ಮಧು ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ