ಸಮಸ್ಯೆಗಳ ಸಮಗ್ರ ಅಧ್ಯಯನ ಅಗತ್ಯ: ಸುಮಲತಾ ಅಂಬರೀಶ್‌


Team Udayavani, Apr 14, 2019, 12:23 PM IST

suma

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕುರುಕ್ಷೇತ್ರದೊಳಗೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ನಿಖೀಲ್‌ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಕದನ ಕಲಿಗಳಂತೆ ಗೆಲುವಿಗೆ ಹೋರಾಟ ನಡೆಸುತ್ತಿದ್ದಾರೆ. ಅವರ ರಾಜಕೀಯ ಪ್ರವೇಶದ ಉದ್ದೇಶ, ಗುರಿ, ಪ್ರಚಾರದ ಅನುಭವಗಳನ್ನು ಉದಯವಾಣಿಯೊಂದಿಗೆ ಹಂಚಿಕೊಂಡಿದ್ದಾರೆ.

*ಜಿಲ್ಲೆಯ ಸಮಸ್ಯೆಗಳ ಬಗ್ಗೆ ನಿಮಗೆ ಅರಿವಿದೆಯೇ?
ಸುಮಲತಾ: ಜಿಲ್ಲೆಯ ಅಭಿವೃದ್ಧಿ ದೊಡ್ಡ ಮಾತು. ಒಳ್ಳೆಯ ಉದ್ದೇಶ ಇಟ್ಟುಕೊಂಡು ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿ ಜನಾಭಿಪ್ರಾಯ ಸಂಗ್ರಹಿಸಬೇಕು. ಅದಕ್ಕೆ ಬೆಲೆ ಕೊಡಬೇಕು. ಫ್ಲೈಓವರ್‌, ಸ್ಟೀಲ್‌ ಬ್ರಿಡ್ಜ್ ಮಾಡುವುದು ನಮ್ಮ ಉದ್ದೇಶವಾಗಿರಬಹುದು. ಆದರೆ, ತಳಮಟ್ಟಕ್ಕೆ ಹೋಗಿ ನೋಡಿದಾಗ ಸಮಸ್ಯೆಗಳೇ ಬೇರೆಯಾಗಿರುತ್ತದೆ. ಕುಡಿಯುವ ನೀರು, ಕೃಷಿಗೆ ನೀರು, ರೈತರ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಅಧ್ಯಯನ ಮಾಡಬೇಕು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜನಾಭಿಪ್ರಾಯ ತಿಳಿದುಕೊಂಡು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಈಗ ಕಾಡುತ್ತಿರುವ ಸಮಸ್ಯೆಗಳೇನು. ಅದಕ್ಕೆ ಯಾವ ರೀತಿ ಪರಿಹಾರ ನಿರೀಕ್ಷಿಸುತ್ತಾರೆ. ಅದನ್ನು ತಿಳಿದು ಮುಂದಿನ ಹೆಜ್ಜೆ ಇಡುತ್ತೇನೆ.

* ಪ್ರವಾಸ ಕಾಲದಲ್ಲಿ ಕಂಡುಬಂದ ಸಮಸ್ಯೆಗಳೇನು?
ಸುಮಲತಾ: ಚುನಾವಣೆ ಸಮಯದಲ್ಲಿ ಉದ್ವೇಗ ಇರುತ್ತದೆ. ಈ ಸಮಯದಲ್ಲಿ ಅವರ ಸಮಸ್ಯೆಗಳ ಸಮಗ್ರ ಚಿತ್ರಣ ಸಿಗುವುದಿಲ್ಲ. ಕಬ್ಬಿನ ಸಮಸ್ಯೆ, ಮಹಿಳೆಯರು, ರಸ್ತೆಯ ಅಧ್ವಾನ ಸ್ಥಿತಿ. ಇದನ್ನೆಲ್ಲಾ ಗಣನೆಗೆ ತೆಗೆದು ಕೊಳ್ಳಬೇಕಾಗುತ್ತದೆ. ಸಂಸದರಾಗಿ ನಮಗಿರುವ ನಿರ್ದಿಷ್ಟ ಚೌಕಟ್ಟಿನಲ್ಲಿ ಸಂಸತ್‌ನಲ್ಲಿ ಹೋರಾಟ ನಡೆಸಬೇಕು, ಜನರ ಧ್ವನಿಯಾಗುವ ಆಶಯ ನನ್ನದು. ಅದಕ್ಕೆ ನಾನು ಸಿದ್ಧಳಿದ್ದೇನೆ.

* ಚುನಾವಣೆಯಲ್ಲಿ ಹಣದ ಹೊಳೆ ಸಾಮಾನ್ಯ? ಇದನ್ನು ಹೇಗೆ ಎದುರಿಸುತ್ತೀರಿ?
ಸುಮಲತಾ: ಈ ಚುನಾವಣೆಯಲ್ಲಿ ಜನರಿಗೆ ಒಂದು ಸಂದೇಶ ರವಾನಿಸಲು ಪ್ರಯತ್ನಿಸುತ್ತಿದ್ದೇವೆ. ಚುನಾವಣೆಯಲ್ಲಿ ಸಿಗುವ ಹಣ ತಾತ್ಕಾಲಿಕ. ಅದು ಒಂದು ವಾರ ಅಥವಾ ಒಂದು ತಿಂಗಳೊಳಗೆ ಖರ್ಚಾಗುವಂತಹದ್ದು. ಅದರಿಂದ ಯಾವುದೇ ಲಾಭವಾಗುವುದಿಲ್ಲ. ಹಣದ ಹರಿವಿನಿಂದ ಭ್ರಷ್ಟಾಚಾರ ಹೆಚ್ಚಾಗುತ್ತದೆ. ಅಭಿವೃದ್ಧಿ ಕೆಲಸಗಳು ಆಗುವುದಿಲ್ಲ. ಈ ಸಂದೇಶವನ್ನು ಜನರಿಗೆ ಮುಟ್ಟಿಸಬೇಕಿದೆ. ಮಂಡ್ಯಕ್ಕೆ ಸಂಬಂಧಿಸಿದಂತೆ ಈ ಬಾರಿ ಬೇರೆಯದ್ದೇ ಆದಂತಹ ಚುನಾವಣೆಯನ್ನು ನೋಡಬಹುದು. ಹಣಕ್ಕೆ ಆಗುವ ಚುನಾವಣೆಯಲ್ಲ ಅನ್ನೋದರಲ್ಲಿ ನನಗೆ ಪೂರ್ಣ ವಿಶ್ವಾಸವಿದೆ.

* ಜಿದ್ದಾಜಿದ್ದಿನ ಚುನಾವಣೆಯಲ್ಲಿ ಜೆಡಿಎಸ್‌ ವೋಟುಗಳು ನಿಮಗೆ ಬರಲಿವೆಯೇ?
ಸುಮಲತಾ: ಖಂಡಿತಾ ಬರಲಿದೆ. ಬೇಕಾದಷ್ಟು ಕಡೆ ಜೆಡಿಎಸ್‌ ಬೆಂಬಲಿಗರೇ ನನ್ನ ಬಳಿ ಬಂದು ಹೇಳುತ್ತಿದ್ದಾರೆ. ಈ ಬಾರಿ ನಿಮ್ಮ ಪರವಾಗಿ ಚುನಾವಣೆ ನಡೆಸುತ್ತೇವೆ. ಅಂಬರೀಶಣ್ಣನ ಮೇಲೆ ಅಭಿಮಾನವಿದೆ. ನಿಮ್ಮ ಪರವಾಗಿ ಚುನಾವಣೆ ಮಾಡುತ್ತೇವೆ. ಉಳಿದಂತೆ ಕಾಂಗ್ರೆಸ್‌ ಕಾರ್ಯಕರ್ತರು ಬಹಿರಂಗವಾಗಿ ನನ್ನ ಬೆಂಬಲಕ್ಕೆ ನಿಂತಿದೆ. ಬಿಜೆಪಿ, ರೈತಸಂಘದ ಬೆಂಬಲವೂ ಸಿಕ್ಕಿದೆ. ಇದನ್ನು ನೋಡಿದಾಗ ಎಲ್ಲಾ ಪಕ್ಷದವರೂ ನನ್ನ ಪರವಾಗಿದ್ದಾರೆ ಅನ್ನೋ ನಂಬಿಕೆ ಇದೆ.

* ಬಿಜೆಪಿ ಬೆಂಬಲದಿಂದ ಅಲ್ಪಸಂಖ್ಯಾತ ಮತಗಳು ಕೈತಪ್ಪಿ ಹೋಗುವ ಭಯವಿದೆಯೇ?
ಸುಮಲತಾ: ಖಂಡಿತಾ ಇಲ್ಲ, ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ಇದೊಂದು ಕಠಿಣವಾದ ಚಾಲೆಂಜ್‌. ಅದನ್ನು ನಾನು ಎದುರಿಸುತ್ತಿದ್ದೇನೆ. ಇದು ಅಲ್ಪಸಂಖ್ಯಾತರು ಅರ್ಥಮಾಡಿ ಕೊಂಡಿದ್ದಾರೆ ಎಂದು ತಿಳಿದಿದ್ದೇನೆ. ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುವ ಉದ್ದೇಶದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.