ಮಂಡ್ಯದಲ್ಲಿ ರಣಕಹಳೆ ಮೊಳಗಿಸಿದ ಸುಮಲತಾ


Team Udayavani, May 24, 2019, 3:00 AM IST

m2

ಮಂಡ್ಯ: ತೀವ್ರ ಕುತೂಹಲ ಕಾಯ್ದಿರಿಸಿಕೊಂಡಿದ್ದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಎ.ಸುಮಲತಾ ಅಂಬರೀಶ್‌ 1,25,876 ಮತಗಳ ಅಂತರದಿಂದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ಕೆ.ನಿಖೀಲ್‌ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದಾರೆ.

ಸುಮಲತಾ ಅಂಬರೀಶ್‌ ಒಟ್ಟು 7,03,660 ಮತಗಳನ್ನು ಪಡೆದುಕೊಂಡು ವಿಜಯದ ನಗೆ ಬೀರಿದರೆ, ಮೈತ್ರಿ ಅಭ್ಯರ್ಥಿ ಕೆ.ನಿಖೀಲ್‌ ಕುಮಾರಸ್ವಾಮಿ 5,77,784 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಇವಿಎಂನಲ್ಲಿ 7,02,167 ಮತಗಳು, ಅಂಚೆ ಮತದಾನದಲ್ಲಿ 1,493 ಮತಗಳು ಸೇರಿ ಒಟ್ಟು 7,03,660 ಮತಗಳು ದೊರಕಿದ್ದರೆ, ನಿಖೀಲ್‌ ಕುಮಾರಸ್ವಾಮಿಗೆ ಇವಿಎಂನಲ್ಲಿ 5,76,545 ಮತಗಳು, ಅಂಚೆ ಮತದಾನದಲ್ಲಿ 1239 ಮತಗಳು. ಒಟ್ಟು ಮತಗಳು 5,77,784 ಮತಗಳು ಲಭಿಸಿವೆ.

ಜಿಲ್ಲೆಯ ಒಟ್ಟು 17,11,182 ಮತದಾರರಿದ್ದು, ಈ ಪೈಕಿ 13,76,149 ಮತಗಳು ಚಲಾವಣೆಗೊಂಡಿದ್ದವು. 6,95,262 ಪುರುಷರು, 6,80,859 ಮಹಿಳೆಯರು ಹಾಗೂ 28 ಇತರೆ ಮತದಾರರು ಮತ ಚಲಾಯಿಸಿದ್ದರು.

ಕಳೆದ ಚುನಾವಣೆಗಳ ಮತ ವಿವರ: ಕಳೆದ 2014ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಒಟ್ಟು 16,69,262 ಮತದಾರರಲ್ಲಿ 6,04,491 ಪುರುಷರು ಹಾಗೂ 5,87,306 ಮಹಿಳೆಯರು ಹಾಗೂ ಇತರೆ 8 ಮತದಾರರು ಸೇರಿ 11,91,805 ಮಂದಿ ಮತ ಚಲಾಯಿಸಿದ್ದರು. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪುಟ್ಟರಾಜು 5,24,370 ಮತಗಳನ್ನು ಪಡೆದು ವಿಜಯಿಯಾದರೆ, ಕಾಂಗ್ರೆಸ್‌ ಅಭ್ಯರ್ಥಿ ರಮ್ಯಾ 5,18,852 ಮತಗಳನ್ನು ಪಡೆದು ಪರಾಭವಗೊಂಡಿದ್ದರು. ಆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪುಟ್ಟರಾಜು 5518 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಉಪ ಚುನಾವಣೆಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಕ್ಷೇತ್ರವನ್ನು ಹಿಡಿತದಲ್ಲಿಟ್ಟುಕೊಂಡಿದ್ದ ಜೆಡಿಎಸ್‌ಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಆಘಾತ ನೀಡಿದೆ. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಳೆದುಕೊಂಡಿರುವ ಜೆಡಿಎಸ್‌ ವರ್ಚಸ್ಸಿಗೆ ಇದೀಗ ಧಕ್ಕೆಯಾಗಿದೆ.

108 ಟೇಬಲ್‌ಗ‌ಳಲ್ಲಿ ಎಣಿಕೆ: ಮತ ಎಣಿಕೆ ನಡೆದ ಸರ್ಕಾರಿ ಮಹಾ ವಿದ್ಯಾಲಯದ 14 ಕೊಠಡಿಗಳಲ್ಲಿ ಹಾಕಿದ್ದ 108 ಟೇಬಲ್‌ಗ‌ಳಲ್ಲಿ ಎಣಿಕೆ ಕಾರ್ಯ ನಡೆಯಿತು. ಎರಡು ಇವಿಎಂ ಯಂತ್ರಗಳಲ್ಲಿ ಕ್ಲೋಸ್‌ ಬಟನ್‌ ಒತ್ತದ ಕಾರಣ ಅದನ್ನು ತಜ್ಞರು ವೀಕ್ಷಕರ ಸಮ್ಮುಖದಲ್ಲಿ ಕ್ಲೋಸ್‌ ಬಟನ್‌ ಒತ್ತಿ ಬಳಿಕ ಅದರಲ್ಲಿ ದಾಖಲಾಗಿರುವ ಮತಗಳನ್ನು ಎಣಿಕೆಗೆ ಪರಿಗಣಿಸಿದರು.

ಎಲ್ಲಾ ಇವಿಎಂಗಳಲ್ಲಿ ದಾಖಲಾಗಿರುವ ಮತಗಳ ಎಣಿಕೆ ನಂತರ ಪ್ರತಿ ವಿಧಾನಸಭಾ ಕ್ಷೇತ್ರದ ಐದು ವಿವಿ ಪ್ಯಾಟ್‌ಗಳನ್ನು ಎಣಿಕೆ ಮಾಡಲಾಯಿತು. ಜೊತೆಗೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 60ನೇ ಮತಗಟ್ಟೆಯಲ್ಲಿ ಅಣಕು ಮತದಾನದ ನಂತರದ ಮಾಕ್‌ ಪೋಲ್‌ ಕ್ಲಿಯರ್‌ ಮಾಡದೆ ಮತದಾನ ಪ್ರಕ್ರಿಯೆ ಆರಂಭಿಸಿದ್ದರಿಂದ ಹೆಚ್ಚುವರಿ ಮತಗಳು ದಾಖಲಾಗಿದ್ದವು. ಆ ಹಿನ್ನೆಲೆಯಲ್ಲಿ ಈ ಮತಕೇಂದ್ರದ ವಿವಿ ಪ್ಯಾಟ್‌ನ ಪೇಪರ್‌ ಸ್ಲಿಪ್‌ಗ್ಳನ್ನು ಎಣಿಕೆ ಮಾಡಲಾಯಿತು.

ಮತ ಎಣಿಕಾ ಕೇಂದ್ರದ ಒಳಗೆ ಮೊಬೈಲ್‌ ಫೋನ್‌ಗಳನ್ನು ಮಾಧ್ಯಮದವರು ಹಾಗೂ ಕೆಲವು ಅಧಿಕಾರಿಗಳನ್ನು ಹೊರತುಪಡಿಸಿ ಎಲ್ಲರಿಗೂ ನಿಷೇಧ ಹೇರಲಾಗಿತ್ತು. ಆದರೆ, ಕೆಲ ಏಜೆಂಟರು ಮತ ಎಣಿಕಾ ಕೇಂದ್ರಗಳೊಳಗೆ ಮೊಬೈಲ್‌ಗ‌ಳನ್ನು ತಂದು ಮಾತನಾಡುತ್ತಿದ್ದುದು ಕಂಡು ಬಂದಿತು.

ಬಿಗಿ ಭದ್ರತೆ: ಅತಿ ಸೂಕ್ಷ್ಮ ಕ್ಷೇತ್ರವೆಂದೇ ಬಿಂಬಿತವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕಾ ಕಾರ್ಯಕ್ಕೆ ಯಾವುದೇ ಅಡಚಣೆ ಉಂಟಾಗಬಾರದೆಂಬ ಕಾರಣಕ್ಕೆ ಮತ ಎಣಿಕಾ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಿಆರ್‌ಪಿಎಫ್, ಬಿಎಸ್‌ಎಫ್, ಕೆಎಸ್‌ಆರ್‌ಪಿ ಹಾಗೂ ಡಿಎಆರ್‌ ತುಕಡಿಗಳಲ್ಲದೆ, 400 ಮಂದಿ ಪೊಲೀಸ್‌ ಅಧಿಕಾರಿಗಳನ್ನು ನಿಯೋಜಿಸಿ ಭದ್ರತೆ ಒದಗಿಸಲಾಗಿತ್ತು. ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿತ್ತು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.