ಲಕ್ಷ ಮತಗಳ ಅಂತರದಲ್ಲಿ ಸುಮಲತಾ ಗೆಲುವು
ಮಂಡ್ಯ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಸುಮಲತಾಗೆ ಹೆಚ್ಚು ಮತ
Team Udayavani, May 12, 2019, 12:17 PM IST
ಮದ್ದೂರು ಪಟ್ಟಣದಲ್ಲಿ ಬಿಜೆಪಿ ತಾಲೂಕುಮಟ್ಟದ ಆತ್ಮಾವಲೋಕನ ಸಭೆಯಲ್ಲಿ ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ಜಯಕೃಷ್ಣ ಮಾತನಾಡಿದರು.
ಮದ್ದೂರು: ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕೃಷ್ಣ ತಿಳಿಸಿದರು.
ಪಟ್ಟಣದ ಶಂಕರಪಾರ್ಟಿ ಹಾಲ್ನಲ್ಲಿ ತಾಲೂಕು ಬಿಜೆಪಿ ಸಂಘಟನೆ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ತಾಲೂಕು ಮಟ್ಟದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 8 ಕ್ಷೇತ್ರಗಳಲ್ಲಿ ಸುಮಲತಾ ಅಂಬರೀಶ್ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಮತದಾರರು ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಿದ್ದು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಭವಿಷ್ಯ ನುಡಿದರು.
ಸುಮಲತಾಗೆ ಬೆಂಬಲ: ಜಿಲ್ಲೆಯ ಸ್ವಾಭಿಮಾನ, ಅನುಕಂಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಡಳಿತ ಮೆಚ್ಚಿ ಜಿಲ್ಲೆಯ ಯುವ ಮತದಾರರು, ಮಹಿಳೆಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸುಮಲತಾ ಅಂಬರೀಶ್ ಅವರನ್ನು ಬೆಂಬಲಿ ಮತ ಚಲಾಯಿಸಿದ್ದಾರೆ. ಮೇ 23ರಂದು ಹೊರಬೀಳುವ ಫಲಿತಾಂಶದ ವೇಳೆ ಸ್ವಾಭಿಮಾನಕ್ಕೆ ಜಯವಾಗಲಿದೆ. ಜೆಡಿಎಸ್ ಮುಖಂಡರು ಮೈತ್ರಿಕೂಟ ಅಭ್ಯರ್ಥಿ ನಿಖೀಲ್ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸುವ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವೆಂದರು.
ಪಕ್ಷ ಬಲಪಡಿಸಿ: ಬಿಜೆಪಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು ಮಾತನಾಡಿ, ವಿಧಾನಸಭೆ, ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಸ್ಥಳೀಯ ಸಂಸ್ಥೆ, ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಈಗಾಗಲೇ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಸಮಿತಿಗಳನ್ನು ರಚಿಸಿ ಪಕ್ಷ ಬಲವರ್ಧನೆಗೆ ಮುಂದಾಗಬೇಕೆಂದರು.
ಸಭೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಉಪಾಧ್ಯಕ್ಷ ದೇವರಾಜು, ಪದಾಧಿಕಾರಿಗಳಾದ ಕೆ.ಎಂ.ರಮೇಶ್, ತ್ರಿವೇಣಿ, ಎಂ.ಸಿ.ಸಿದ್ದು, ಯೋಗೇಶ್, ಜಗನ್ನಾಥ್, ಮ.ನ. ಪ್ರಸನ್ನಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ