28ಕ್ಕೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಸಮ್ಮೇಳನಾಧ್ಯಕ್ಷರಾಗಿ ಡಾ.ಎನ್‌.ಎಸ್‌.ಶಂಕರೇಗೌಡ ಆಯ್ಕೆ • ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಉದ್ಘಾಟನೆ

Team Udayavani, Jun 24, 2019, 11:40 AM IST

mandya-tdy-2..

ಮಳವಳ್ಳಿ; ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜೂ.28 ರಂದು ನಡೆಯುತ್ತಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಶಾಸಕ ಡಾ. ಕೆ ಅನ್ನದಾನಿ ತಿಳಿಸಿದರು.

ತಾಲೂಕು ಕಚೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಅಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಮಂಟೇಸ್ವಾಮಿ ಮಹಾದ್ವಾರ, ಎಂ.ವಿ ವೆಂಕಟಪ್ಪ ಮಂಟಪ, ಮಳವಳ್ಳಿ ಸುಂದ್ರಮ್ಮ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮ್ಮೇಳನದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌ ಪುಟ್ಟರಾಜು ನೆರೆವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಡಾ. ಕೆ.ಅನ್ನದಾನಿ ವಹಿಸಲಿದ್ದಾರೆ ಎಂದು ಹೇಳಿದರು.

ಮೆರವಣಿಗೆ: ಜಾನಪದ ಕಲಾಮೇಳದೊಂದಿಗೆ ಸಮ್ಮೇಳನದ ಅಧ್ಯಕ್ಷರನ್ನು ಮೆರವಣಿಗೆ ಮೂಲಕ ತಾಪಂ ವತಿಯಿಂದ ಅಂಬೇಡ್ಕರ್‌ ಭವನದವರೆಗೆ ಕರೆ ತರಲಾಗುವುದು, ಸಮ್ಮೇಳ ನಾಧ್ಯಕ್ಷರ ಮೆರವಣಿಗೆಯನ್ನು ಚಿತ್ರನಟ ನಿಖೀಲ್ಕುಮಾರಸ್ವಾಮಿ ಉದ್ಘಾಟಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಸಿ.ಕೆ ರವಿಕುಮಾರ ಚಾಮಲಾಪುರ ಆಶಯ ನುಡಿ ನುಡಿಯುವರು. ಸಂಸದೆ ಎ ಸುಮಲತಾ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಯನ್ನು ಜಿಪಂ ಅಧ್ಯಕ್ಷೆ ನಾಗರತ್ಮಮ್ಮ ನೆರೆವೇರಿಸಲಿದ್ದು, ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡರು ನಿಕಟಪೂರ್ವ ಅಧ್ಯಕ್ಷ ಮ.ಸಿ.ನಾರಯನ್‌ರನ್ನು ಅಭಿನಂದಿಸಲಿದ್ದಾರೆ. ಡಾ. ಎನ್‌.ಎಸ್‌.ಶಂಕರೇಗೌಡ ಸಮ್ಮೇಳನಾ ಧ್ಯಕ್ಷರ ಭಾಷಣ ಮಾಡಲಿದ್ದಾರೆ ಎಂದರು.

ಕವಿಗೋಷ್ಠಿ: ಮಧ್ಯಾಹ್ನ 1 ಗಂಟೆಗೆ ಮಳವಳ್ಳಿ ತಾಲೂಕು ದರ್ಶನ ಎಂಬ ವಿಷಯವಾಗಿ ಮೊದಲನೇ ಗೋಷ್ಠಿ, ಸಾಹಿತಿ ಡಾ. ಬಸಪ್ಪ ನೆಲಮಾಕನಗಳ್ಳಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ ಸಮ್ಮೇಳನದ ಸಮರೋಪ ಸಮಾರಂಭ ನಡೆಯಲಿದ್ದು, ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಸಾಧಕರಿಗೆ ಸನ್ಮಾನಿಸುವರು. ಸಮ್ಮೇಳನಾಧ್ಯಕ್ಷರಿಗೆ ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅಭಿನಂದನೆ ಸಲ್ಲಿಸುವರು. ಪ್ರೊ. ಜಿ.ಟಿ.ವೀರಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರೋತ್ಸಾಹ: ಗ್ರಾಮೀಣ ಪ್ರದೇಶದಲ್ಲಿ ಹಲವಾರು ಕವಿಗಳು ಇಂದಿಗೂ ಕೂಡ ಎಲೆಮರೆಕಾಯಿ ಯಂತಿದ್ದಾರೆ, ಅವರನ್ನು ಗುರುತಿಸಿ ಪ್ರೋತ್ಸಾಹಿಸಲು ಸಾಹಿತ್ಯ ಸಮ್ಮೇಳನ ಸಹಾಯಕವಾಗಲಿದೆ. ಸಾಹಿತ್ಯ ಸಮ್ಮೇಳನದಲ್ಲಿ ನಾಡು, ನುಡಿ, ನೆಲ, ಜಲ, ರೈತರ ಸಮಸ್ಯೆಗಳು, ಕನ್ನಡ ಭಾಷೆ ಉಳಿವು ಸೇರಿದಂತೆ ಇತರೆ ವಿಷಯಗಳ ಬಗ್ಗೆ ವಿದ್ವಾಂಸರು ಹಾಗೂ ವಿಚಾರವಂತರಿಂದ ಗೋಷ್ಠಿಗಳು ನಡೆಯಲಿದ್ದು, ಸಾಹಿತಿಗಳು, ವಿದ್ಯಾರ್ಥಿಗಳು, ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಕಸಾಪ ಜಿಲ್ಲಾಧ್ಯಕ್ಷ ರವಿಚಾಮಲಪುರ, ತಾಲೂಕು ಅಧ್ಯಕ್ಷ ಕೊದೇನಕೊಪ್ಪಲು ದೇವರಾಜು, ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ, ವಕೀಲ ಮರಿಸ್ವಾಮಿ, ಸಂಘಟನೆ ಕಾರ್ಯದರ್ಶಿ ಜಯಶಂಕರೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.