ಬೆಳೆನಷ್ಟ ಪರಿಹಾರಕ್ಕಾಗಿ ತಮಟೆ ಚಳವಳಿ
ಎನ್ನೆಸ್ಸೆಲ್ ಕಾರ್ಖಾನೆ ವಿರುದ್ಧ ರೈತ ಸಂಘಟನೆ ಕಾರ್ಯಕರ್ತರ ಧರಣಿ • ವಿಷ ನೀರು ಹರಿದು ಬೆಳೆನಷ್ಟ ಪರಿಹಾರಕ್ಕೆ ಆಗ್ರಹ
Team Udayavani, Jul 19, 2019, 12:40 PM IST
ಎಸ್ಸೆನ್ನೆಲ್ ಕಾರ್ಖಾನೆಯ ವಿಷದ ನೀರು ಹರಿದು ಬೆಳೆನಷ್ಟ ಸಂಭವಿಸಿರುವ ಸಂತ್ರಸ್ತ ರೈತರಿಗೆ ಪರಿಹಾರ ವಿತರಿಸು ವಂತೆ ಒತ್ತಾಯಿಸಿ ಪ್ರಾಂತ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ತಮಟೆ ಚಳವಳಿ ನಡೆಸಿದರು.
ಮದ್ದೂರು: ಕೊಪ್ಪ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆಯ ವಿಷದ ನೀರು ಹರಿದು ಬೆಳೆ ನಷ್ಟ ಸಂಭವಿಸಿದ್ದ ಸಂತ್ರಸ್ತ ರೈತರಿಗೆ ಪರಿಹಾರ ವಿತರಿಸುವಂತೆ ಒತ್ತಾಯಿಸಿ ಪ್ರಾಂತ ರೈತ ಸಂಘ ಹಾಗೂ ರೈತ ಸಂಘಟನೆಯ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ತಮಟೆ ಚಳವಳಿ ನಡೆಸಿದರು.
ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಎರಡು ಸಂಘಟನೆಯ ಕಾರ್ಯಕರ್ತರು ಹಾಗೂ ಸಂತ್ರಸ್ತ ರೈತರು ಜಿಲ್ಲಾಡಳಿತ, ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಸಂತ್ರಸ್ತ ರೈತರಿಗೆ ಪರಿಹಾರ ವಿತರಿಸುವಂತೆ ಆಗ್ರಹಿಸಿದರು.
ತಾಜ್ಯ ನೀರು: ತಾಲೂಕಿನ ಚಿಕ್ಕೋನಹಳ್ಳಿ, ಹಳೇದೊಡ್ಡಿ, ಕೀಳಘಟ್ಟ, ತಗ್ಗಹಳ್ಳಿ ಸೇರಿದಂತೆ ಇನ್ನಿತರೆ ಗ್ರಾಮಗಳ ಜಮೀನುಗಳಿಗೆ ತ್ಯಾಜ್ಯ ನೀರು ಹರಿದು ಬೆಳೆನಷ್ಟ ಸಂಭವಿಸಿರುವ ಜತೆಗೆ ಈ ವ್ಯಾಪ್ತಿಯ ಕೃಷಿ ಭೂಮಿ, ಶಿಂಷಾನದಿ, ಹಳ್ಳಕೊಳ್ಳ, ನಾಲೆಗಳು ಸೇರಿದಂತೆ ಎಲ್ಲಾ ಜಲಮೂಲಗಳು ಮಾಲಿನ್ಯಗೊಂಡಿವೆ. ಇದರಿಂದಾಗಿ ರೈತರು ಬೆಳೆ ಬೆಳೆಯದಂತಹ ಪರಿಸ್ಥಿತಿ ಬಂದಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ರೈತರಿಗೆ ಕೂಡಲೇ ಪರಿಹಾರ ವಿತರಿಸಬೇಕೆಂದು ಒತ್ತಾಯಿಸಿದರು.
ನಿಯಮ ಪಾಲಿಸಿ: ಉಪ ವಿಭಾಗಾಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವ ಜತೆಗೆ ಮೀನುಗಾರರಿಗೆ ಉಂಟಾಗಿರುವ ನಷ್ಟ ಭರಿಸುವ ಜತೆಗೆ ಸಂತ್ರಸ್ತ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಮತ್ತು ಡಿಸ್ಟಲರಿ ಘಟಕಗಳನ್ನು ನಿರ್ವಹಿಸಲು ಇರುವ ನಿಯಮಗಳು ಹಾಗೂ ಅನುಮತಿ ಪಡೆಯುವಾಗ ಒಪ್ಪಿರುವ ಕರಾರುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಟಿ.ಯಶವಂತ್, ಕೀಳಘಟ್ಟ ನಂಜುಂಡಯ್ಯ, ಉಮೇಶ್, ಭಾನುಪ್ರಕಾಶ್, ಪ್ರಕಾಶ್, ಶಿವಣ್ಣ, ಕೃಷ್ಣೇಗೌಡ, ರಾಮಣ್ಣ, ಬೊಮ್ಮಯ್ಯ, ಚಿಕ್ಕೋನು, ಬಸವರಾಜು, ರಾಮಯ್ಯ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ