ಕ್ಷೇತ್ರದಲ್ಲಿ ಒಂದು ಲಕ್ಷ ಸಸಿ ನೆಡುವ ಗುರಿ
Team Udayavani, Jun 15, 2020, 5:48 AM IST
ಮಂಡ್ಯ: ನಗರ, ಹೋಬಳಿ ಮತ್ತು ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಸುಮಾರು 1 ಲಕ್ಷ ಸಸಿ ಗಳನ್ನು ನೆಡುವ ಗುರಿ ಹೊಂದಿರುವುದಾಗಿ ಶಾಸಕ ಎಂ. ಶ್ರೀನಿವಾಸ್ ಹೇಳಿದರು. ತಾಲೂಕಿನ ಹನಕೆರೆ ಗ್ರಾಮದ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ಅರಣ್ಯ ಇಲಾಖೆ, ಜಿಲ್ಲಾಡಳಿತ, ಜಿಪಂ, ಸಾಮಾಜಿಕ ಅರಣ್ಯ ವಿಭಾಗ ಮತ್ತು ವಲಯ.
ಹನಕೆರೆ ಗ್ರಾಪಂ, ಹನಕೆರೆ ಎಂ.ಶ್ರೀನಿವಾಸ್ ಪ್ರತಿಷ್ಠಾನ, ಅನನ್ಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಲ್ಯಾಣ ಟ್ರಸ್ಟ್ ಆಯೋಜಿಸಿದ್ದ ಹಸಿರು ಕರ್ನಾಟಕ ಯೋಜನೆಯಡಿ ಮನೆಗೊಂದು ಗಿಡ ಊರಿಗೊಂದು ವನ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು. ಮನೆ ಮನೆಗಳಿಗೆ ಸಸಿ ವಿತರಿಸಲಾಗುತ್ತಿದ್ದು, ಅವುಗಳ ನ್ನು ಅವರೇ ಪೋಷಿಸಿ ಉತ್ತಮವಾಗಿ ಬೆಳೆಸಿದವರಿಗೆ ಪುರಸ್ಕಾರ ನೀಡಲಾಗುವುದು.
ಗ್ರಾಮಗಳಲ್ಲಿ ಮರ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಪಂ ಪಿಡಿಒಗಳು ಸಸಿಗಳನ್ನು ಅರಣ್ಯ ಇಲಾಖೆಯಿಂದ ತರಿಸಿಕೊಡುವ ಜವಾಬ್ದಾರಿ ನಿಭಾಯಿಸಬೇಕು. ಹಸಿರು ಗ್ರಾಮ, ಸತ್ಛ ಪರಿಸರ, ನೈರ್ಮಲ್ಯಯುಕ್ತ ಗ್ರಾಪಂ ಮಾಡುವ ಸಂಕಲ್ಪಕ್ಕೆ ಮುನ್ನುಡಿಯಾಗಬೇಕಿದೆ ಎಂದು ತಿಳಿಸಿದರು. ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಎಸ್.ಸಿ.ಜ್ಯೋತಿ ಮಾತನಾಡಿ, ಗ್ರಾಮೀಣ-ನಗರ ವ್ಯಾಪ್ತಿ ಯಲ್ಲಿ ಹಸಿರೀಕರಣ ಹೆಚ್ಚಿಸುವುದಕ್ಕಾಗಿ ಮನೆಗೊಂದು ಮರ- ಊರಿಗೊಂದು ವನ ಅಭಿಯಾನ ಆರಂಭವಾಗಿದೆ.
ಅರಣ್ಯ ಇಲಾಖೆ ವಾರ್ಷಿಕ ಸುಮಾರು ಒಂದು ಕೋಟಿ ಸಸಿ ನೆಡುವುದು ಮತ್ತು ಉತ್ತ ಮ ವಾಗಿ ಪೋಷಿ ಸುವ ಗುರಿ ಸಾಧಿಸಲು ಮುಂದಾಗಿದೆ ಎಂದು ತಿಳಿಸಿದರು. ಜಿಪಂ ಸದಸ್ಯ ಎಚ್.ಎನ್.ಯೋಗೇಶ್, ಉಪ ವಲಯ ಅರಣ್ಯಾಧಿಕಾರಿ ಬೆಟ್ಟಯ್ಯ, ಅರಣ್ಯ ಪ್ರೇರಕ ರಾದ ದೇವರಾಜು, ಸುವರ್ಣ, ಅನನ್ಯ ಸಾಮಾಜಿಕ ಹಾಗೂ ಅನುಪಮಾ, ತಾಳಶಾಸನ ಮೋಹನ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು