ವೇತನಕ್ಕೆ ಟಾಸ್ಕ್ ಫೋರ್ಸ್ ನೌಕರರ ಆಗ್ರಹ
ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟನೆ
Team Udayavani, Jul 16, 2019, 12:58 PM IST
ಶ್ರೀರಂಗಪಟಣ: ಟಾಸ್ಕ್ ಫೋರ್ಸ್ ನೌಕರರ ವೇತನ ಬಿಡುಗಡೆಗೆ ಆಗ್ರಹಿಸಿ ಸೋಮವಾರ ತಾಲೂಕಿನ ಕೆಆರ್ಎಸ್ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೆಆರ್ಎಸ್ನ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರ ಹಾಗೂ ನಿಗಮದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹಲವು ವರ್ಷಗಳಿಂದ ಕೆಲಸ ನಿರ್ವಸುತ್ತಿರುವ ಟಾಸ್ಕ್ ಫೋರ್ಸ್ ನೌಕರರಿಗೆ ಕಳೆದ 4 ತಿಂಗಳಿಂದ ಸಂಬಳ ನೀಡಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಅಧಿಕಾರಿಗಳಿಗೆ ಸಮಸ್ಯೆ ಹೇಳಿದರೂ ಸ್ಪಂದಿಸುತ್ತಿಲ್ಲ ಎಂದು ಗ್ರಾಪಂ ಸದಸ್ಯ ಮಂಜುನಾಥ್ ದೂರಿದರು.
ಕೆಆರ್ಎಸ್ ವಿವಿಧೆಡೆ 130 ಮಂದಿ ಟಾಸ್ಕ್ ಫೋರ್ಸ್ ನೌಕರರಿದ್ದಾರೆ. ಹಲವು ವರ್ಷಗಳಿಂದ ಸಕಾಲಕ್ಕೆ ಸಂಬಳ ಸಿಗುತ್ತಿಲ್ಲ. ಪ್ರತಿ ತಿಂಗಳು ಸಂಬಳ ಕೊಡಿಸುವಂತೆ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದಷ್ಟು ಶೀಘ್ರ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಕಾರ್ಮಿಕ ಮುಖಂಡ ಚಲುವರಾಜು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ನಿಗಮದ ಕಚೇರಿ ಅಧೀಕ್ಷಕ ದೇವರಾಜು ಅವರಿಗೆ ಮನವಿ ಸಲ್ಲಿಸಿದರು. ಗ್ರಾಪಂ ಮಾಜಿ ಉಪಾಧ್ಯಕ್ಷ ಕೆ.ರಾಜು, ಸದಸ್ಯರಾದ ರವಿಶಂಕರ್, ಜಗದೀಶ್ಸಿಂಗ್, ಪಿ.ರಾಜು, ವೈರಮುಡಿ, ರಮೇಶ, ರವಿ. ಸುನಂದಮ್ಮ, ಶೀಲಾ ಭಾಗವಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು