ಮಲಗಿದ್ದ ವೇಳೆ ಅಪ್ರಾಪ್ತೆಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ್ದ ಆರೋಪಿಗೆ 20 ವರ್ಷ ಜೈಲು
ಅಜ್ಜಿಯ ಜತೆ ನಿದ್ರಿಸುವಾಗ 2020ರ ಜುಲೈನಲ್ಲಿ ನಡೆದಿದ್ದ ದುರ್ಘಟನೆ
Team Udayavani, Jun 17, 2022, 2:51 PM IST
ನಾಗಮಂಗಲ: ಕಳೆದ ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಜಿಲ್ಲಾ ಅಧಿಕ ಸತ್ರ ಮತ್ತು ತ್ವರಿತಗತಿ ಎರಡನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು 20ವರ್ಷ ಕಠಿಣ ಶಿಕ್ಷೆ ಜತೆಗೆ 80ಸಾವಿರ ರೂ. ದಂಡ ವಿಧಿಸಿದ್ದಾರೆ.
ಕೂಲಿ ಕೆಲಸ ಮಾಡುತ್ತಿದ್ದ: ಮೈಸೂರು ಜಿಲ್ಲೆ ಕೆ.ಆರ್ .ನಗರ ಟೌನ್ನ ಆಂಜನೇಯ ಬ್ಲಾಕ್ ವಾಸಿ ಅಶೋಕ ಅಲಿಯಾಸ್ ಸುಬ್ರಹ್ಮಣಿ ಅಲಿಯಾಸ್ ಪ್ರಕಾಶ್(40) ಎಂಬಾತನೇ ಪೋಕ್ಸೋ ಕಾಯ್ದೆಯಡಿ ಶಿಕ್ಷೆಗೊಳಗಾಗಿರುವ ಆರೋಪಿಯಾಗಿದ್ದು, ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಈತ ರಾತ್ರಿ ವೇಳೆ ಊಟ ಮುಗಿಸಿ ಚುಂಚನಹಳ್ಳಿಯಲ್ಲಿಯೇ ವಾಸ್ತವ್ಯ ಹೂಡುತ್ತಿದ್ದನು.
ಕಳೆದ 2020ರ ಜು.3ರಂದು ರಾತ್ರಿ 11ಗಂಟೆ ಸಮಯದಲ್ಲಿ ಚುಂಚನಹಳ್ಳಿ ಗ್ರಾಮದ ಮನೆಯಲ್ಲಿ ತನ್ನ ಅಜ್ಜಿ ಜತೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಬಾಯಿಮುಚ್ಚಿ ಹೆಗಲ ಮೇಲೆ ಹೊತ್ತೂಯ್ದು ಗ್ರಾಮ ಹೊರವಲಯದ ನಿರ್ಜನ ಪ್ರದೇಶದ ಗುಡ್ಡದ ಮೇಲೆ ಅತ್ಯಾಚಾರವೆಸಗಿದ್ದನು.
ದೋಷಾರೋಪಣ ಪತ್ರ: ಸಂತ್ರಸ್ತ ಬಾಲಕಿ ನೀಡಿದ್ದ ದೂರಿನ ಅನ್ವಯ ಬೆಳ್ಳೂರು ಠಾಣೆಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ 24ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ ಅಂದಿನ ನಾಗಮಂಗಲ ಡಿವೈಎಸ್ಪಿ ಕೆ.ಬಿ.ವಿಶ್ವನಾಥ್ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಇದನ್ನೂ ಓದಿ:ದೈವದ ಜತೆ ಮಹಿಳೆಯರು ಕುಣಿಯುವ ವಿಡಿಯೋ ವೈರಲ್ ; ಸ್ಪಷ್ಟನೆ
ಅಪರಾಧಿಗೆ ದಂಡ: ಈ ವಿಶೇಷ ಪ್ರಕರಣ ಕೈಗೆತ್ತಿಕೊಂಡು ವಿಚಾರಣೆ ನಡೆಸಿದ ಜಿಲ್ಲಾ ಅಧಿಕ ಸತ್ರ ಮತ್ತು ತ್ವರಿತಗತಿ ಎರಡನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು ಆರೋಪಿ ಅಶೋಕ ಅಲಿಯಾಸ್ ಸುಬ್ರಹ್ಮಣಿ ಅಲಿಯಾಸ್ ಪ್ರಕಾಶ್ಗೆ 20ವರ್ಷ ಕಠಿಣ ಶಿಕ್ಷೆ ಜತೆಗೆ 80ಸಾವಿರ ರೂ.ದಂಡ ವಿಧಿಸಿ ಜೂ.14ರಂದು ತೀರ್ಪು ನೀಡಿದ್ದಾರೆ. ಸಂತ್ರಸ್ತೆ ಅಪ್ರಾಪ್ತ ಬಾಲಕಿ ಪರ ಸರ್ಕಾರಿ ಅಭಿಯೋಜಕಿ ಪಿ.ಕೆ.ಶಶಿಕಲಾ ಅಬೂಬಕರ್ ವಾದ ಮಂಡಿಸಿದ್ದರು. ಪ್ರಕರಣ ದಾಖಲಾದ 24ಗಂಟೆ ಯೊಳಗೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪಾರದರ್ಶಕ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಯಶಸ್ವಿಯಾದ ಅಂದಿನ ಡಿವೈಎಸ್ಪಿ ಕೆ.ಬಿ.ವಿಶ್ವನಾಥ್, ಸಿಪಿಐ ಕೆ.ರಾಜೇಂದ್ರ, ಪಿಎಸ್ಐ ದಯಾನಂದ್, ಎಎಸ್ ಐಗಳಾದ ಶಿವಣ್ಣ, ಮರಿಸ್ವಾಮಿ, ಸಿದ್ದರಾಜು ಸಿಬ್ಬಂದಿಗಳಾದ ಮಂಜುನಾಥ್, ಮಹದೇವಸ್ವಾಮಿ, ಶಿವಮಲ್ಲು, ಸಿ.ಜೆ.ವಜ್ರ ಮತ್ತು ಸಂದೇಶ್ಪಟೇಲ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ .ಯತೀಶ್, ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ವೇಣುಗೋಪಾಲ್, ನಾಗಮಂಗಲ ಡಿವೈಎಸ್ಪಿ ನವೀನ್ಕುಮಾರ್ ಪ್ರಶಂಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ