ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರು; ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನ
Team Udayavani, Jun 4, 2021, 9:29 AM IST
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿದ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಜೀವವಾಗಿ ದಹನವಾಗಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕನಕಪುರ ರಸ್ತೆಯಲ್ಲಿರುವ ಮಹದೇಶ್ವರ ಪೆಟ್ರೋಲ್ ಬಳಿ ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ನಡೆದಿದೆ.
ಚಾಮರಾಜನಗರದ ಹನೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಕಾರು ಹಲಗೂರು ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿದೆ. ಆ ಸಂದರ್ಭದಲ್ಲಿ ಕಾರಿಗೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಕಾರಿನಿಂದ ಹೊರಬರಲಾಗದೆ ಮೂವರು ಸಜೀವವಾಗಿ ಸುಟ್ಟುಹೋಗಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಮೆಹುಲ್ ಚೋಕ್ಸಿ ಭಾರತಕ್ಕೆ ಗಡಿಪಾರು ಸದ್ಯಕ್ಕೆ ಕಷ್ಟ; ಕಾರಣ ಏನು ಗೊತ್ತಾ?
ಬೆಂಗಳೂರು ಮೂಲದ ಶೇಖ್ ಫೈಸಲ್(44), ಮೆಹಕ್(33) ಹಾಗೂ ಶೇಖ್ ಆಯಿಲ್(11) ಸಜೀವವಾಗಿ ದಹನವಾಗಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳೀಯರಿಂದ ಕಾರಿನ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳಕ್ಕೆ ಹಲಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಮತ್ತೆ ಸಂಪುಟಕ್ಕೆ? ತೆರೆಮರೆಯಲ್ಲಿ ಕಸರತ್ತು ಆರಂಭ