ರಾಜ್ಯದ ಮೊದಲ ಯಮರಾಯ ದೇವಸ್ಥಾನ ಧ್ವಂಸ


Team Udayavani, Jan 11, 2020, 5:02 PM IST

mandya-tdy-2

ಮಂಡ್ಯ: ಸಾವಿನ ಅಧಿಪತಿ ಯಮರಾಜ. ಅವನನ್ನು ಕಂಡರೆ ಎಲ್ಲರೂ ಹೆದರುವರು. ಕನಸಿನಲ್ಲಿಯೂ ಅವನನ್ನು ನೆನೆಸಿಕೊಳ್ಳಲು ಯಾರೂ ಬಯಸುವುದಿಲ್ಲ. ಈ ನಂಬಿಕೆಯ ನಡುವೆಯೂ ಯಮರಾಜನ ದೇವಸ್ಥಾನಗಳು ದೇಶದಲ್ಲಿ ಕೆಲವು ಮಾತ್ರ ಇವೆ. ಅಂತಹುದೇ ಯಮರಾಜನ ದೇಗುಲವೊಂದು ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಸಮೀಪವಿರುವ ಹೊಸ ಉಂಡವಾಡಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿತ್ತು. ಜಾಗ ವಿವಾದದ ಹಿನ್ನೆಲೆಯಲ್ಲಿ ಉದ್ಘಾಟನೆಗೆ ಸಿದ್ಧವಿದ್ದ ದೇವಸ್ಥಾನವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಪ್ರತಿಷ್ಠಾಪನೆಗೆ ಸಿದ್ಧಗೊಂಡಿದ್ದ ಮೂರ್ತಿ: ಕರ್ನಾಟಕದಲ್ಲೇ ಮೊದಲ ಬಾರಿಗೆ ಶ್ರೀ ಯಮರಾಜನ ದೇವಸ್ಥಾನವನ್ನು 4 ಲಕ್ಷ ರೂ. ವೆಚ್ಚದಲ್ಲಿ ಶ್ರೀ ಕ್ಷೇತ್ರ ಶನಿಮಠ  ಚಾರಿಟೆಬಲ್‌  ಸೇವಾ ಟ್ರಸ್ಟ್‌ ವತಿಯಿಂದ ನಿರ್ಮಿಸಲಾಗುತ್ತಿತ್ತು. ಪುರಾಣದ ಕಥೆಯಲ್ಲಿರುವಂತೆ ಎಡಗೈನಲ್ಲಿ ಗದೆ ಹಿಡಿದು ಬಲಗೈಯ್ಯಲ್ಲಿ ಹಗ್ಗ ಹಿಡಿದ ಯಮರಾಜ ಕೋಣನ ಮೇಲೆ ಕುಳಿತಿರುವ ಐದು ಅಡಿ ಎತ್ತರದ ಮೂಲ ಮೂರ್ತಿಯನ್ನೂ ಪ್ರತಿಷ್ಠಾಪನೆಗೆ ಸಿದ್ಧ ಮಾಡಲಾಗಿತ್ತು. ಹೊಸ ಉಂಡವಾಡಿಯ ಹೊರವಲಯದಲ್ಲಿ ಶ್ರೀ ಶನೇಶ್ವರ ದೇವಸ್ಥಾನ ನಿರ್ಮಿಸಲಾಗಿದ್ದು, ಅದರ ಪಕ್ಕದಲ್ಲೇ ಶನಿಯ ಸಹೋದರ ಯಮರಾಜನಿಗೂ ದೇವಸ್ಥಾನ ನಿರ್ಮಾಣಗೊಳ್ಳುತ್ತಿತ್ತು. ಈ ದೇವಸ್ಥಾನ ಒಳಾವರಣ 12×12 ಅಡಿ ಇದ್ದು ಈಗಷ್ಟೇ ಕೆಲವು ತಿಂಗಳ ಹಿಂದಷ್ಟೇ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡು ಪೂರ್ಣಗೊಳ್ಳುವ ಹಂತಕ್ಕೆ ತಲುಪಿತ್ತು. ಆನಂತರ  ಯಮರಾಜನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಕ್ಕೆ ಸಿದ್ಧತೆಯನ್ನೂ ನಡೆಸಲಾಗಿತ್ತು. ಅಷ್ಟರಲ್ಲಿ ಜಾಗ ವಿವಾದ ಸಂಬಂಧ ಇಡೀ ಯಮರಾಜನ ದೇಗುಲ ನೆಲಸಮ ಮಾಡಲಾಗಿದೆ.

ವಿವಾದವೇನು: ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿ ಹೊಂಗಳ್ಳಿ ಸರ್ವೆ ನಂ.291ರ ಪೈಕಿ ಪಿ-42ರಲ್ಲಿ 13ಗುಂಟೆ ಭೂಮಿಯನ್ನು ಹಾಗೂ ಸೂರ್ಯನಾರಾಯಣ ಎಂಬುವರಿಂದ ಆತನ ಪತ್ನಿಗೆ ದಾನವಾಗಿ ಬಂದಿದ್ದ ಸ್ವತ್ತು ಸ.ನಂ.291ರ ಪೈಕಿ ಪಿ43ರಲ್ಲಿನ 100×83 ಅಡಿ ಮತ್ತು 52×43 ಅಡಿಯ ಎರಡು ನಿವೇಶನಗಳನ್ನು ಶ್ರೀ ಕ್ಷೇತ್ರ ಶನಿಮಠದ ಧರ್ಮದರ್ಶಿ ಡಾ.ಕೆ.ಎನ್‌.ರಾಜು ಖರೀದಿಸಿದ್ದರು. ನಂತರದಲ್ಲಿ 100×83ಅಡಿ ನಿವೇಶನದಲ್ಲಿ ದೇಗುಲ ನಿರ್ಮಿಸಿದ್ದರು ಎನ್ನಲಾಗಿದೆ.

ನಿವೇಶನ ಮಾರಾಟ ಮಾಡಿದ ಅನಿತಾ ಪತಿ ಸೂರ್ಯನಾರಾಯಣ ದೇವಸ್ಥಾನ ನಿರ್ಮಾಣ ಮಾಡಿರುವ ಜಾಗ ನಿಮ್ಮದಲ್ಲ. ಅದು ಬೇರೆಯವರಿಗೆ ಮಾರಾಟವಾಗಿದೆ ಎಂದು ತಕರಾರು ಮಾಡಿ ಗೊಂದಲ ಸೃಷ್ಟಿಸಿ ದೌರ್ಜನ್ಯವೆಸಗಿದ್ದಾರೆ ಎಂದು ಧರ್ಮದರ್ಶಿ ಡಾ.ಕೆ.ಎನ್‌.ರಾಜು ಉದಯವಾಣಿಗೆ ತಿಳಿಸಿದರು. ಕ್ರಯ ಮಾಡುವ ಸಮಯದಲ್ಲಿ ದೇವಸ್ಥಾನ ನಿರ್ಮಿಸಿರುವ ಜಾಗವನ್ನು ತೋರಿಸಿ ನೋಂದಾಯಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ನಾವೇ ಸ್ವಾಧೀನದಲ್ಲಿದ್ದು ಯಾವುದೇ ತಕರಾರುಗಳು ಇರಲಿಲ್ಲ ಎಂದೂ ತಿಳಿಸಿದರು.

ಶ್ರೀರಂಗಪಟ್ಟಣ ತಾಲೂಕು ಬೆಳಗೊಳ ಹೋಬಳಿ ಹೊಂಗಳ್ಳಿ ಸರ್ವೆ ನಂ.291ರ ಪೈಕಿ ಪಿ-43ರಲ್ಲಿ 3 ಎಕರೆ 25 ಗುಂಟೆ ಕೃಷಿ ಭೂಮಿಯನ್ನು ಎನ್‌.ವಿ. ಕೃಷ್ಣಯ್ಯ ರವರ ಹೆಸರಿನಲ್ಲಿರುವ ಭೂಮಿಗೆ ಎನ್‌.ವಿ. ಕೃಷ್ಣಯ್ಯ ಪುತ್ರ ಸೂರ್ಯನಾರಾಯಣರವರು ಜಿಪಿಎ ಹಕ್ಕನ್ನು ಹೊಂದಿದ್ದು, ಈ ಭೂಮಿಗೆ ಸರ್ಕಾರದಿಂದ ಯಾವುದೇ ಅನುಮೋದನೆಯಾಗಲೀ ಹಾಗೂ ಪರವಾನಗಿಯಾಗಲಿ ಪಡೆದು ಭೂ ಪರಿವರ್ತನೆಗೊಳಿಸದೆ ಕಾನೂನು ಬಾಹಿರವಾಗಿ ಸೈಟ್‌ಗಳನ್ನು ರಚಿಸಿ ಬಡಾವಣೆ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.