ಸರ್ಕಾರ ಬಡವರು, ರೈತರ ಉದ್ಧಾರ ಮಾಡಲ್ಲ; ಬಿ.ಟಿ.ಲಲಿತಾ ನಾಯಕ್
ಗಣಿಗಾರಿಕೆಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಆಗುತ್ತಿರುವ ನಷ್ಟವನ್ನು ತಪ್ಪಿಸಿ
Team Udayavani, May 28, 2022, 5:53 PM IST
ಮಂಡ್ಯ: ಅರ್ಜಿ ಸಲ್ಲಿಸಿದ 72 ಗಂಟೆಗಳಲ್ಲಿ ಭೂಮಿ ಕೊಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳುವ ಮೂಲಕ ಉದ್ಯಮಿಗಳನ್ನು ಉದ್ಧಾರ ಮಾಡಲು ಹೊರಟಿದೆಯೇ ವಿನಃ, ಬಡವರು, ರೈತರನ್ನು ಅಲ್ಲ ಎಂದು ಮಾಜಿ ಸಚಿವೆ, ಜನತಾ ಪಕ್ಷದ ರಾಜ್ಯಾಧ್ಯಕ್ಷೆ ಬಿ.ಟಿ.ಲಲಿತಾ ನಾಯಕ್ ಆರೋಪಿಸಿದರು.
ಗೋಹತ್ಯೆ ಮಸೂದೆ ಜಾರಿಗೆ ತರುವ ಮೂಲಕ ಎಲ್ಲಾ ಜನರನ್ನು ಬಡತನಕ್ಕೆ ದೂಡುತ್ತಿದೆ. ಕೂಡಲೇ ಎಲ್ಲಾ ವರ್ಗದವರಿಗೆ ಮಾರಕವಾಗಿರುವ ಗೋಹತ್ಯೆ ಮಸೂದೆ ವಾಪಸ್ ಪಡೆಯಬೇಕು. ಉಚಿತ ಶಿಕ್ಷಣ ಮತ್ತು ಆರೋಗ್ಯವನ್ನು ನೀಡುವ ಮೂಲಕ ಖಾಸಗೀಕರಣಕ್ಕೆ ಕಡಿವಾಣ ಹಾಕಬೇಕೆಂದು ಸರ್ಕಾರವನ್ನು ಶುಕ್ರವಾರ ಸುದ್ದಿಗೋಷ್ಠಿ ಯಲ್ಲಿ ಆಗ್ರಹಿಸಿದರು.
ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಿ: ಸರ್ಕಾರ ದಿಂದ ಗುಣಮಟ್ಟದ ಶಾಲೆಗಳನ್ನು ಪ್ರಾರಂಭಿಸಿ, ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಬೇಕು. ನಿರಂತರವಾಗಿ ರಾಗಿ, ಭತ್ತ ಹಾಗೂ ಇನ್ನಿತರೆ ರೈತರ ಉತ್ಪನ್ನ ಗಳನ್ನು ಎಂಎಸ್ಪಿ ದರದಲ್ಲಿ ಖರೀದಿಸಿ ರೈತರಿಗೆ ಒಳಿತು ಮಾಡಬೇಕು ಎಂದು ಒತ್ತಾಯಿಸಿದರು.
ಟೋಲ್ ಗೇಟ್ ನಿಲ್ಲಿಸಿ: ಸರ್ಕಾರ ಅಕ್ರಮ ಗಣಿಗಾರಿಕೆಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಆಗುತ್ತಿರುವ ನಷ್ಟವನ್ನು ತಪ್ಪಿಸಿ ನಿಯಮಿತ ಕೃಷಿ ಮಾಡಲು ರೈತ ಸಮುದಾಯಕ್ಕೆ ಅನುವು ಮಾಡಿಕೊಡಬೇಕು. ಎಲ್ಲ ಕಡೆ ಟೋಲ್ಗೇಟ್ ಸ್ಥಾಪಿಸಿ ಜನರಿಂದ ಅಕ್ರಮವಾಗಿ ಹಣ ವಸೂಲಿ ಮಾಡುವ ಮೂಲಕ ಕೊಲ್ಲಲಾಗುತ್ತಿದೆ. ಆದ್ದರಿಂದ ಟೋಲ್ ಗೇಟ್ಗಳನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.
ಕೃಷಿ ಪರಿಕರ, ಬೀಜ ವಿತರಿಸಿ: ಭಾರತದ ಶೇ.75 ರೈತರು ದೇಶದ ಬೆನ್ನೆಲುಬು. ಆದರೆ, ಇದೇ ರೈತರು ಕೃಷಿಯಿಂದ ವಿಮುಖರಾಗುತ್ತಿರುವುದು ದೇಶದ ಆಹಾರ ಭದ್ರತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಕೃಷಿಯಲ್ಲಿ ರೈತರನ್ನು ಉಳಿಸುವ ಅಗತ್ಯವಿದ್ದು, ಉಚಿತ ಬಿತ್ತನೆ ಬೀಜ, ಕೃಷಿ ಪರಿಕರಗಳನ್ನು ರೈತರಿಗೆ ಪೂರೈಸಬೇಕು ಎಂದು ವಿವರಿಸಿದರು.
ಕೃಷಿ ಕಾಯ್ದೆ ವಾಪಸ್ ಪಡೆಯಿರಿ: ಪಕ್ಷದ ರೈತ ವಿಭಾಗದ ರಾಜ್ಯಾಧ್ಯಕ್ಷ ಭೈರೇಗೌಡ ಮಾತನಾಡಿ, ಕೇಂದ್ರ ಸರ್ಕಾರವು ತಾವು ಮಾಡಿದ ತಪ್ಪಿನ ಅರಿವಾಗಿ ರೈತರಿಗೆ ಮಾರಕವಾಗಿದ್ದ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದು, ಅದೇ ರೀತಿ ಕರ್ನಾಟಕ ಸರ್ಕಾರ ಕರಾಳ ಕಾಯ್ದೆಗಳನ್ನು ಹಿಂಪಡೆಯಬೇಕು. ಸಾಗುವಳಿ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದರು.
ಉಚಿತ ವಿದ್ಯುತ್ ಪೂರೈಸಿ: 1978ರ ಹಿಂದಿನ ಅರಣ್ಯ ಅತಿಕ್ರಮಣಕಾರರನ್ನು ನ್ಯಾಯಾಲಯದ ಆದೇಶದ ಅನ್ವಯ ಕಾಯಂಗೊಳಿಸಬೇಕು. ಸರ್ಕಾರಿ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಶೇ.10 ಮೀಸಲಾತಿ ಕಲ್ಪಿಸಬೇಕು, ರೈತರ ಮನೆಗಳಿಗೆ ಕನಿಷ್ಠ 100 ಯೂನಿಟ್ ಉಚಿತ ವಿದ್ಯುತ್ ಪೂರೈಸ ಬೇಕೆಂದು ಒತ್ತಾಯಿಸಿದರು.ಗೋಷ್ಠಿಯಲ್ಲಿ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎನ್ .ನಾಗೇಶ್, ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷ ಅಬ್ದುಲ್ ರೌಫ್, ಮಂಡ್ಯ ಜಿಲ್ಲಾಧ್ಯಕ್ಷ ಹರಳಹಳ್ಳಿ ಮಹದೇವಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ ಡಿ.ಎಂ.ಮಾದೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಪಿ.ರಾಜೇಂದ್ರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್