ಅಂತರ್ಜಾಲದಲ್ಲಿ ಗ್ರಾಪಂ ಹೆಸರು ಬದಲಾಗಿಲ್ಲ : ಐದು ವರ್ಷಗಳಿಂದಲೂ ಅಧಿಕಾರಿಗಳ ನಿರ್ಲಕ್ಷ್ಯ

ನರೇಗಾ, ಪಂಚತಂತ್ರದಲ್ಲಿ ಹಳೇ ವಿಳಾಸ

Team Udayavani, Dec 15, 2020, 2:39 PM IST

ಅಂತರ್ಜಾಲದಲ್ಲಿ ಗ್ರಾಪಂ ಹೆಸರು ಬದಲಾಗಿಲ್ಲ : ಐದು ವರ್ಷಗಳಿಂದಲೂ ಅಧಿಕಾರಿಗಳ ನಿರ್ಲಕ್ಷ್ಯ

ಮಂಡ್ಯ: ಮಳವಳ್ಳಿ ತಾಲೂಕಿನ ನಾಗೇಗೌಡನದೊಡ್ಡಿ ಗ್ರಾಮ ಪಂಚಾಯಿತಿಯಾಗಿ ಬದಲಾದವಣೆ ಗೊಂಡು ಐದು ವರ್ಷ ಕಳೆದರೂ ಇನ್ನೂ ನರೇಗಾ ಹಾಗೂ ಪಂಚತಂತ್ರ ಅಂತರ್ಜಾಲಗಳಲ್ಲಿ ಬದಲಾವಣೆಯಾಗಿಲ್ಲ. 2014-15ರಲ್ಲಿ ಮಾರೇಹಳ್ಳಿ ಗ್ರಾಮ ಪಂಚಾಯಿತಿಯನ್ನು ನಾಗೇಗೌಡನದೊಡ್ಡಿ ಗ್ರಾಮ ಪಂಚಾಯಿತಿಯಾಗಿ ಬದಲಾವಣೆ  ಮಾಡಲಾಗಿದೆ. ಆದರೆ, ಐದು ವರ್ಷ ಕಳೆಯುತ್ತಾ ಬಂದರೂ, ನರೇಗಾ ಹಾಗೂ ಪಂಚತಂತ್ರಗಳಲ್ಲಿ ಇನ್ನೂ ಮಾರೇಹಳ್ಳಿ ಗ್ರಾಪಂ ಎಂದು ನಮೂದಾಗಿದೆ.

ಮಾರೇಹಳ್ಳಿ ಪುರಸಭೆ ವ್ಯಾಪ್ತಿಗೆ: ಮಾರೇಹಳ್ಳಿ ಗ್ರಾಮವನ್ನು ಐದು ವರ್ಷಗಳ ಹಿಂದೆ ಮಳವಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. ಆಗ ನಾಗೇಗೌಡನದೊಡ್ಡಿಯನ್ನು ಗ್ರಾಮ ಪಂಚಾಯಿತಿ ಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ ವ್ಯಾಪ್ತಿಗೆ ಬೋಸೇಗೌಡನದೊಡ್ಡಿ, ವಡ್ಡರಹಳ್ಳಿ, ಚನ್ನೇಗೌಡ ನದೊಡ್ಡಿ, ತಮ್ಮಡಹಳ್ಳಿ, ಅಂಚೇದೊಡ್ಡಿ, ಅಣ್ಣೆಕೊಪ್ಪಲು ಗ್ರಾಮಗಳು ಒಳಪಟ್ಟಿವೆ.

ಅಂತರ್ಜಾಲದಲ್ಲೂ ಮಾರೇಹಳ್ಳಿ: ಪಂಚತಂತ್ರ ಹಾಗೂ ನರೇಗಾ ಅಂತರ್ಜಾಲಗಳಲ್ಲಿ ಮಾರೇಹಳ್ಳಿ ಗ್ರಾಮಪಂಚಾಯಿತಿಎಂದೇ ನಮೂದಾಗಿದ್ದು, ಇನ್ನೂಬದಲಾವಣೆಯಾಗಿಲ್ಲ. ಇದರಿಂದ ಆಯಾಗ್ರಾಮಗಳಲ್ಲಿ ಪಂಚಾಯಿತಿಯ ಹೆಸರು ಮಾರೇಹಳ್ಳಿ ಎಂದೇ ನಮೂದಾಗುತ್ತದೆ.

ದಾಖಲೆಗಳಲ್ಲೂ ಬದಲಾವಣೆ ಇಲ್ಲ: ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಯಾವುದೇ ದಾಖಲಾತಿಗಳು ಮಾರೇಹಳ್ಳಿ ಗ್ರಾಮ ಪಂಚಾಯಿತಿ ಎಂದು ತೋರಿಸುತ್ತದೆ. ನಾಗೇಗೌಡನದೊಡ್ಡಿಯಲ್ಲಿದ್ದರೂ ಮಾರೇಹಳ್ಳಿ ಗ್ರಾಮ ಪಂಚಾಯಿತಿ ಎಂದು ದಾಖಲೆ ಪಡೆಯಬೇಕಾಗಿದೆ. ಅಲ್ಲದೆ, ತಾಲೂಕು ಕಚೇರಿಯಲ್ಲೂ, ನರೇಗಾ ಜಾಬ್‌ ಕಾರ್ಡ್‌ ಹಾಗೂ ಆರ್‌ಟಿಸಿಯಲ್ಲೂ ಮಾರೇಹಳ್ಳಿ ಎಂದೇ ನಮೂದಾಗುತ್ತಿದೆ.

ಕಂದಾಯ ಗ್ರಾಮವಾಗಿಲ್ಲ: ಮೊದಲು ಮಾರೇಹಳ್ಳಿ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಿ ಗ್ರಾಪಂ ಮಾಡಲಾಗಿತ್ತು. ಮಾರೇಹಳ್ಳಿ ಪುರಸಭೆಗೆ ಸೇರ್ಪಡೆಗೊಂಡ ಬಳಿಕ ನಾಗೇಗೌಡನದೊಡ್ಡಿ ಗ್ರಾಮವನ್ನು ಗ್ರಾಪಂನ್ನಾಗಿ ಮಾಡಲಾಗಿದೆ. ಆದರೆ, ಇನ್ನೂ ಕಂದಾಯ ಗ್ರಾಮ ವನ್ನಾಗಿ ಘೋಷಣೆಮಾಡಿಲ್ಲ. ಕಂದಾಯ ಗ್ರಾಮದ ವ್ಯಾಪ್ತಿಗೆ ಒಳಪಟ್ಟರೆಎಲ್ಲ ದಾಖಲಾತಿಗಳು ಬದಲಾಗಲಿವೆ. ಕೂಡಲೇ ಅಧಿಕಾರಿಗಳು ಇತ್ತ ಗಮನಹರಿಸಿ ಅಂತರ್ಜಾಲ ಹಾಗೂ ದಾಖಲಾತಿಗಳಲ್ಲಿ ನಾಗೇಗೌಡನದೊಡ್ಡಿ ಗ್ರಾಮ ಪಂಚಾಯಿತಿ ಎಂದು ಬದಲಾಯಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ದಾಖಲೆಗಳ ಬದಲಾವಣೆಗೆ ನಿರ್ಲಕ್ಷ್ಯ :  ಅಧಿಕಾರಿಗಳ ನಿರ್ಲಕ್ಷ್ಯದಿಂದ ಇನ್ನೂ ದಾಖಲೆಗಳಲ್ಲಿ ಬದಲಾವಣೆಯಾಗಿಲ್ಲ. ಐದು ವರ್ಷ ಕಳೆಯುತ್ತಾ ಬಂದರೂ ಇನ್ನೂ ನಾಗೇಗೌಡನದೊಡ್ಡಿ ಗ್ರಾಮ ಪಂಚಾಯಿತಿಯನ್ನಾಗಿ ಮಾರ್ಪಡಿಸಿರುವುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ನರೇಗಾ ಹಾಗೂ ಪಂಚತಂತ್ರ ಅಂತರ್ಜಾಲದಲ್ಲಿ ನಾಗೇಗೌಡನದೊಡ್ಡಿ ಗ್ರಾಮ ಪಂಚಾಯಿತಿಯನ್ನಾಗಿ ಬದಲಾಯಿಸುವಂತೆ ಸರ್ಕಾರ, ತಹಶೀಲ್ದಾರ್‌, ಪಂಚಾಯತ್‌ ರಾಜ್‌ ಇಲಾಖೆಯ ಅಂತರ್ಜಾಲ ವಿಭಾಗಕ್ಕೆ ಪತ್ರ ಬರೆಯಲಾಗಿದೆ. ಆದರೂ, ಇನ್ನೂ ಕ್ರಮ ಕೈಗೊಂಡಿಲ್ಲ.

ನಾಗೇಗೌಡನದೊಡ್ಡಿ ಗ್ರಾಮವನ್ನು ಗ್ರಾಮ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿ ಐದು ವರ್ಷಗಳು ಕಳೆಯುತ್ತಾ ಬಂದರೂ,ಇನ್ನೂ ದಾಖಲಾತಿಗಳಲ್ಲಿ ಬದಲಾಗಿಲ್ಲ. ಕೂಡಲೇ ಅಧಿಕಾರಿಗಳು ಇದರ ಬಗ್ಗೆ ಕ್ರಮ ಕೈಗೊಂಡು ನಾಗೇಗೌಡನದೊಡ್ಡಿ ಗ್ರಾಪಂ ಎಂದು ಎಲ್ಲ ದಾಖಲಾತಿಗಳಲ್ಲೂ ಬದಲಾಯಿಸಬೇಕು. -ರಮೇಶ್‌ ಪಟೇಲ್‌, ನಾಗೇಗೌಡನದೊಡ್ಡಿ

ನರೇಗಾ ಹಾಗೂ ಪಂಚತಂತ್ರ ಅಂತರ್ಜಾಲದಲ್ಲಿ ನಾಗೇಗೌಡನದೊಡ್ಡಿ ಗ್ರಾಮ ಪಂಚಾಯಿತಿಯನ್ನಾಗಿ ಬದಲಾಯಿಸುವಂತೆ ಪತ್ರ ಬರೆದು ಮನವಿ ಮಾಡಲಾಗಿದೆ. ಆದರೂ,ಇನ್ನೂ ಬದಲಾವಣೆ ಮಾಡಿಲ್ಲ. ನಾನೇ ಖುದ್ದಾಗಿ ಹೋಗಿ ಬದಲಾಯಿಸಲು ಕ್ರಮ ಕೈಗೊಳ್ಳುತ್ತೇನೆ. ಕಂದಾಯ ಗ್ರಾಮವನ್ನಾಗಿ ಮಾರ್ಪಡಿಸಿಲ್ಲ. ಮಂಗಳಾ, ಪಿಡಿಒ, ನಾಗೇಗೌಡನದೊಡ್ಡಿ ಗ್ರಾಪಂ

 

– ಎಚ್‌.ಶಿವರಾಜು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.