ನಾಲ್ಕು ದೇಗುಲ ವಿಗ್ರಹ ಭಗ್ನಗೊಳಿಸಿ ವಿಕೃತಿ


Team Udayavani, Feb 7, 2019, 11:35 AM IST

mand.jpg

ಮದ್ದೂರು: ತಾಲೂಕು ಬೆಸಗರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ನಾಲ್ಕು ದೇಗುಲಗಳ ವಿಗ್ರಹ ವಿರೂಪಗೊಳಿಸಿ, ಕಂಚಿನ ಪ್ರತಿಮೆ ಹೊತ್ತೂಯ್ದಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಚುಂಚೇಗೌಡನದೊಡ್ಡಿ ಪಟ್ಟಲದಾಂಬ, ಪಣ್ಣೇ ದೊಡ್ಡಿ ವೀರಾಂಜನೇಯ, ಹೊಂಬಾಳೆಗೌಡನ ದೊಡ್ಡಿ ಶನಿ ಮಹಾತ್ಮ ಮತ್ತು ಬೆಳತೂರು ಗ್ರಾಮದ ಮುನೇಶ್ವರ ದೇವರ ವಿಗ್ರಹಗಳು ಭಗ್ನಗೊಂಡಿವೆ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಒಂದೇ ರಾತ್ರಿ ನಡೆದ ಈ ನಾಲ್ಕು ಪ್ರಕರಣಗಳು ತಾಲೂಕಿನಲ್ಲಿ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಗರ್ಭಗುಡಿ ಪ್ರವೇಶಿಸಿ ದೇವರ ವಿಗ್ರಹ ವಿರೂಪಗೊಳಿಸಿ, ಕೆಲವು ಹೊರತಂದು ಅಕ್ಕಪಕ್ಕದ ಜಮೀನಿನಲ್ಲಿ ವಿರೂಪ ಗೊಳಿಸಿ ಎಸೆದಿರುವ ಜೊತೆಗೆ ಪಣ್ಣೇದೊಡ್ಡಿ ಗ್ರಾಮದ ಆಂಜನೇಯಸ್ವಾಮಿ ದೇವರ ಕಂಚಿನ ಮೂರ್ತಿ ಯನ್ನು ಕಳವು ಮಾಡಿದ್ದಾರೆ. ಚುಂಚೇಗೌಡನದೊಡ್ಡಿ ಪಟ್ಟಲದಾಂಬ ದೇವಿ ಮೂಲ ವಿಗ್ರಹವನ್ನು ಒಡೆದು ಹಾಕಿ ಮದ್ದೂರು ಬೆಸಗರಹಳ್ಳಿ ರಸ್ತೆ ಬದಿಯ ಜಮೀನಿನಲ್ಲಿ ಎಸೆಯಲಾಗಿದೆ.

ಹೊಂಬಾಳೇಗೌಡನದೊಡ್ಡಿ ಶನಿಮಹಾತ್ಮ, ಬೆಳತೂರು ಮುನೇಶ್ವರ ದೇಗುಲಗಳ ಗರ್ಭಗುಡಿ ಯಲ್ಲಿದ್ದ ಮೂಲ ವಿಗ್ರಹಗಳನ್ನು ವಿರೂಪಗೊಳಿಸಿ ಹೊರತಂದು ಬಿಸಾಡಿರುವುದು ಹಲವು ಅನುಮಾ ನಗಳಿಗೆ ಎಡೆಮಾಡಿಕೊಟ್ಟಿದೆ. ಇದರು ಸ್ಥಳೀಯರು ಹಾಗೂ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಬುಧವಾರ ಬೆಳಗ್ಗೆ ದೇವರ ವಿಗ್ರಹ ವಿರೂಪ ಗೊಳಿಸಿರುವ ಸುದ್ದಿ ಎಲ್ಲೆಡೆ ಹರಡಿ ಸ್ಥಳಕ್ಕೆ ಭಕ್ತರು ಆಗಮಿಸಿ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದರು.

ಎಸ್ಪಿ ಭೇಟಿ: ವಿಷಯ ತಿಳಿಯುತ್ತಿದ್ದಂತೆ ನಾಲ್ಕೂ ದೇಗುಲಗಳಿಗೆ ಎಸ್ಪಿ ಶಿವಪ್ರಕಾಶ್‌ ದೇವರಾಜ್‌, ಡಿವೈಎಸ್‌ಪಿ ಶೈಲೇಂದ್ರ, ವೃತ್ತ ನಿರೀಕ್ಷಕ ಮಹೇಶ್‌ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದರು. ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಘಟನಾ ಸ್ಥಳಕ್ಕೆ ಕರೆಸಿ ವಿವರ ಪಡೆದರು. ಘಟನೆ ಸಂಬಂಧ ಮದ್ದೂರು ವೃತ್ತ ನಿರೀಕ್ಷಕ ಮಹೇಶ್‌ ಮಾರ್ಗದರ್ಶನದಲ್ಲಿ ಕೆಸ್ತೂರು ಠಾಣೆ ಪಿಎಸ್‌ಐ ಸಂತೋಷ್‌ ನೇತೃತ್ವದ ಪೊಲೀಸರ ತನಿಖಾ ತಂಡ ರಚಿಸಿರುವುದಾಗಿ ಡಿವೈಎಸ್‌ಪಿ ಶೈಲೇಂದ್ರ ತಿಳಿಸಿದರು. ಸದ್ಯಕ್ಕೆ ಬೆಸಗರಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಬಿಗುವಿನ ವಾತಾವರಣ ಮೂಡಿದೆ. ಪರಿಸ್ಥಿತಿ ಗಂಭೀರತೆ ಅರಿತ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಒಂದು ಜಿಲ್ಲಾ ಶಸಸ್ತ್ರ ಮೀಸಲುಪಡೆ ಹಾಗೂ ಸ್ಥಳೀಯ ಪೊಲೀಸ್‌ ಸಿಬ್ಬಂದಿಯ ಬಂದೋಬಸ್ತ್ ಕೈಗೊಂಡಿದ್ದಾರೆ.

ರಸ್ತೆ ತಡೆ: ಬೆಸಗರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕೆರೆಮೇಗಲದೊಡ್ಡಿ ಶೇಖರ್‌ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಸ್ಥಳೀಯರು ಬೆಸಗರಹಳ್ಳಿ ಬಸ್‌ ನಿಲ್ದಾಣ ದಲ್ಲಿ ಪ್ರತಿಭಟನೆ ನಡೆಸಿ ಕೆಲಕಾಲ ಮದ್ದೂರು-ಮಂಡ್ಯ ಮುಖ್ಯರಸ್ತೆ ತಡೆ ನಡೆಸಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.