30ರಿಂದ ಮಾವು ಮೇಳ ಆರಂಭ

ನೈಸರ್ಗಿಕವಾಗಿ ಹಣ್ಣು ಮಾಡಲು ಸಲಹೆ • ಕ್ಯಾಲ್ಸಿಯಂ ಕಾರ್ಬೈಡ್‌ ಬಳಕೆಗೆ ನಿಷೇಧ

Team Udayavani, May 12, 2019, 12:44 PM IST

mandya-tdy-7..

ಮಂಡ್ಯದ ಜಿಲ್ಲಾ ತೋಟಗಾರಿಕೆ ಕಚೇರಿಯಲ್ಲಿ ನಡೆದ ಮಾವು ಬೆಳೆಗಾರರ ಸಭೆಯಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಕೆ.ಎಂ.ರೇಖಾ ಮಾತನಾಡಿದರು.

ಮಂಡ್ಯ: ನಗರದಲ್ಲಿ ಮೇ 30ರಿಂದ ಜೂ.2ರವರೆಗೆ ಮಾವು ಮೇಳ ಆಯೋಜಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಕೆ.ಎಂ.ರೇಖಾ ಹೇಳಿದರು.

ನಗರದ ಜಿಲ್ಲಾ ತೋಟಗಾರಿಕೆ ಕಚೇರಿಯಲ್ಲಿ ಏರ್ಪಡಿಸಿದ್ದ ಮಾವು ಬೆಳೆಗಾರರ ಸಭೆಯಲ್ಲಿ ಮಾತನಾಡಿ, ತೋಟಗಾರಿಕೆ ಇಲಾಖೆ ಕಳೆದ ವರ್ಷ ಮಾವು ಮೇಳವನ್ನು ಯಶಸ್ವಿಯಾಗಿ ಆಯೋಜನೆ ಮಾಡಿತ್ತು. ಆದರೆ, ಈ ಬಾರಿ ಮಾವು ಮೇಳ ಆಯೋಜನೆ ಜವಾಬ್ದಾರಿಯನ್ನು ಮಾವು ಅಭಿವೃದ್ಧಿ ಮಂಡಳಿ ವಹಿಸಿಕೊಂಡಿದೆ. ರೈತರು ಮಾಡಿರುವ ತೀರ್ಮಾನದಂತೆ ಮೇ 30ರಿಂದ ಜೂ.2ರವರೆಗೆ ಮಾವು ಮೇಳ ಆಯೋಜನೆ ಮಾಡಲಾಗುವುದು. ಅವಧಿ ವಿಸ್ತರಣೆ ಕುರಿತಂತೆ ಮಾವಿನ ಹಣ್ಣಿನ ಪೂರೈಕೆ ನೋಡಿಕೊಂಡು ತೀರ್ಮಾನಿಸಲಾಗುವುದು ಎಂದು ಹೇಳಿದರು.

ನೈಸರ್ಗಿಕವಾಗಿ ಹಣ್ಣು ಮಾಡಿ: ಮಾವು ಕಟಾವು ಮಾಡಿದ ಬಳಿಕ ಅದನ್ನು ನೈಸರ್ಗಿಕವಾಗಿ ಹಣ್ಣು ಮಾಡಬೇಕು. ಒಂದು ವೇಳೆ ಕ್ಯಾಲ್ಸಿಯಂ ಕಾರ್ಬೈಡ್‌ ಬಳಕೆ ಮಾಡಿದ್ದರೆ ಅಂತಹ ಹಣ್ಣುಗಳನ್ನು ಮಾವು ಮೇಳದಿಂದ ನಿಷೇಧಿಸಲಾಗುವುದು. ಕ್ಯಾಲ್ಸಿಯಂ ಕಾರ್ಬೈಡ್‌ ಬಳಸಿ ಹಣ್ಣು ಮಾಡಿದ್ದಾರೆಯೇ ಎಂದು ಪ್ರತಿದಿನ ಪರೀಕ್ಷೆ ಮಾಡಲಾಗುವುದು ಎಂದರು.

ವಿವಿಧ ತಳಿ ಹಣ್ಣು: ಮಾವು ಮಾರಾಟಕ್ಕೆ ಬಾದಾಮಿ, ರಸಪೂರಿ, ಸೇಂಧೂರ, ಮಲ್ಲಿಕಾ, ಮಲಗೋಬಾ, ತೋತಾಪುರಿ, ವಾದಾಜ, ನೀಲಂ, ರುಮಾನಿ, ದಶಹರಿ, ಕಾಲಾಪಾಡ್‌, ಜೀರಿಗೆ, ಕೇಸರಿ, ಮರಿಗೌಡ, ಗಿಣಿಕೊಕ್ಕು, ಆಮ್ಲೇಟ್ ಹಾಗೂ ಮಿಶ್ರಾಮಿನಿ ತಳಿಯ ಹಣ್ಣುಗಳು ಮಾವು ಮೇಳಕ್ಕೆ ಬರಲಿವೆ. ಮಾವು ಮಾರಟಗಾರರು ಪ್ಲಾಸ್ಟಿಕ್‌ ಹಾಗೂ ಪಾಲಿಥಿನ್‌ ಚೀಲಗಳಲ್ಲಿ ಹಣ್ಣು ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಮಂಡಳಿಯೇ ದರ ನಿಗದಿ: ಮಾವಿನ ಹಣ್ಣಿನ ದರವನ್ನು ಪ್ರತಿದಿನ ಮಾವು ಮಂಡಳಿ ವತಿಯಿಂದ ನಿಗದಿ ಮಾಡಲಾಗುವುದು. ಪ್ರತಿ ದಿನ ನಿಗದಿ ಮಾಡಿದ ಬೆಲೆಗೆ ಎಲ್ಲಾ ಮಳಿಗೆ ಮಾರಾಟಗಾರರು ಹಣ್ಣು ಮಾರಾಟ ಮಾಡಬೇಕು. ವ್ಯತ್ಯಾಸ ಮಾಡಿದಲ್ಲಿ ಮಳಿಗೆಯಿಂದ ಹೊರಹಾಕಲಾಗುವುದು. ಮಾವು ಮೇಳಕ್ಕೆ 25 ರಿಂದ 30 ಮಳಿಗೆ ತೆರೆಯಲಾಗುವುದು. ರೈತರ ಬೇಡಿಕೆಗೆ ಅನುಗುಣವಾಗಿ ಮೇಳದಲ್ಲಿ ಮಳಿಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.

ರೈತರು ಸಲ್ಲಿಸಬೇಕಾದ ದಾಖಲೆ: ಸರ್ಕಾರದ ಸಹಾಯಧನದ ಅಡಿಯಲ್ಲಿ ಮಾವಿನ ಹಣ್ಣಿನ ಬಾಕ್ಸ್‌ ಪಡೆಯಲು ರೈತರು ಕೆಲವು ದಾಖಲೆಗಳನ್ನು ಸರ್ಕಾರಕ್ಕೆ ನೀಡಬೇಕು. ಮಾವು ಬೆಳೆ ಹೊಂದಿರುವ ಆರ್ಟಿಸಿ(ಪಹಣಿ ಪತ್ರ), ಆಧಾರ್‌ ಕಾರ್ಡ್‌ ಹಾಗೂ ಭಾವಚಿತ್ರ ನೀಡಬೇಕು. ಆರ್‌ಟಿಸಿಯಲ್ಲಿ ಮಾವು ಬೆಳೆ ಎಂದು ನಮೂದಿಸಿಲ್ಲ ಎಂದಾದರೆ, ರೈತರು ಮಾವು ಬೆಳೆ ಢೀಕರಣ ಪತ್ರ ನೀಡಬೇಕು ಎಂದು ತಿಳಿಸಿದರು.

ಬೆಳೆಗಾರರ ನಿರ್ಣಯ: ರಾಮನಗರ ಜಿಲ್ಲೆಯಲ್ಲಿ ಮಾತ್ರ ಮಾವು ಫ‌ಸಲು ಕಟಾವಿಗೆ ಬಂದಿದೆ. ಆದರೆ, ಮೈಸೂರು ಹಾಗೂ ಮಂಡ್ಯ ಜಿಲ್ಲಾದ್ಯಂತ ಮಾವಿನ ಫ‌ಸಲು ಕಟಾವಿಗೆ ಬಂದಿಲ್ಲ. ಮುಂದಿನ ಒಂದು ವಾರದಲ್ಲಿ ಫ‌ಸಲು ಕಟಾವಿಗೆ ಬರಲಿದ್ದು, ನೈಸರ್ಗಿಕವಾಗಿ ಹಣ್ಣು ಮಾಡಲು ಕನಿಷ್ಟ ಎಂಟರಿಂದ ಹತ್ತು ದಿನ ಬೇಕಿದೆ. ಹೀಗಾಗಿ ಮೇ ತಿಂಗಳ ಕೊನೆ ವಾರದಲ್ಲಿ ಮಾವು ಮೇಳ ಆಯೋಜನೆ ಮಾಡುವಂತೆ ಮಾವು ಬೆಳಗಾರರೇ ಒತ್ತಾಯಿಸಿದರು.

ಸಭೆಯಲ್ಲಿ ಮಳವಳ್ಳಿ, ಕೆ.ಆರ್‌.ಪೇಟೆ, ಮಂಡ್ಯ ತಾಲೂಕು ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಮಾವು ಬೆಳೆಗಾರರು ಭಾಗವಹಿಸಿದ್ದರು.

ಹಲಸು ಮೇಳ ಆಯೋಜನೆ:

ಮಾವು ಮೆಳದ ಜೊತೆಗೆ ಹಲಸು ಮೇಳ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಕೆಲ ರೈತರು ಮಳಿಗೆ ಹಾಕುವುದಾಗಿ ಒಪ್ಪಿಗೆ ನೀಡಿದ್ದು, ಪ್ರಾಯೋಗಿಕವಾಗಿ ಈ ಬಾರಿ ಎರಡರಿಂದ ಮೂರು ಮಳಿಗೆಗಳನ್ನು ಹಲಸು ಮೇಳಕ್ಕೆ ನೀಡಲಾಗುವುದು. ಕಳೆದ ಬಾರಿ ನಡೆದ ಮಾವು ಮೇಳದಲ್ಲಿ ಕೆಲ ರೈತರು ಮಾರುಕಟ್ಟೆಯಿಂದ ಕ್ಯಾಲ್ಸಿಯಂ ಕಾರ್ಬೈಡ್‌ ಬಳಸಿ ಹಣ್ಣು ಮಾಡಿದ ಮಾವುಗಳನ್ನು ತಂದು ಕಡಿಮೆ ಬೆಲೆಗೆ ಮಾರಾಟ ಮಾಡಿದರು. ಇದರಿಂದ ಗ್ರಾಹಕರಿಗೆ ಗುಣಮಟ್ಟದ ಹಣ್ಣು ಸಿಗಲಿಲ್ಲ, ಜೊತೆಗೆ ಕೆಲ ಮಾವು ಬೆಳೆಗಾರರು ನಷ್ಟ ಅನುಭವಿಸಿದರು. ಕೆಲವರು ಬೆಂಗಳೂರು ಮಾವು ಮೇಳಕ್ಕೆ ಹಣ್ಣು ಸಾಗಿಸಬೇಕಾದ ಪರಿಸ್ಥಿತಿ ಬಂದಿತು. ಅದೇ ಪರಿಸ್ಥಿತಿ ನಿರ್ಮಾಣವಾದರೆ ನಾವು ಹಣ್ಣು ಮಾರಾಟ ಮಾಡುವುದಿಲ್ಲ ಎಂದು ರೇಖಾ ಹೇಳಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.