ರೌಡಿಶೀಟರ್ ಸುಮಂತ್ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

ಹತ್ಯೆ ಮಾಡಿದ್ದ ಮೂವರು ಬಾಲಕರು ಸೇರಿದಂತೆ 8 ಮಂದಿ ಆರೋಪಿಗಳ ಬಂಧನ

Team Udayavani, Nov 26, 2020, 8:26 PM IST

ರೌಡಿಶೀಟರ್ ಸುಮಂತ್ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

ಮಂಡ್ಯ: ಅ.30ರಂದು ನಗರದ ಗುತ್ತಲು ರಸ್ತೆಯ ಬಸವನಗುಡಿ 4ನೇ ಕ್ರಾಸ್‌ನಲ್ಲಿ ರೌಡಿಶೀಟರ್ ಸುಮಂತ್ ಆಲಿಯಾಸ್ ಕುಳ್ಳಿ ಎಂಬಾತನ ಕೊಲೆ ಪ್ರಕರಣ ಬೇಧಿಸಿರುವ ಮಂಡ್ಯ ಪೊಲೀಸರು ಮೂವರು ಬಾಲಕರು ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಸ್ವರ್ಣಸಂದ್ರದ ಮಂಜುನಾಥ.ಜಿ ಆಲಿಯಾಸ್ ಮಿಷಿನ್ ಮಂಜ(23), ಪವನ್.ಕೆ.ಎಸ್ ಆಲಿಯಾಸ್ ಪಾನಿ(20), ಬಸವನಗುಡಿ 1ನೇ ಕ್ರಾಸ್‌ನ ಅಫ್ನಾನ್‌ಖಾನ್(19), ಅರಕೇಶ್ವರನಗರ ಗುತ್ತಲು ಕಾಲೋನಿಯ ದರ್ಶನ್ ಆಲಿಯಾಸ್ ದಚ್ಚು(22), ಚಂದನ ಆಲಿಯಾಸ್ ಚಂದು(28) ಹಾಗೂ ಹತ್ಯೆ ಮಾಡಿದ್ದ ಮೂವರು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಿದ್ದಾರೆ. ಮೂವರು ಸಂಘರ್ಷಕ್ಕೊಳಗಾದ ಆರೋಪಿಗಳನ್ನು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಿ ಮೈಸೂರಿನ ಬಾಲ ವೀಕ್ಷಣಾಲಯಕ್ಕೆ ಬಿಡಲಾಗಿದೆ.

ಬಂಧಿತರಿoದ ಮೂರು ಕಬ್ಬಿಣದ ಲಾಂಗ್‌ಗಳು, ಒಂದು ಡ್ರಾಗರ್, ಕೃತ್ಯಕ್ಕೆ ಬಳಸಿದ್ದ ಬಜಾಜ್ ಪಲ್ಸರ್ ಬೈಕ್ ಹಾಗೂ ಕೊಲೆ ಮಾಡಿ ಪರಾರಿಯಾಗಲು ನೀತಿ ಎಂಬ ಯುವತಿಯಿಂದ ಬೈಕ್ ಕಿತ್ತುಕೊಂಡು ಹೋಗಿದ್ದ ಡಿಯೋ ಸ್ಕೂಟರ್‌ನನ್ನು ವಶಪಡಿಸಿಕೊಳ್ಳಲಾಗಿದೆ.

ಜೈಲಿನಿಂದಲೇ ಸುಪಾರಿ: ಆರೋಪಿ ಚಂದನ ಈಗಾಗಲೇ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮೃತ ಸುಮಂತ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಅದರಂತೆ ಆರೋಪಿ ಮಂಜುನಾಥನಿಗೆ ಕೊಲೆ ಮಾಡಲು ತಿಳಿಸಿದ್ದನು.

ಬಾಲಕರಿಂದಲೇ ಹತ್ಯೆಯಾದ ರೌಡಿಶೀಟರ್: ಆರೋಪಿಗಳಾದ ಮಂಜುನಾಥ ಹಾಗೂ ಚಂದನ ಇಬ್ಬರು ಸುಮಂತ್‌ನನ್ನು ಕೊಲೆ ಮಾಡಲು ಆರೋಪಿಗಳಾಗಿರುವ ಮೂವರು ಸಂಘರ್ಷಕ್ಕೊಳಗಾದವರನ್ನು ಬಳಸಿಕೊಂಡಿದ್ದಾರೆ. ಅದರಂತೆ ಅ.30ರಂದು ಸಂಜೆ 5.45ರಲ್ಲಿ ರೌಡಿಶೀಟರ್ ಸುಮಂತ್ ಹಾಲು ಹಾಕಿ ಬಸವನಗುಡಿ 4ನೇ ಕ್ರಾಸ್‌ನಲ್ಲಿ ಬರುತ್ತಿದ್ದಾಗ, ಒಬ್ಬ ಬಾಲ ಆರೋಪಿ ಸುಮಂತನ ಕಡೆಗೆ ಕಾರದಪುಡಿ ಎರಚಿದ್ದಾನೆ. ಇನ್ನೊಬ್ಬ ಬಾಲಕ ಡ್ರಾಗರ್‌ನಿಂದ ಸುಮಂತ್ ಹೊಟ್ಟೆಗೆ ಇರಿದಿದ್ದಾನೆ. ನಂತರ ಆರೋಪಿ ಮಂಜುನಾಥ ಲಾಂಗ್‌ನಿoದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.