ಇಂದಿನಿಂದ ಪೋಲಿಯೋ ಅಭಿಯಾನ
Team Udayavani, Jan 19, 2020, 3:29 PM IST
ಕೆ.ಆರ್.ಪೇಟೆ: ನಮಗೆ ರೋಗಗಳು ಬರುವ ಮುನ್ನವೇ ಎಚ್ಚರಿಕೆ ವಹಿಸಿದರೆ, ಜೀವನ ಪೂರ್ತಿ ರೋಗಮುಕ್ತರಾಗಿ ನೆಮ್ಮದಿ ಜೀವನ ನಡೆಸಬಹುದಾಗಿದೆ. ಎಲ್ಲರೂ ಮುಂಜಾಗ್ರತೆ ಕ್ರಮವಹಿಸಿ ಆರೋಗ್ಯವಂತ ಜೀವನ ನಡೆಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್.ಟಿ. ಹರೀಶ್ ಮನವಿ ಮಾಡಿದರು.
ಪಟ್ಟಣದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಿದ್ದ ಜಾಥಾ ಉದ್ಘಾಟಿಸಿ ಮಾತನಾಡಿದರು.
ವಿಶ್ವಸಂಸ್ಥೆಯ ವರದಿಯಂತೆ ನಮ್ಮ ದೇಶ ಈಗ ಪೋಲಿಯೋ ಮುಕ್ತ ದೇಶವಾಗಿದೆ. ಆದರೂ ನಾವು ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆಹಾಕಿಸಿಕೊಳ್ಳಬೇಕು. ಏಕೆಂದರೆ ಸಮಸ್ಯೆ ಎದುರಾದಮೇಲೆ ಜೀವನಪೂರ್ತಿ ನೋವು ಅನುಭವಿಸುವ ಬದಲಿಗೆ ಸಮಸ್ಯೆ ಬಾರದಂತೆ ಎರಡು ಹನಿ ಲಸಿಕೆ ಹಾಕಿಸುವುದು ಒಳ್ಳೆಯದು.ಈ ಹಿಂದೆ ಎಷ್ಟು ಸಾರಿ ಪೋಲಿಯೋ ಹನಿ ಹಾಕಿಸಿದ್ದರೂ, ಮತ್ತೂಮ್ಮೆ ಕಡ್ಡಾಯವಾಗಿ ಈಗಹುಟ್ಟಿದ ಮಗು ಸೇರಿದಂತೆ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ಹಾಕಿಸಬೇಕು. ಕಳೆದ ಅವಧಿಯಲ್ಲಿ ನಾವುಗಳು ನಿರೀಕ್ಷೆಗೂ ಮೀರಿ ಶೇ.104ರಷ್ಟು ಮಕ್ಕಳಿಗೆ ಲಸಿಕೆ ಹಾಕಿದ್ದೆವು. ಈಗಲೂ ನಾವು ತಾಲೂಕಿನಲ್ಲಿರುವ ಪ್ರತಿಯೊಂದು ಮಗುವಿಗೂ ಲಸಿಕೆಯನ್ನು ಹಾಕುತ್ತೇವೆ ಎಂದು ಹೇಳಿದರು.
ತಾಲೂಕಿನಲ್ಲಿ ನಮ್ಮ ಸಮೀಕ್ಷೆಯ ಪ್ರಕಾರ ಐದು ವರ್ಷದ ಒಳಗಿನ 17,075 ಮಕ್ಕಳಿದ್ದಾರೆ. ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ತಾಲೂಕಿನಲ್ಲಿ 110 ಬೂತ್ಗಳನ್ನು ಆರಂಭಿಸಿಸದ್ದೇವೆ. 21 ವಾಹನಗಳವ್ಯವಸ್ಥೆ ಮಾಡಿಕೊಂಡಿದ್ದ 448 ಸಲಿಕೆ ಹಾಕುವ ಸಿಬ್ಬಂದಿ ಸಿದ್ಧಮಾಡಿಕೊಂಡಿದೆ. ಬೆಳಗ್ಗೆ ಎಂಟು ಗಂಟೆಯಿಂದ ಸಂಜೆ ಐದು ಗಂಟೆಯವರೆಗೂ ಲಸಿಕೆ ಹಾಕುತ್ತೇವೆ. ಆದರೆ ಅಲೆಮಾರಿ ಕುಟುಂಬದ ಮಕ್ಕಳು, ನಿರ್ಜನ ಅಥವಾ ಕಬ್ಬಿನಗದ್ದೆ ಮತ್ತಿತರುಸ್ಥಳಗಳಲ್ಲಿ ವಾಸಿಸುತ್ತಿರುವ ಮಕ್ಕಳು ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವುದರಿಂದ ವಂಚಿತರಾಗುವ ಸಾಧ್ಯತೆಗಳು ಇರುವುದರಿಂದ ಅಲ್ಲಿನ ಸ್ಥಳೀಯ ನಿವಾಸಿಗಳು, ಪ್ರಜ್ಞಾವಂತರು, ಶಿಕ್ಷಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಅಲೆಮಾರಿಗಳು, ಕೂಲಿಕಾರ್ಮಿಕರಿಗೆ ಪೋಲಿಯೋ ಲಸಿಕೆ ಮಹತ್ವ ತಿಳಿಸಿಕೊಟ್ಟು, ಕಡ್ಡಾಯವಾಗಿ ಬೂತ್ಗೆ ಬಂದು ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡಬೇಕು ಎಂದು ಡಾ. ಹರೀಶ್ ಮನವಿಮಾಡಿದರು.
ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ, ಹಿರಿಯ ಆರೋಗ್ಯ ನಿರೀಕ್ಷಕ ಸತೀಶ್, ವಿನೋದ್,ಮತ್ತಿತರು ಹಾಜರಿದ್ದರು. ಶಾಲಾ ಮಕ್ಕಳು, ಆಶಾ ಕಾರ್ಯಕರ್ತೆ ಯರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಪೋಲಿಯೋ ಹನಿ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ