ರೈತರಿಗೆ ಅನುಕೂಲ ಕಲ್ಪಿಸುವುದೇ ಉದ್ದೇಶ
ಸಕಾಲದಲ್ಲಿ ಕಬ್ಬು ಕಟಾವು, ರೈತರಿಗೆ ನಿಗದಿತ ಬೆಲೆ ನೀಡಬೇಕು: ಸುಮಲತಾ
Team Udayavani, May 11, 2020, 6:05 PM IST
ಸಂಸದೆ ಸುಮಲತಾ ಭೇಟಿ ನೀಡಿ ಆದಿ ಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದರು.
ನಾಗಮಂಗಲ: ಮೈಷುಗರ್ ಕಾರ್ಖಾನೆ ಯಾರು ನಡೆಸುತ್ತಾರೆ ಅನ್ನುವುದು ಮುಖ್ಯವಲ್ಲ. ಸಕಾಲದಲ್ಲಿ ಕಬ್ಬು ಕಟಾವು ಮಾಡಿ, ರೈತರಿಗೆ ನಿಗದಿತ ಬೆಲೆ ಸಿಗುವುದು ಮುಖ್ಯ ಎಂದು ಸಂಸದೆ ಸುಮಲತಾ ಹೇಳಿದರು. ಆದಿಚುಂಚನಗಿರಿ ಕ್ಷೇತ್ರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾರ್ಖಾನೆ ಖಾಸಗಿಯವರು ನಡೆಸಿದರೆ ರೈತರಿಗೆ ಒಳ್ಳೆಯದಾಗಬಹುದು ಅನ್ನುವುದು
ನನ್ನ ಅಭಿಪ್ರಾಯ. ಸರ್ಕಾರ ನಡೆಸುತ್ತಿದ್ದ ಇಷ್ಟು ದಿನಗಳಲ್ಲಿ ಏನೇನು ಆಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇನ್ನು ಮುಂದೆ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂಬುದೇ ನನ್ನ ಹೇಳಿಕೆಯ ಉದ್ದೇಶವಾಗಿತ್ತು ಎಂದು ಸ್ಪಷ್ಟಪಡಿಸಿದರು.
ಜನಪ್ರತಿನಿಧಿಗಳ ವಿರೋಧ ತಪ್ಪು: ಕೋವಿಡ್ ಸೋಂಕಿತರು, ಸಂಪರ್ಕಿತರನ್ನು ಸಮೀಪದಲ್ಲಿ ಕ್ವಾರಂಟೈನ್ ಮಾಡಿದರೆ ಸೋಂಕು ಹರಡುವುದಿಲ್ಲ. ಕೋವಿಡ್ ಸೋಂಕಿನ ತಿಳಿವಳಿಕೆ, ಮಾಹಿತಿ ನೀಡಬೇಕಾದ ಜವಾಬ್ದಾರಿ ಯುತ ಜನಪ್ರತಿನಿಧಿಗಳೇ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡುವುದು ಸರಿಯಲ್ಲ ಎಂದರು. ಬಳಿಕ ಶ್ರೀಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ತಟ್ಟಹಳ್ಳಿ: ತಾಲೂಕಿನ ತಟ್ಟಹಳ್ಳಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಆಹಾರ ಪದಾರ್ಥ ಗಳ ಕಿಟ್ ವಿತರಿಸಿದ ಮಾತನಾಡಿ, ಸಾರ್ವ ಜನಿಕರು ಅನಗತ್ಯವಾಗಿ ಹೊರಗೆ ಓಡಾಟ ಮನೆಯಲ್ಲಿಯೇ ಇದ್ದು ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು. ಮನ್ಮುಲ್ ಅಧ್ಯಕ್ಷ ರಾಮಚಂದ್ರು, ನಿರ್ದೇಶಕ ನೆಲ್ಲಿಗೆರೆ ಬಾಲು, ಪಾಂಡವಪುರ ಎಸಿ ಶೈಲಜಾ, ತಹಶೀಲ್ದಾರ್ ಕುಂಞ ಅಹಮದ್, ಡಾ.ಧನಂಜಯ, ತಾಪಂ ಇಒ ಅನಂತರಾಜು, ಸಿಪಿಐ ರಾಜೇಂದ್ರ ಇತರರಿದ್ದರು.
ಸಾತೇನಹಳ್ಳಿಗೂ ಭೇಟಿ: ನಿಬಂಧಿತ ವಲಯ ಸಾತೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂಸದೆ ಸುಮಲತಾ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ