ಕೆಆರ್‌ಎಸ್‌ ಹಿನ್ನೀರಿನಲ್ಲಿ ದೇಗುಲಗಳು ಗೋಚರ

ಅಣೆಕಟ್ಟೆಯಲ್ಲಿ ನೀರು ಕಡಿಮೆಯಾಗುತ್ತಿದ್ದಂತೆ ಮುಳುಗಿದ್ದ ದೇಗುಲಗಳು ಪ್ರತ್ಯಕ್ಷ | ನಿತ್ಯ ಪ್ರವಾಸಿಗರು ಭೇಟಿ

Team Udayavani, May 2, 2019, 11:12 AM IST

mandya-2..

ಶ್ರೀರಂಗಪಟ್ಟಣದ ಕೆಆರ್‌ಎಸ್‌ ಹಿನ್ನೀರಿನಲ್ಲಿ ಕಂಡು ಬಂದ ದೇವಾಲಯದ ಒಂದು ನೋಟ.

ಶ್ರೀರಂಗಪಟ್ಟಣ: ನೂರಾರು ವರ್ಷಗಳ ಹಿಂದೆ ಜಲಾಶಯ ನಿರ್ಮಾಣ ಹಂತದ ಹಿನ್ನೀರಿನಲ್ಲಿ ಮುಳುಗಿದ್ದ ದೇವಾಲಯಗಳು ಈಗ ನೀರು ಕಡಿಮೆಯಾದಂತೆ ಒಂದೊಂದಾಗಿ ಗೋಚರಿಸುತ್ತಿದ್ದು, ಪ್ರವಾಸಿಗರನ್ನು ತಮ್ಮತ್ತ ಸೆಳೆಯುತ್ತಿವೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬಿಸಿಲ ಬೇಗೆ ಹೆಚ್ಚಾಗಿ ನೀರು ಆವಿಯಾಗುತ್ತಿದ್ದು, ದಿನೇ ದಿನೆ ಕೆಆರ್‌ಎಸ್‌ ಜಲಾಶಯದ ಲ್ಲಿ ನೀರು ಕುಸಿಯುತ್ತಿದಂತೆ ಹಿನ್ನೀರಿನಲ್ಲಿ ಮುಳುಗಿದ್ದ ದೇವಾಲಯ ಸೇರಿದಂತೆ ಇತರ ದ್ವೀಪಗಳು ಗೋಚರಿಸುವುದು ಸಾಮಾನ್ಯವಾಗಿದ್ದರೂ, ಜಲಾಶಯ ವೀಕ್ಷಣೆಗೆ ಬಂದ ಪ್ರವಾಸಿ ಗರಿಗೆ ಈ ಪಾಳು ಬಿದ್ದ ದೇವಾಲಯಗಳ ಮಂಟಪ, ಮುರಿದ ವಿಗ್ರಹ, ಕಲ್ಲಿನ ಚಿತ್ರಕಲೆ, ಕೆತ್ತನೆಗಳ‌ ಬಳಿ ಕುಳಿತುಕೊಳ್ಳಲು ಹಾಗೂ ವೀಕ್ಷಣೆ ಖುಷಿ ನೀಡಿದೆ.

ಮರುಕಳಿಸಿದ ಇತಿಹಾಸ: ಜಲಾಶಯದ ಒಟ್ಟು ನೀರಿನ ಮಟ್ಟ 124.80 ಅಡಿಗಳು ತುಂಬಿದ ಸಂದರ್ಭದಲ್ಲಿ ಈ ಭಾಗದ ಹಿನ್ನೀರಿನಲ್ಲಿ ಯಾವುದೇ ದ್ವೀಪಗಳು, ದೇವಾಲಯಗಳಿದ್ದರೂ ಯಾವುದೂ ಗೋಚರವಾಗುವುದಿಲ್ಲ. ಹಿನ್ನೀರಿನ ಭಾಗ ಒಂದು ಸಮತಟ್ಟಾಗಿ ಸಮುದ್ರದಂತೆ ಕಾಣುತ್ತದೆ. 100 ಅಡಿಗಿಂತ ಕಡಿಮೆಯಾದಂತೆ ಈ ಹಿಂದೆ ಕೆಆರ್‌ಎಸ್‌ ಜಲಾಶಯದ ನಿರ್ಮಾಣ ಮಾಡುವಾಗ ಕೆಲವು ಗ್ರಾಮಗಳು, ಪ್ರಸಿದ್ಧ ದೇವಾಲಯಗಳು ಮುಳುಗಿರುವ ಹಿಂದಿನ ಇತಿಹಾಸ ಕಂಡು ಬಂದಿವೆ.

ಪ್ರವಾಸಿಗರಿಗೆ ಖುಷಿ; ಕೆಆರ್‌ ಎಸ್‌ ಜಲಾಶಯ ವೀಕ್ಷಣೆಗೆ ಬಂದ ಪ್ರವಾಸಿಗರೂ ಹಿನ್ನೀರಿನ ಪ್ರದೇಶಕ್ಕೆ ಪ್ರತಿ ದಿನ ಆಗಮಿಸುತ್ತಿದ್ದಾರೆ. ಹಿನ್ನೀರಿನಲ್ಲಿ ಆಟವಾಡುವುದು, ಜಲಾಶಯದಿಂದ ಹೊರ ಕಾಣಿಸುವ ದೇವಾಲಯದ ಮಂಟಪದ ಬಳಿ ಕುಳಿತುಕೊಳ್ಳುತ್ತಿದ್ದಾರೆ. ಅಲ್ಲದೇ, ಊಟ ಮಾಡಿ ಸೊಬಗನ್ನು ಸವಿಯುತ್ತಾ ಮೊಬೈಲ್ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಸ್ಥಳಾಂತರ: ಜಲಾಶಯದಲ್ಲಿ 70 ಅಡಿಗಿಂತ ಕಡಿಮೆ ನೀರು ಇದ್ದ ಸಂದರ್ಭದಲ್ಲಿ ವೇಣುಗೋಪಾಲಸ್ವಾಮಿ ದೇವಾಲಯ ಕಂಡು ಬಂದಿತ್ತು. ಆ ದೇವಾಲಯ ದೊಡ್ಡದಾಗಿ ವಿಶೇಷವಾಗಿತ್ತು.

ಅದನ್ನು ಕಳೆದ 8 ವರ್ಷಗಳ ಹಿಂದೆ ಕಡಿಮೆ ನೀರಿದ್ದ ವೇಳೆ ಭಕ್ತರೊಬ್ಬರು ದೇವಾಲಯದ ಅವ ಶೇಷಗಳನ್ನು ಹಿನ್ನೀರಿನಿಂದ ಹೊರ ತಂದು ಕಟ್ಟೇರಿ ಗ್ರಾಮದ ಬಳಿ ಪ್ರಸ್ತುತ ಸ್ಥಾಪಿಸಿದ್ದಾರೆ. ಈಗಲೂ ಈ ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಒಂದು ವೇಳೆ ಮಳೆಗಾಲ ಪ್ರಾರಂಭ ವಾಗದೆ ಇದೇ ಬಿಸಿಲ ಝಳಕ್ಕೆ ನೀರು ಇನ್ನು ಕಡಿಮೆಯಾದರೆ ಇನ್ನು ಹಲವು ದೇವಾಲಯಗಳು ಗೋಚರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಕೆಆರ್‌ಎಸ್‌ನಲ್ಲಿ 87.22 ಅಡಿ ನೀರು:

ಪ್ರಸ್ತುತ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 87.22 ಅಡಿ ನೀರಿದ್ದು ಈಗ ಕೆಲವು ದೇವಾಲಯಗಳು ಗೋಚರಿಸುತ್ತಿವೆ. ಶ್ರಿಲಕ್ಷ್ಮಿ ನಾರಾಯಣ ದೇವಾಲಯ, ಶ್ರೀಸುಬ್ರಮಣ್ಯ ಸ್ವಾಮಿ ದೇವಾಲಯ, ವೇಣುಗೋಪಾಲ ಸ್ವಾಮಿ ದೇವಾಲಯ ಹೀಗೆ ಹಲವು ದೇವಾಲಯಗಳು ಕಾಣಿಸಿಕೊಳ್ಳುತ್ತಿವೆ. ಪ್ರಸ್ತುತ ಬೇಸಿಗೆ ಕಾಲವಾದ್ದ ರಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಕುಸಿದಿದೆ. ನೀರಿನ ಮಟ್ಟ ಕುಸಿಯಲಾರಂಭಿಸಿದ್ದ ರಿಂದ ದೇವಾಲಯಗಳು ಗೋಚರಿಸುತ್ತಿವೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.