ರಂಗ ಚಳವಳಿ ಶಾಶ್ವತವಾಗಿರಬೇಕು


Team Udayavani, Mar 13, 2020, 4:04 PM IST

ರಂಗ ಚಳವಳಿ ಶಾಶ್ವತವಾಗಿರಬೇಕು

ಮೈಸೂರು: ಸರ್ಕಾರದ ಸಹಾಯ ಬೇಡದೆ, ಜನರ ಬೆಂಬಲ ಪಡೆದು ನಾಟಕಗಳನ್ನು ರೂಪಿಸಬೇಕು ಎಂದು ಚಲನಚಿತ್ರ ನಿರ್ದೇಶಕ ಬಿ. ಸುರೇಶ್‌ ಹೇಳಿದರು.

ಅಭಿಯಂತರರು ರಂಗ ತಂಡದ ವತಿಯಿಂದ ಕಲಾಮಂದಿರದ ಕಿರು ರಂಗ ಮಂದಿರ ವೇದಿಕೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಂಗ ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನರ ಬೆಂಬಲ ಮುಖ್ಯ: ರಂಗ ಚಳವಳಿಗಳು ಶಾಶ್ವತವಾಗಿ ಉಳಿಯಬೇಕಾದರೆ ಅವು, ಜನರ ಬೆಂಬಲದಿಂದ ರೂಪುಗೊಳ್ಳಬೇಕು. ಸರ್ಕಾರ ದಿಂದ ಹಣ ಮತ್ತು ಬೆಂಬಲ ಪಡೆದರೆ ಆಳುವವರನ್ನು ಪ್ರಶ್ನಿಸಲು ಸಾಧ್ಯವಿರುವುದಿಲ್ಲ ಎಂದರು.

ಟಿ.ವಿ.ವೀಕ್ಷಣೆಯಿಂದ ದೂರವಿರಬೇಕು: ಸುಳ್ಳನ್ನೇ ಸತ್ಯವನ್ನಾಗಿ ಬಿಂಬಿಸುವ ಕಾಲದಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ನಾಟಕವನ್ನು ಪ್ರತಿಭಟನೆಯ ಅಸ್ತ್ರವಾಗಿ ಬಳಸುವ ತುರ್ತು ಅಗತ್ಯವಿದೆ. ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಜಾಲತಾಣಗಳು ಸುಳ್ಳನ್ನೇ ಸತ್ಯ ಎಂದು ಬಿಂಬಿಸಲು ಹೊರಟಿವೆ. ನಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕಾದರೆ ನಾವು ಟಿ.ವಿ.ವೀಕ್ಷಣೆಯಿಂದ ದೂರವಿರಬೇಕು ಎಂದು ಹೇಳಿದರು.

ಬಹುದೊಡ್ಡ ಜವಾಬ್ದಾರಿ ಇದೆ: ಇಂದು ರಂಗಭೂಮಿ ಕಟ್ಟಿ ಬೆಳೆಸುವವರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ರಂಗಭೂಮಿ ಮೂಲಕ ಜನರಿಗೆ ಸತ್ಯ ಯಾವುದು, ಸುಳ್ಳು ಯಾವುದು ಎಂಬ ಬಗ್ಗೆ ಮನವರಿಕೆ ಮಾಡಿ ಕೊಡುವ ಮೂಲಕ ಸಮಾಜವನ್ನು ಸದಾಶ ಯದತ್ತ ಕೊಂಡೊಯ್ಯಬೇಕಿದೆ ಎಂದರು. ಲೇವಡಿ: ಟಿ.ವಿ. ಮಾಧ್ಯಮ ಸುಳ್ಳು ಹೇಳುವುದರಲ್ಲಿ ನಿರತವಾಗಿದ್ದರೆ, ಕೆಲವು ಪತ್ರಿಕೆಗಳು ಆಳುವ ಸರ್ಕಾರದ ಮುಖ ವಾಣಿಯಾಗಿ ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಧಾರವಾಹಿಗಳು ಸರಕು ಮಾರಾಟ ಮಾಡುವ ವೇದಿಕೆಯಾಗಿವೆ ಎಂದು ಲೇವಡಿ ಮಾಡಿದರು.

ಯಾವುದು ಸತ್ಯ, ಸುಳ್ಳು ತಿಳಿಯಬೇಕು: ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಮಾತನಾಡಿ, ಎಲ್ಲಾ ಪತ್ರಿಕೆಗಳು ಹಾಗೂ ಮೀಡಿಯಾಗಳು ಕೇಂದ್ರ ಸರ್ಕಾರದ ಪರವಾಗಿವೆ ಎಂಬುದು ಸುಳ್ಳು. ತುಂಬಾ ಪತ್ರಿಕೆಗಳು ಮತ್ತು ಟಿ.ವಿ.ಗಳು ಕೇಂದ್ರ ಸರ್ಕಾರದ ವಿರುದ್ಧ ಸುಳ್ಳನ್ನು ಹೇಳುತ್ತಿವೆ. ನಾವು ಮಾತನಾಡುವ ಸತ್ಯ ಯಾವುದು, ಸುಳ್ಳು ಯಾವುದು ಎಂಬುದನ್ನು ತಿಳಿಯ ಬೇಕಾಗಿದೆ. ಇಂದು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯನ್ನು ಕೀಳಾಗಿ ತೇಜೋವಧೆ ಮಾಡಲಾಗುತ್ತಿದೆ. ಪತ್ರಿಕೆಗಳಲ್ಲಿತೇಜೋವಧೆಯಾದರೆ ಮಾನನಷ್ಟ ಮೊಕದ್ದಮೆ ದಾಖಲಿಸ ಬಹುದು. ಸಾಮಾಜಿಕ ಜಾಲತಾಣದಲ್ಲಿ ಯಾರನ್ನು ಹೊಣೆಗಾರರನ್ನಾಗಿ ಮಾಡುವುದು ಎಂದರು. ರಂಗಭೂಮಿ ಮನುಷ್ಯರನ್ನು ಬೆಸೆಯುವ ಕೆಲಸ ಮಾಡಬೇಕು. ಜನತೆಗೆ ಸರಿ, ತಪ್ಪು ಯಾವುದು ಎಂಬುದನ್ನು ತೋರಿಸಿಕೊಡುವ ಅಗತ್ಯವಿದೆ ಎಂದು ಹೇಳಿದರು.

ನಂತರ ಶಿವಮೊಗ್ಗದ ಹೊಂಗಿರಣ ತಂಡದಿಂದ ಹೂವು ನಾಟಕ ಪ್ರದರ್ಶನ ನಡೆಯಿತು. ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸದಸ್ಯ ತೋ. ನಂಜುಂಡಸ್ವಾಮಿ, ಅಭಿಯಂತರರು ರಂಗ ತಂಡದ ಸುರೇಶ್‌ ಬಾಬು ಇತರರು ಇದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.