ಮಂಡ್ಯ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ಕಳ್ಳತನ ದೃಶ್ಯ ಸೆರೆ
Team Udayavani, Dec 30, 2021, 12:30 PM IST
ಮಂಡ್ಯ: ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ರಾತ್ರಿ ಕಳ್ಳನೊಬ್ಬ ಹುಂಡಿಯ ಹಣ ದೋಚುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೇವಾಲಯದ ಹಿಂಭಾಗದ ಬಾಗಿಲ ಹೊಡೆದು ಒಳನುಗ್ಗುವ ಕಳ್ಳ ಹುಂಡಿಯ ಬೀಗ ಒಡೆದು ಇರುವ ಸ್ವಲ್ಪ ಹಣವನ್ನು ದೋಚಿದ್ದಾನೆ.
ಕಳೆದ ನಾಲ್ಕು ದಿನಗಳ ಹಿಂದೆ ಹನುಮ ಜಯಂತಿ ಮಾರನೇ ದಿನ ಹುಂಡಿ ಎಣಿಕೆ ಮಾಡಲಾಗಿತ್ತು. ಅಂದಿನಿಂದ ಹುಂಡಿಯಲ್ಲಿ ಸ್ವಲ್ಪ ಹಣ ಸಂಗ್ರಹವಾಗಿತ್ತು. ಅದನ್ನು ಕೊಂಡೊಯ್ದಿದ್ದಾನೆ ಎಂದು ಅರ್ಚಕ ಗೋಪಿ ಅವರು ತಿಳಿಸಿದರು.
ಬುಧವಾರ ಬೆಳಿಗ್ಗೆ ದೇವಾಲಯಕ್ಕೆ ಪೂಜೆ ಮಾಡಲು ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ನಂತರ ಸಿಸಿ ಟಿವಿ ಪರಿಶೀಲಿಸಿದಾಗ ಕಳ್ಳನ ಕೈಚಳಕ ಸೆರೆಯಾಗಿದೆ.
ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮಹಿಳೆ ಸಾವು
ಹುಂಡಿ ಹಣ ತೆಗೆದಿದ್ದರಿಂದ ಹೆಚ್ಚಿನ ಹಣ ಸಿಕ್ಕಿಲ್ಲ. ಆದ್ದರಿಂದ ಯಾವುದೇ ದೂರು ದಾಖಲಿಸಿಲ್ಲ ಎಂದು ಅರ್ಚಕ ಉದಯವಾಣಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್