ಕಳ್ಳತನ: ವಸ್ತು ವಾರಸುದಾರರಿಗೆ ಹಸ್ತಾಂತರ


Team Udayavani, Nov 25, 2021, 2:04 PM IST

ಕಳ್ಳತನ

ಮಂಡ್ಯ: ಜಿಲ್ಲೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಚಿನ್ನಾಭರಣ, ವಾಹನ, ನಗದು ಸೇರಿದಂತೆ ವಿವಿಧ 1.43 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಕಳೆದುಕೊಂಡಿದ್ದ ವಾರಸುದಾರರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ವಿತರಿಸಿದರು.

ವಾರಸುದಾರರಿಗೆ ಹಸ್ತಾಂತರ: ನಗರದ ಡಿಎಆರ್‌ ಪೊಲೀಸ್‌ ಗ್ರೌಂಡ್‌ನ‌ಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಯತೀಶ್‌, ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ ರಾಬರಿ, ಡಕಾಯಿತಿ, ದರೋಡೆ ಸಂಚು, ಮನೆ, ವಾಹನ, ಹಸು ಕಳ್ಳತನ ಸೇರಿದಂತೆ 84 ವಿವಿಧ ಪ್ರಕರಣಗಳನ್ನು ಭೇದಿಸಿ ವಶಪಡಿಸಿ ಕೊಂಡಿದ್ದ 1,48,58,560 ರೂ. ಮೌಲ್ಯದ ವಸ್ತುಗಳನ್ನು ಕಳೆದುಕೊಂಡಿದ್ದ ವಾರಸುದಾ ರರಿಗೆ ವಿತರಿಸಲಾಗಿದೆ ಎಂದು ತಿಳಿಸಿದರು.

ವಸ್ತುಗಳು ಯಾವುವು?: 62.68 ಲಕ್ಷ ರೂ. ಮೌಲ್ಯದ 1 ಕೆ.ಜಿ. 541 ಗ್ರಾಂ ಚಿನ್ನಾಭರಣ, 2.48 ಲಕ್ಷ ರೂ. ಮೌಲ್ಯದ 4 ಕೆಜಿ 570 ಗ್ರಾಂ ಬೆಳ್ಳಿ ಆಭರಣ, 84 ವಾಹನ, 3 ಕಾರು, 2 ಲಾರಿ, 1 ಆಟೋ, 7.11 ಲಕ್ಷ ರೂ. ನಗದು, 4 ಲ್ಯಾಪ್‌ಟಾಪ್‌, 9 ಮೊಬೈಲ್‌, 10 ಹಸು, 5 ಕುರಿ, 5.48 ಲಕ್ಷ ರೂ. ಮೌಲ್ಯದ ಹನಿ ನೀರಾವರಿಯ 116 ಬಂಡಲ್‌ ಪೈಪ್‌ಗ್ಳು, 1.50 ಲಕ್ಷ ರೂ. ಮೌಲ್ಯದ ಸಾವಿರ ಕೆ.ಜಿ.ಅಲ್ಯೂಮಿನಿಯಂ ವೈರ್‌, 27,600 ರೂ. ಮೌಲ್ಯದ 92 ಕಬ್ಬಿಣದ ಪೈಪ್‌ಗ್ಳು, 75 ಸಾವಿರ ರೂ. ಮೌಲ್ಯದ 1500 ಕೆ.ಜಿ.ಕಬ್ಬಿಣ, ಬ್ಯಾಟರಿ 11, 68 ಸಾವಿರ ರೂ. ಮೌಲ್ಯದ ಕಬ್ಬಿಣದ ಶೀಟುಗಳು, 6 ಮೋಟಾರು, 2 ಸ್ಟಾರ್ಟರ್‌, 1.18 ಲಕ್ಷ ರೂ. ಮೌಲ್ಯದ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:- ಮನೆಯಲ್ಲಿ ಕೆಜಿಗಟ್ಟಲೆ ಬಂಗಾರವಿದ್ದರೂ ಬ್ಯಾಂಕ್ ಲಾಕರ್ ಖಾಲಿ! ; ಎಸಿಬಿ ಶಾಕ್

ಡಕಾಯಿತಿ 1, ದರೋಡೆಗೆ ಹೊಂಚು 2, ರಾಬರಿ 3, ಸರಗಳ್ಳತನ 5, ಹಗಲು ಮನೆಗಳ್ಳತನ 8, ರಾತ್ರಿ ಕಳ್ಳತನ 14, ಮನೆಗಳ್ಳತನ 2, ವಾಹನಗಳ ಕಳ್ಳತನ 25, ಹಸು ಕಳ್ಳತನ 4, ಸಾಮಾನ್ಯ ಕಳ್ಳತನ 17, ಇತರೆ 2 ಸೇರಿದಂತೆ ಒಟ್ಟು 84 ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿ ಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಎಎಸ್ಪಿ ಧನಂಜಯ, ಡಿವೈಎಸ್ಪಿಗಳಾದ ಮಂಜುನಾಥ್‌, ಲಕ್ಷ್ಮೀನಾರಾಯಣ, ಇನ್ಸ್‌ಪೆಕ್ಟರ್‌ಗಳಾದ ಸಂತೋಷ್‌, ಆನಂದಗೌಡ, ಭರತ್‌, ನಿರಂಜನ್‌ ಸೇರಿದಂತೆ ಅಧಿಕಾರಿಗಳಿದ್ದರು.

 ಡಿ.2ಕ್ಕೆ ವಾರಸುದಾರರಿಲ್ಲದ 17 ಬೈಕ್‌ ಹರಾಜು

ಮದ್ದೂರು: ಮದ್ದೂರು ಸಂಚಾರ ಪೊಲೀಸ್‌ ಠಾಣಾ ಆವರಣದಲ್ಲಿ ವಾರಸುದಾರರಿಲ್ಲದೇ ಇರುವ 17 ದ್ವಿಚಕ್ರ ವಾಹನಗಳನ್ನು ಹರಾಜು ನಡೆಸಲು ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿರುವ ಕಾರಣ ಹರಾಜು ಪ್ರಕ್ರಿಯೆ ಕೈಗೊಂಡಿರುವುದಾಗಿ ಸಂಚಾರಿ ಪೊಲೀಸ್‌ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

17 ದ್ವಿಚಕ್ರ ವಾಹನಗಳನ್ನು ಆರ್‌ಟಿಒ ಅಧಿಕಾರಿಗಳಿಂದ ಬೆಲೆ ನಿಗದಿಗೊಳಿಸಿ ಹರಾಜು ಮಾಡಲು ನ್ಯಾಯಾಲಯ ಆದೇಶ ನೀಡಿರುವ ಕಾರಣ ಡಿ.2ರ ರಂದು ಹರಾಜು MSTC ONLINE PROTAL ನಡೆಸಲು ತೀರ್ಮಾನಿಸಿದೆ. ವಾಹನ ಪಡೆಯಲು ಇಚ್ಚಿಸುವ ಬಿಡ್‌ದಾರರು MSTC ONLINE PROTAL ವೆಬ್‌ಸೈಟ್‌ನಲ್ಲಿ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮದ್ದೂರು ಸಂಚಾರ ಪೊಲೀಸ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಮೊ.ಸಂ.9480804880 ಸಂಪರ್ಕಿಸಲು ಕೋರಲಾಗಿದೆ.

 “ನಾನು ವಿ.ಸಿ.ಫಾರಂನಲ್ಲಿ ಕೆಲಸ ನಿರ್ವಹಿ ಸುತ್ತಿದ್ದು, ಅಲ್ಲಿಯೇ ವಸತಿ ಗೃಹದಲ್ಲಿ ವಾಸವಾಗಿದ್ದೇನೆ. ರಾತ್ರಿ ವೇಳೆ ನಮ್ಮ ಮನೆ ಯಲ್ಲಿ ಚಿನ್ನದ ನೆಕ್ಲೆಸ್‌, ಬಳೆ, ಓಲೆ, ಉಂಗುರ ಸೇರಿದಂತೆ ಇತರೆ ಚಿನ್ನಾಭರಣಗಳು ಕಳ್ಳತನ ವಾಗಿದ್ದವು. ಕಳ್ಳತನವಾದ 9 ದಿನಗಳಲ್ಲಿಯೇ ಪತ್ತೆ ಹಚ್ಚಿ ವಾಪಸ್‌ ನೀಡಿದ್ದಾರೆ. ಪೊಲೀಸರಿಗೆ ನನ್ನ ಧನ್ಯವಾದಗಳು.” – ಗಾಯತ್ರಮ್ಮ, ಒಡವೆ ಕಳೆದುಕೊಂಡಿದ್ದ ಮಹಿಳೆ.

 “ಮದ್ದೂರಿನಿಂದ ಮಳವಳ್ಳಿಗೆ ಬರುವಾಗ ಕಾರು ಅಡ್ಡಗಟ್ಟಿ ಸೆ.21ರಂದು ಕೆಲವು ದುಷ್ಕರ್ಮಿಗಳು ದರೋಡೆ ಮಾಡಿದ್ದರು. ಪತ್ನಿಯ ಮಾಂಗಲ್ಯ ಸರ ಇತರೆ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಒಡವೆ ಹಿಂದಿರುಗಿಸಿದ್ದಾರೆ.” – ಶಿವಮಾದಪ್ಪ, ರಾಗಿಬೊಮ್ಮನಹಳ್ಳಿ ಗ್ರಾಮ, ಮಳವಳ್ಳಿ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.