ನನೆಗುದಿಗೆ ಬಿದ್ದ ಯೋಜನೆಗಳಿಗೆ ಬಜೆಟ್‌ನಲ್ಲಿ ಅನುದಾನ ಇಲ್ಲ


Team Udayavani, Feb 9, 2019, 12:30 AM IST

w-1.jpg

ಮಂಡ್ಯ: ಈ ಬಾರಿಯ ಬಜೆಟ್‌ನಲ್ಲಿ ಜಿಲ್ಲೆಗೆ ಹೊಸ ಕೊಡುಗೆಗಳೇನೋ ಸಿಕ್ಕಿದೆ. ಆದರೆ, ಜಿಲ್ಲೆಯ ಜನರ ಹಿಂದಿನ ನಿರೀಕ್ಷೆಗಳಲ್ಲಿ ಕಾರ್ಯಗತವಾಗದೆ ನನೆಗು ದಿಗೆ ಬಿದ್ದಿರುವ ಹಲವಾರು ಯೋಜನೆಗಳಿವೆ. ಅವುಗಳು ಯಾವನ್ನೂ ಈ ಬಜೆಟ್‌ನಲ್ಲಿ ನೆನೆಪಿಸಿಕೊಂಡಿಲ್ಲ.

ಬಿಡುಗಡೆಯಾಗಿಲ್ಲ 50 ಕೋಟಿ ರೂ.: ಕಳೆದ ಬಜೆಟ್‌ ನಲ್ಲಿ ಮಂಡ್ಯ ನಗರದ ಅಭಿವೃದ್ಧಿಗೆ 50 ಕೋಟಿ ರೂ. ಹಣ ಘೋಷಣೆಯಾಗಿತ್ತು. ಆ ಹಣ ಇದುವರೆಗೂ ಬಿಡುಗಡೆಯಾಗಿಲ್ಲ. ನಗರದ ಚಿತ್ರಣವೂ ಬದಲಾಗಿಲ್ಲ. ನಗರದ ಪ್ರಮುಖ ರಸ್ತೆಗಳೆಲ್ಲವೂ ಕುಲಗೆಟ್ಟು
ಹಾಳಾಗಿವೆ. ಯಾವೊಂದು ರಸ್ತೆಗಳೂ ಉತ್ತಮ ಸ್ಥಿತಿಯ ಲ್ಲಿಲ್ಲದೆ ತಾಲೂಕು ರಸ್ತೆಗಳಿಗಿಂತಲೂ ದುಸ್ಥಿತಿಯಲ್ಲಿವೆ.

ತರಕಾರಿ ಮಾರುಕಟ್ಟೆಗೆ ಹಣವಿಲ್ಲ: ಮಂಡ್ಯದಲ್ಲಿ ಹೊಸ ತರಕಾರಿ ಮಾರುಕಟ್ಟೆ ನಿರ್ಮಾಣವಾಗಬೇಕು ಎನ್ನುವುದು ನಗರದ ಜನರ ದಶಕಗಳ ಕನಸು. ಈ ಬಾರಿಯ ಬಜೆಟ್‌ನಲ್ಲೂ ಅದು ನನಸಾಗಿಲ್ಲ. ಹಾಳಾಗಿರುವ ಮಾರುಕಟ್ಟೆ ಯಲ್ಲೇ ಇಂದಿಗೂ ತರಕಾರಿ
ವಹಿವಾಟು ನಡೆಯು ತ್ತಿದೆ. ಸುಸಜ್ಜಿತವಾದ ಮಾರುಕಟ್ಟೆಯನ್ನು ನಿರ್ಮಾಣ ಮಾಡುವ ಕನಸು ಕನಸಾಗಿಯೇ ಉಳಿದಿದೆ.

ವರ್ತುಲ ರಸ್ತೆ ಬಗ್ಗೆ ಚಕಾರವಿಲ್ಲ: ಬೆಂಗಳೂರು-  ಮೈಸೂರು ಹೆದ್ದಾರಿ ಹತ್ತು ಪಥದ ರಸ್ತೆಯಾಗಿ ಪರಿವರ್ತನೆಯಾಗುತ್ತಿದ್ದು, ಬೈಪಾಸ್‌ ರಸ್ತೆ ಅದೇ ಸಮಯದಲ್ಲಿ ನಿರ್ಮಾಣವಾಗುವುದು ನಿಶ್ಚಿತವಾಗಿದೆ. ಆದರೆ, ನಗರದ ಜನರ ಬಹುದಿನಗಳ ಬೇಡಿಕೆ ವರ್ತುಲ (ರಿಂಗ್‌) ರಸ್ತೆಯಾಗಿದೆ. ಈಗಾಗಲೇ ಹೆದ್ದಾರಿಯ ಎರಡೂ ಬದಿಯಲ್ಲಿ ರಸ್ತೆಯ ನೀಲಿ ನಕಾಶೆ ಸಿನನೆಗುದಿಗೆ ಬಿದ್ದ ಯೋಜನೆಗಳಿಗೆ ಬಜೆಟ್‌ನಲ್ಲಿ ಅನುದಾನ ಇಲ್ಲವಾಗಿದೆ. ಬೈಪಾಸ್‌ ಬೆಂಗಳೂರಿನಿಂದ ಬರುವಾಗ ಬಲಭಾಗದಿಂದ ನಿರ್ಮಾಣವಾಗಲಿದೆ. ಅದೇ ರೀತಿ 2006ರಲ್ಲೇ
ಎಡಭಾಗದಿಂದಲೂ ರಸ್ತೆಗೆ ನೀಲಿ ನಕಾಶೆ ಸಿದ್ಧಪಡಿಸಿದ್ದು ಅದನ್ನೂ ಸೇರಿಸಿಕೊಂಡು ವರ್ತುಲ ರಸ್ತೆಗೆ ಚಾಲನೆ ನೀಡಿದ್ದರೆ ನಗರದ ಬೆಳವಣಿಗೆಗೆ ಅನುಕೂಲವಾಗುತ್ತಿತ್ತು ಎಂಬುದು ಜಿಲ್ಲೆಯ ಜನರ ಆಶಯವಾಗಿದೆ.

ಹಳ್ಳ ಹಿಡಿದ ಉಪನಗರ ಯೋಜನೆ 
ಮಂಡ್ಯ ಹೊರವಲಯದಲ್ಲಿರುವ ತೂಬಿನ ಕೆರೆ ಬಳಿ ಸಿದ್ಧರಾಮಯ್ಯ ಅಧಿಕಾರವಧಿಯ ಆರಂಭದಲ್ಲಿ ಉಪ ನಗರ ನಿರ್ಮಾಣ ಮಾಡುವುದಾಗಿ ಘೋಷಣೆ ಯಾಗಿದ್ದೆಷ್ಟು ಅಷ್ಟೇ. ಅಲ್ಲಿಂದ ಯೋಜನೆ ಮುಂದು ವರಿಯಲೇ ಇಲ್ಲ. ಭೂ ಪರಿಹಾರ ನೀಡುವ ವಿಚಾರ ದಲ್ಲಿ ರೈತರು ಹಾಗೂ ಸರ್ಕಾರದ ನಡುವೆ ಒಮ್ಮತ ಮೂಡದಿದ್ದರಿಂದ ಭೂಮಿ ಕೊಡಲು ಆ ಭಾಗದ ಜನರು ಒಪ್ಪಲಿಲ್ಲ. ಹೀಗಾಗಿ ಯೋಜನೆ ಸಾಕಾರ ಗೊಳ್ಳಲೂ ಇಲ್ಲ. ಮಂಡ್ಯ ನಗರದ ಬೆಳವಣಿಗೆಗೆ ಪೂರಕವಾಗಿ ತೂಬಿನಕೆರೆ ಬಳಿ ಉಪನಗರ ನಿರ್ಮಾಣ ವಾಗಿದ್ದರೆ ಜನ ವಸತಿಗೆ ಹೆಚ್ಚಿನ ಅನು ಕೂಲವಾಗಿ, ನಗರ ಬೆಳವಣಿಗೆ ಕಾಣಲು ಹೆಚ್ಚು ಸಹಕಾರಿಯಾ ಗುತ್ತಿತ್ತೆಂಬ ಪರಿಕಲ್ಪನೆ ಈ ಯೋಜನೆ ಹಿಂದಿತ್ತು.

ನೀರು ಸಂಗ್ರಹಣಾ ವ್ಯವಸ್ಥೆ ಇಲ್ಲ
ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಹೆಚ್ಚು ವರ್ಷ ಧಾರೆಯಾದ ಸಮಯದಲ್ಲಿ ಕೃಷ್ಣರಾಜಸಾಗರ ಭರ್ತಿಯಾಗಿ ಹೊರಬೀಳುವ ಹೆಚ್ಚುವರಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ವ್ಯವಸ್ಥೆಯೇ ನಮ್ಮಲ್ಲಿ ಇಲ್ಲ. ಹಾಲಿ 14.5 ಟಿಎಂಸಿ ಹೆಚ್ಚುವರಿ ನೀರು ನಮಗೆ ದೊರಕಿದ್ದರೂ ಅದರಲ್ಲಿ ದೊರಕುವ ನೀರನ್ನೂ ಸಂರಕ್ಷಣೆ ಮಾಡುವ ಆಲೋಚನೆಗಳನ್ನು ನಡೆಸಿಲ್ಲ. ಇದಕ್ಕಾಗಿ ಕೆರೆಯಿಂದ ಕೆರೆಗೆ ನೀರು ಎಂಬ ಯೋಜನೆ ಜಾರಿಗೆ ತರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಅನೇಕ ಬಾರಿ ಪ್ರಸ್ತಾಪಿಸಿ ದ್ದರು. ನಾಲಾ ಸಂಪರ್ಕ ವ್ಯವಸ್ಥೆಯಿಂದ ಪೈಪ್‌ಲೈನ್‌ ಅಳವಡಿಸಿ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಆದರೆ, ಈ ಬಗ್ಗೆ ಬಜೆಟ್‌ನಲ್ಲಿ ಎಲ್ಲಿಯೂ ಚಕಾರ ಎತ್ತಿದಂತೆ ಕಂಡು ಬರುತ್ತಿಲ್ಲ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.