ಈ ಕಾಲೇಜಲ್ಲಿ ಗಣಿತ,ಜೀವಶಾಸ್ತ್ರ ಬೋಧಕರೇ ಇಲ್ಲ!


Team Udayavani, Sep 20, 2018, 4:06 PM IST

mandya-1.jpg

ಶ್ರೀರಂಗಪಟ್ಟಣ: ಮಧ್ಯಂತರ ಪರೀಕ್ಷೆ ಎದುರಾಗಿದ್ದರೂ ಈ ಕಾಲೇಜಿನಲ್ಲಿ ಗಣಿತ, ಜೀವಶಾಸ್ತ್ರ ಬೋಧಕರಿಲ್ಲ, ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯ, ಕುಸಿಯುವ ಹಂತದಲ್ಲಿರುವ ಕಾಲೇಜು ಕಟ್ಟಡ, ಭದ್ರತೆ ಇಲ್ಲದೆ ರಾತ್ರಿ ವೇಳೆ ಅನೈತಿಕ
ಚಟುವಟಿಕೆಯ ತಾಣ…

ಇಷ್ಟೆಲ್ಲಾ ಅವ್ಯವಸ್ಥೆಗಳ ಆಗರ ಹೊಂದಿರುವುದು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು. ಈ ಕಾಲೇಜಿಗೆ 60 ವರ್ಷಗಳ ಇತಿಹಾಸವಿದೆ. ಒಂದು ಕಾಲದಲ್ಲಿ ಜೂನಿಯರ್‌ ಕಾಲೇಜಿನಲ್ಲಿ ಓದು ವುದೆಂದರೆ ಪ್ರತಿಷ್ಠೆಯ ವಿಷಯವಾಗಿತ್ತು. ಆದರೆ, ಈಗ ಮೂಲ ಸೌಕರ್ಯಗಳಿಲ್ಲದೆ, ಕಾಲೇಜು ಕಟ್ಟಡ ಕುಸಿಯುವ ಹಂತ ತಲುಪಿದ್ದರೂ ಶಿಕ್ಷಣ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದು ದುರ್ದೈವದ ಸಂಗತಿ. 

ಆರು ತಿಂಗಳಿಂದ ಬೋಧಕರಿಲ್ಲ: ಶ್ರೀರಂಗಪಟ್ಟಣ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿಂದ ಪ್ರಥಮ ಪಿಯುಸಿಗೆ 128 ಹಾಗೂ ದ್ವಿತೀಯ ಪಿಯುಸಿಗೆ 191 ವಿದ್ಯಾರ್ಥಿಗಳಿದ್ದಾರೆ. ಒಟ್ಟು 17 ಮಂದಿ
ಬೋಧಕರಿದ್ದು, ಇದರಲ್ಲಿ ಗಣಿತ ಮತ್ತು ಜೀವಶಾಸ್ತ್ರ ವಿಷಯದ ಬೋಧಕರಿಲ್ಲದೆ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ.

ಈ ಹಿಂದೆ ಇದ್ದ ಜೀವಶಾಸ್ತ್ರದ ಉಪನ್ಯಾಸಕರನ್ನು ವರ್ಗಾವಣೆ ಮಾಡಲಾಯಿತು. ಆ ಸ್ಥಾನಕ್ಕೆ ಇದುವರೆಗೂ ಯಾರೂ ಬಂದಿಲ್ಲ. ಆರು ತಿಂಗಳಿಂದ ಜೀವಶಾಸ್ತ್ರಕ್ಕೆ ಉಪನ್ಯಾಸಕರಿಲ್ಲ. ಈ ಸಂದರ್ಭದಲ್ಲಿ ಕೆಆರ್‌ಎಸ್‌ನಿಂದ ಒಬ್ಬರು ಉಪನ್ಯಾಸಕರನ್ನು ಇಲ್ಲಿಗೆ ವರ್ಗಾವಣೆ ಮಾಡಿಕೊಂಡರೂ ರಾಜಕೀಯ ಪ್ರತಿನಿಧಿಗಳು ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಶಿಫಾರಸು ಪತ್ರ ನೀಡಿದ್ದಾರೆ. ಇದರಿಂದ ಅವರು ಶ್ರೀರಂಗಪಟ್ಟಣ ಕಾಲೇಜಿಗೆ ಬರುತ್ತಿಲ್ಲ.

ಗಣಿತ ಪಾಠ ಮಾಡುವ ಉಪನ್ಯಾಸಕರನ್ನು ಅರಕೆರೆಯಿಂದ ಕರೆಸಿಕೊಂಡರು. ಅವರೂ ಸರಿಯಾಗಿ ಕಾಲೇಜಿಗೆ ಬರುತ್ತಿಲ್ಲ. ಈಗ ಮಧ್ಯಂತರ ಪರೀಕ್ಷೆ ಅಕ್ಟೋಬರ್‌ 3ಕ್ಕೆ ಇದೆ. ಗಣಿತ, ಜೀವಶಾಸ್ತ್ರ ಉಪನ್ಯಾಸಕರಿಲ್ಲದೇ ವಿದ್ಯಾರ್ಥಿಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕರು ಗಮನಹರಿಸದಿರುವುದು ವಿಪರ್ಯಾಸದ ಸಂಗತಿ. ವಿದ್ಯಾರ್ಥಿಗಳ ಪೋಷಕರಲ್ಲಿ ಮಕ್ಕಳ ಬಗ್ಗೆ ಆತಂಕ ಶುರುವಾಗಿದೆ.

ಕುಸಿಯುವ ಹಂತದಲ್ಲಿ ಕಟ್ಟಡ: 60 ವರ್ಷ ಪೂರೈಸಿರುವ ಶ್ರೀರಂಗಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಸರಿಯಾದ ನಿರ್ವಹಣೆ ಇಲ್ಲದೇ ಕುಸಿಯುವ ಹಂತ ತಲುಪಿದೆ. ಪಾಠ ಮಾಡುವ ಕೊಠಡಿಗಳಲ್ಲಿ ಬೋಧಕರು ಹಾಗೂ ವಿದ್ಯಾರ್ಥಿಗಳ ಮೇಲೆ ಮೇಲ್ಛಾವಣಿಯ ಗಾರೆ ಚೆಕ್ಕೆಗಳು ಉದುರುತ್ತಿದೆ. ಯಾವಾಗ ತಲೆ ಮೇಲೆ ಬಿದ್ದು ಪ್ರಾಣಾಪಾಯ ಸಂಭವಿಸುತ್ತದೋ ಎಂದು ಬೋಧಕರು ಹಾಗೂ ವಿದ್ಯಾರ್ಥಿಗಳು ಕೈಯಲ್ಲಿ ಜೀವ ಹಿಡಿದು ಕೂರಬೇಕಾಗಿದೆ.

ಇದಲ್ಲದೆ ಕೊಠಡಿ ಹೊರಗೆ ಒಳಗೆ ನೆಲಹಾಸುಗಳು ಗುಂಡಿ ಬಿದ್ದು, ಗೋಡೆ ಸೇರಿದಂತೆ ಇತರ ಕಂಬಗಳು ಬಿರುಕು ಬಿಟ್ಟಿವೆ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಸಂಬಂಧಿಸಿದ ಇಲಾಖೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಅಳಲು
ವ್ಯಕ್ತಪಡಿಸುತ್ತಾರೆ.

ಅನೈತಿಕ ಚಟುವಟಿಕೆ ತಾಣ: ಕಾಲೇಜಿಗೆ ರಾತ್ರಿ ಹೊತ್ತಿನಲ್ಲಿ ಕಾವಲುಗಾರರಿಲ್ಲ. ಗೇಟಿಗೆ ಬೀಗಗಳಿಲ್ಲದೆ ಬಾಗಿಲು ತೆರೆದ ಸ್ಥಿತಿಯಲ್ಲಿವೆ. ರಾತ್ರಿ ವೇಳೆ ಕಾಲೇಜಿನ ಆವರಣ ಪ್ರವೇಶಿಸುವ ಪುಂಡ-ಪೋಕರಿಗಳು ಮದ್ಯದ ಬಾಟಲು ಹಿಡಿದು ಕಾಲೇಜಿನ ಕೊಠಡಿಯ ವಿದ್ಯಾರ್ಥಿಗಳ ಬೆಂಚನ್ನೇ ಬಳಸಿ ಆವರಣದಲ್ಲೇ ಅಡುಗೆ ತಯಾರಿಸಿ, ಊಟ, ಮದ್ಯ ಸೇವಿಸಿ ಮೋಜು ಮಸ್ತಿ ಮಾಡಿ, ಬೆಳಗಿನವರೆಗೂ ಅಲ್ಲೇ ಮಲಗಿ ವಿಶ್ರಾಂತಿ ಪಡೆದು ನಂತರ ಅಲ್ಲಿಂದ ತೆರಳುವುದು ದಿನಂಪ್ರತಿ ನಡೆಯುತ್ತಿದೆ.

ಒಟ್ಟಾರೆ ರಾಜಕೀಯ ಹಿತಾಸಕ್ತಿ ಕಾಯುವ ಜನಪ್ರತಿನಿಧಿಗಳು ಸರ್ಕಾರ ಉರುಳುತ್ತಾ ಅಥವಾ ಉಳಿಯುವುದೇ ಎಂದು ಸರ್ಕಾರದ ಕಡೆ ಆಸಕ್ತಿಯಿಂದ ಗಮನಹರಿಸುವ ಬದಲು ತಮಗೆ ಮತ ಕೊಟ್ಟು ಗೆಲ್ಲಿಸಿದ ಜನರ ಸಮಸ್ಯೆ ಹಾಗೂ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ದೃಷ್ಟಿ ಹರಿಸಿದರೆ ಇಂಥ ಸಮಸ್ಯೆಗಳಿಗೆ ಮುಕ್ತಿ ಕಾಣಿಸಬಹುದು.
  ಗಂಜಾಂ ಮಂಜು

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.