ಅಭಿವೃದ್ಧಿ ನಿರ್ಲಕ್ಷಿಸುವ ಅಧಿಕಾರಿಗಳು ಬೇಕಿಲ್ಲ


Team Udayavani, Nov 8, 2019, 4:29 PM IST

mandya-tdy-1

ನಾಗಮಂಗಲ: ಸಭೆಗೆ ಸಮರ್ಪಕ ಮಾಹಿತಿ ನೀಡದ, ಆಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡದ ಅಧಿಕಾರಿಗಳು ನಮ್ಮ ಕ್ಷೇತ್ರಕ್ಕೆ ಬೇಕಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎನ್‌.ಅಪ್ಪಾಜಿಗೌಡ ತರಾಟೆಗೆ ತೆಗೆದುಕೊಂಡರು.

ತಾಲೂಕಿನ ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ ಮನೋಭಾವ ಹೊಂದಿರುವ ಅಧಿಕಾರಿಗಳು ಹಾಗೂ ಇಲಾಖೆಯ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸದ ಅಧಿಕಾರಿಗಳ ಅವಶ್ಯಕತೆ ನನ್ನ ಕ್ಷೇತ್ರಕ್ಕೆ ಇಲ್ಲ. ಅಂತವರು ಬದಲಾಗದಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ವಿಧಾನಪರಿಷತ್‌ ಸದಸ್ಯ ಎನ್‌.ಅಪ್ಪಾಜಿಗೌಡ ಖಡಕ್‌ ವಾರ್ನಿಂಗ್‌ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ಸುರೇಶ್‌ಗೌಡರ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಮಾಹಿತಿ ಇಲ್ಲದೆ ಏಕೆ ಬರುವಿರಿ?: ಸಭೆಯಲ್ಲಿ ಪಶುಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಶರತ್‌, ಇಲಾಖೆ ಕುರಿತು ಮಾಹಿತಿ ನೀಡುವ ಸಂದರ್ಭ ಮಧ್ಯ ಪ್ರವೇಶಿಸಿ ಮಾತನಾಡಿದ ಅಪ್ಪಾಜಿಗೌಡ, ಪಶುಸಂಗೋಪನಾ ಇಲಾಖೆಯಲ್ಲಿ ಸರ್ಕಾರದ ಯಾವೊಂದು ಸೌಲಭ್ಯಗಳೂ ಸಾರ್ವಜನಿಕರಿಗೆ ತಲುಪುತ್ತಿಲ್ಲ. ತಾಲೂಕಿನ ಜನತೆ ಬದುಕುತ್ತಿರುವುದು ಪಶುಸಂಗೋಪನೆ ನಂಬಿಕೊಂಡು ಎಂಬ ಅರಿವಿದೆಯಾ, ರಾಸುಗಳ ವಿಮೆ ಯೋಜನೆ ಕುರಿತಾಗಿ ಯಾವೊಂದು ಮಾಹಿತಿಯನ್ನೂ ನೀವು ನೀಡುತ್ತಿಲ್ಲ. ಅಂಕಿ-ಅಂಶಗಳ ಸಮೇತ ಮಾಹಿತಿ ಇಲ್ಲದಿದ್ದರೆ ಸಭೆಗೆ ಯಾಕ್‌ ಬರುತ್ತೀರಾ, ಬಸವೇಶ್ವರ ನಗರದಲ್ಲಿ ಪಶುವೈದ್ಯಕೀಯ ಕಾಲೇಜನ್ನು ಹಿಂದಿನ ಸಿಎಂ ಕುಮಾರಸ್ವಾಮಿಯವರಿದ್ದಾಗ ತಾಂತ್ರಿಕವಾಗಿ ಅನುಮೋದನೆ ಯಾಗಿತ್ತು. ಅದು ಯಾವ ಹಂತದಲ್ಲಿದೆ. ಆ ಜಾಗದ ವ್ಯಾಪ್ತಿ ಎಷ್ಟಿದೆ ಎಂದು ಪ್ರಶ್ನೆಗಳ ಸುರಿಮಳೆಗೈದರು. ಆದರೆ ಈ ಯಾವುದೇ ಪ್ರಶ್ನೆಗಳಿಗೂ ಸೂಕ್ತ ಉತ್ತರ ನೀಡಲು ತಡಬಡಾಯಿಸಿದ ಅಧಿಕಾರಿ ವಿರುದ್ಧ ಆಕ್ರೋಶಗೊಂಡರು.

ನಕಲಿ ವೈದ್ಯರ ಹಾವಳಿ: ತಾಲೂಕಿನಲ್ಲಿ ಪಶುಸಂಗೋಪನೆ ಇಲಾಖೆ ಸಮಸ್ಯೆಗಳಿಂದ ಕೂಡಿದೆ. ಈ ಇಲಾಖೆಯಲ್ಲಿ ನಕಲಿವೈದ್ಯರೇ ಹೆಚ್ಚಾಗಿ, ಡಿ-ದರ್ಜೆ ನೌಕರನೂ ವೈದ್ಯರಾಗಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಅನೇಕ ರಾಸುಗಳು ಸಾವನ್ನಪ್ಪಿವೆ. ಆದರೂ ಅಂತವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದು ಬಿಟ್ಟು ರೈತರ ಬಳಿ ಹೋಗಿ ಸಮಸ್ಯೆಗಳಿಗೆ ಸ್ಪಂದಿಸಿ. ರಾಸುಗಳ ಮರಣದ ಬಳಿಕ ಪರಿಹಾರ ನೀಡುವುದು ಮುಖ್ಯವಲ್ಲ, ಅನಾಹುತಗಳು ಸಂಭವಿಸದಂತೆ ಎಚ್ಚರವಹಿಸಿ. ನಕಲಿ ವೈದ್ಯರ ವಿರುದ್ಧ ಶೀಘ್ರ ಕ್ರಮಕ್ಕೆ ಸೂಚಿಸಿದರು.

ಡಿ-ದರ್ಜೆ ನೌಕರರ ನೇಮಕದಲ್ಲಿ ಭ್ರಷ್ಟಾಚಾರ: ಪಶುಸಂಗೋಪನೆ ಇಲಾಖೆಯಲ್ಲಿ ಡಿ-ದರ್ಜೆ ಸಿಬ್ಬಂದಿ ನೇಮಕಕ್ಕೆ ಯಾವುದೇ ಮಾನದಂಡ ಅನುಸರಿಸದೆ ಲಂಚ ಕೊಟ್ಟವರನ್ನು ನೇಮಿಸಿಕೊಳ್ಳುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಲಂಚ ಪಡೆದು ಸಿಬ್ಬಂದಿ ನೇಮಿಸಿಕೊಳ್ಳುವ ಮೂಲಕ ಪ್ರಾಣಿಗಳ ಜೀವ ಮತ್ತು ರೈತರ ಜೀವನದ ಜೊತೆ ಚೆಲ್ಲಾಟವಾಡದಿರಿ ಎಂದು ಎಚ್ಚರಿಕೆ ಕೊಟ್ಟರು. ಕೃಷಿ ಯೋಜನೆಯಡಿ ಎಷ್ಟು ಅರ್ಜಿ ಬಂದಿವೆ, ಈ ಯೋಜನಾ ಆಯ್ಕೆ ಸಮಿತಿ ಸದಸ್ಯರು ಯಾರು ಎಂದು ಜಯರಾಮಯ್ಯರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಯರಾಮಯ್ಯ ಯೋಜನೆಗೆ ಅರ್ಹ ಫ‌ಲಾನುಭವಿಗಳನ್ನು ಜನಪ್ರತಿನಿಧಿಗಳ ಶಿಫಾರಸು ಪತ್ರ ಹಾಗೂ ಅರ್ಜಿಗಳ ಸೀನಿಯಾರಿಟಿ ಮಾನದಂಡವಾಗಿಟ್ಟು ಆಯ್ಕೆ ಮಾಡಲಾಗುವುದು. ಇದಕ್ಕೆ ಯಾವುದೇ ಆಯ್ಕೆ ಸಮಿತಿ ಇಲ್ಲ ಎಂದರು. ಸಭೆಯಲ್ಲಿ ಜಿಪಂ ಸದಸ್ಯರಾದ ಶಿವಪ್ರಕಾಶ್‌, ಮುತ್ತಣ್ಣ, ತಾಪಂ ಅಧ್ಯಕ್ಷ ದಾಸೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಮೋಹನ್‌ಕುಮಾರ್‌, ತಹಶೀಲ್ದಾರ್‌ ರೂಪಾ, ಇಒ ಅನಂತರಾಜು, ಅಧಿಕಾರಿಗಳಾದ ಶಾಂತ, ಬಿಇಒ ಜಗದೀಶ್‌, ಜಯಪ್ರಕಾಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.