ಸಂಪೂರ್ಣ ಲಾಕ್ ಡೌನ್ ಮಾಡಲು ಚಿಂತನೆ: ನಾರಾಯಣಗೌಡ
Team Udayavani, May 19, 2021, 9:30 PM IST
ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕುಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಪ್ರಧಾನಿನರೇಂದ್ರ ಮೋದಿ ಅವರು ಜಿಲ್ಲಾ ಉಸ್ತುವಾರಿಸಚಿವರು, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿನಡೆದ ವಿಡಿಯೋ ಸಂವಾದದಲ್ಲಿ ಸಚಿವಕೆ.ಸಿ.ನಾರಾಯಣಗೌಡ, ಜಿಲ್ಲಾಧಿಕಾರಿ ಎಸ್.ಅಶ್ವಥಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ,ಜಿಪಂ ಸಿಇಒ ದಿವ್ಯಾಪ್ರಭು, ಜಿಲ್ಲಾ ಆರೋಗ್ಯಾಧಿಕಾರಿಡಾ.ಎಚ್.ಪಿ.ಮಂಚೇಗೌಡ, ಮಿಮ್ಸ್ ನಿರ್ದೇಶಕಡಾ.ಎಂ.ಆರ್.ಹರೀಶ್ ಸೇರಿದಂತೆ ಮತ್ತಿತರರಿದ್ದರು.
ವಿಡಿಯೋ ಸಂವಾದದಲ್ಲಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಕೊರೊನಾ ಸೋಂಕು ನಿಯಂತ್ರಿಸಲುಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಂತೆ ಹಾಗೂ ಕೆಲವುಸಲಹೆ, ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಂಪೂರ್ಣ ಲಾಕ್ಡೌನ್ ಮಾಡಲು ಕ್ರಮ:ಸಂವಾದದ ನಂತರ ಸುದ್ದಿಗಾರರೊಂದಿಗೆಮಾತನಾಡಿದ ಸಚಿವ ಕೆ.ಸಿ.ನಾರಾಯಣಗೌಡ,ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೆಹೆಚ್ಚುತ್ತಿದೆ. ನಿಯಂತ್ರಿಸಲು ಮಂಡ್ಯವನ್ನು ಸಂಪೂರ್ಣಲಾಕ್ಡೌನ್ ಮಾಡುವುದು ಅನಿವಾರ್ಯವಾಗಿದೆಎಂದು ತಿಳಿಸಿದರು.
ಇದರ ಬಗ್ಗೆ ಚರ್ಚಿಸಿ ತೀರ್ಮಾನಕೈಗೊಳ್ಳಲಾಗುವುದು. ಎಲ್ಲ ಅಧಿಕಾರಿಗಳು, ಶಾಸಕರಒಮ್ಮತದ ಅಭಿಪ್ರಾಯ ಪಡೆದು ಕ್ರಮವಹಿಸಲಾಗುವುದು. ಪ್ರಧಾನಿ ನರೇಂದ್ರಮೋದಿಅವರು ಸಂವಾದದಲ್ಲಿ ಕೊರೊನಾ ನಿಯಂತ್ರಿಸಲುಉತ್ತಮ ಸಲಹೆ, ಸೂಚನೆ ನೀಡಿದ್ದು, ಪಾಲಿಸಿದರೆಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ.ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮಾಡುವಂತೆ ಸಲಹೆನೀಡಿದ್ದಾರೆ. ಅದರಂತೆ ಈಗಾಗಲೇ ಸಮಿತಿರಚಿಸಲಾಗಿದೆ. ಆ ಸಮಿತಿಗೆ ಹೆಚ್ಚಿನ ಜವಾಬ್ದಾರಿನೀಡಲಾಗುವುದು ಎಂದು ತಿಳಿಸಿದರು.
ನಗರ ಪ್ರದೇಶಗಳಲ್ಲಿ ನಗರಸಭೆ, ಪುರಸಭೆವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳಿಗೆ ಜವಾಬ್ದಾರಿನೀಡುವಂತೆ, ಹಾಲಿ ಶಾಸಕರೊಂದಿಗೆ ಮಾಜಿಶಾಸಕರನ್ನೊಳಗೊಂಡಂತೆ ಕೆಲಸ ನಿರ್ವಹಿಸುವಮೂಲಕಕೊರೊನಾನಿಯಂತ್ರಿಸುವಂತೆಸೂಚಿಸಿದ್ದಾರೆ.ಅಲ್ಲದೆ, ಶಿಕ್ಷಕರನ್ನು ಬಳಸಿಕೊಳ್ಳುವಂತೆ ತಿಳಿಸಿದ್ದು,ಅದರಂತೆ ಕ್ರಮ ವಹಿಸಲಾಗುವುದು ಎಂದುಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್