ಟಿಪ್ಪು ಕಾಲದ ಕೋಟೆ ಗೋಡೆಗಳ ಕುಸಿತ


Team Udayavani, Oct 15, 2017, 5:18 PM IST

travel-1.jpg

ಶ್ರಿರಂಗಪಟ್ಟಣ: ಪಟ್ಟಣದ ಸುತ್ತಮುತ್ತ ಟಿಪ್ಪು ಕಾಲದಲ್ಲಿ ನಿರ್ಮಾಣಗೊಂಡಿರುವ ಕೋಟೆಗಳು ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಕುಸಿದು ಬೀಳುತ್ತಿವೆ. ಪಟ್ಟಣ ಪುರಸಭೆ ಕಚೇರಿ ಹಿಂಭಾಗ ದಲ್ಲಿರುವ ಕಂದಕ್ಕೆ ಹೊಂದಿಕೊಂಡಿರುವ 40 ಅಡಿ ಎತ್ತರದ ಕೋಟೆ, ಆನೆ ಕೋಟೆ ಬಾಗಿಲು ಬಳಿ ನವೀಕರಿಸಿದ ಕೋಟೆ, ಕಾವೇರಿ ಪುರ
ಬಡಾವಣೆಯ ಕಂದಕದ ಗೋಡೆ ಸೇರಿದಂತೆ ಪಟ್ಟಣದ ಸುತ್ತಲೂ ಇರುವ ಕೋಟೆ ಗೋಡೆಗಳು ಸತತ ಮಳೆಗೆ ಕುಸಿಯುತ್ತಿವೆ.

ಕಳಪೆ ಕಾಮಗಾರಿ: ವಾರದಿಂದ ಸತತ ಮಳೆಯಾಗುತ್ತಿರುವ ಕಾರಣ ಮಣ್ಣು ಶಿಥಿಲಗೊಂಡು, ಗೋಡೆಗಳು
ಕುಸಿಯಲಾರಂಭಿಸಿವೆ. ಶಿಥಿಲಾವಸ್ಥೆ ಯಲ್ಲಿರುವ ಹಳೆಯ ಕೋಟೆ ಗೋಡೆಗಳು ಕುಸಿದು ಬೀಳುತ್ತಿರುವುದು ಇತಿಹಾಸಕಾರರಲ್ಲಿ ಆತಂಕ ಮೂಡಿಸಿದೆ. ಕುಸಿದಿದ್ದ ಹಳೆಯ ಕೋಟೆ ಗೋಡೆಗಳನ್ನು ಹೊಸದಾಗಿ ನವೀಕರಿಸಲಾಗಿತ್ತಾದರೂ ಕೆಲ ವರ್ಷಗಳಲ್ಲೇ ಮತ್ತೆ ಅವು ಕುಸಿದು ಬಿದ್ದಿರುವುದು ಕಳಪೆ ಕಾಮಗಾರಿ ನಡೆದಿರುವ ಬಗ್ಗೆ
ಅನುಮಾನಗಳು ಮೂಡುವಂತೆ ಮಾಡಿದೆ.

15 ಮೀಟರ್‌ನಷ್ಟು ಕುಸಿತ: ಧ್ವನಿಬೆಳಕು ನಡೆಯುವ ಆನೆ ಕೋಟೆ ಬಾಗಿಲು ಬಳಿಯ ನವೀಕರಿಸಿದ ಕೋಟೆ ಗೋಡೆ ಎರಡು ಕಡೆಗಳಲ್ಲಿ ಸುಮಾರು 15 ಮೀಟರ್‌ನಷ್ಟು ಕುಸಿದಿದೆ. ನಿರ್ವಹಣೆ ಇಲ್ಲದಿರುವುದೇ ಗೋಡೆ ಕುಸಿತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಮೂರು ವರ್ಷಗಳ ಹಿಂದೆ ಯಷ್ಟೆ ಇದೇ ಸ್ಥಳದಲ್ಲಿ ಕೋಟೆಯ ಗೋಡೆ ಕುಸಿತವಾಗಿತ್ತು. ಆ ಸಮಯದಲ್ಲಿ ಕೋಟೆಯನ್ನು ನವೀಕರಣ ಮಾಡಲಾಗಿತ್ತು.

ಆ ಗೋಡೆ ಮತ್ತೆ ಕುಸಿದಿದೆ ಪರಿಶೀಲನೆ: ಕಾವೇರಿಪುರ ಬಡಾವಣೆ ಬಳಿ ಇರುವ ಕಂದಕದ ಕೋಟೆ ಗೋಡೆಗಳು
ಎರಡು ಕಡೆ ಕುಸಿದು ಬಿದ್ದಿದೆ. ರಾಜ್ಯ ಪುರಾತತ್ವ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಒಮ್ಮೆ ಭೇಟಿ ನೀಡಿ
ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಅಂದರೆ ಕೋಟೆ ನಾಡು ಎಂದೇ ಪ್ರಸಿದ್ಧಿ. ಇಲ್ಲಿರುವ ಕಂದಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ. ಕಂದಕಗಳ ಮೇಲೆ ಗಿಡ-ಗಂಟಿಗಳು ಬೆಳೆದುಕೊಂಡಿವೆ. ಹಲವೆಡೆ ನೀರು ಹರಿಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಕೋಟೆ ಗೋಡೆಗಳು ಕುಸಿದು ಬೀಳುವಂತಾಗಿದೆ. 

ಸಂರಕ್ಷಣೆ ಅಗತ್ಯ: ಶ್ರೀರಂಗಪಟ್ಟಣದಲ್ಲಿರುವ ಒಂದೊಂದು ಕೋಟೆಯೂ ಒಂದೊಂದು ಇತಿಹಾಸವನ್ನು ಹೇಳುತ್ತದೆ. ಇತಿಹಾಸದ ಮೇಲೆ ಬೆಳಕು ಚೆಲ್ಲುವ ಕೋಟೆಗಳನ್ನು ರಕ್ಷಣೆ ಮಾಡುವುದು ಪುರಾತತ್ವ ಇಲಾಖೆ ಅಧಿಕಾರಿಗಳ ಕರ್ತವ್ಯ. ಕೋಟೆಗಳ ಹಿಂದಿರುವ ಇತಿಹಾಸವನ್ನು ಇಂದಿನ ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸಲು ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಶ್ರೀರಂಗಪಟ್ಟಣವನ್ನು ಆಳಿದ ರಾಜ-ಮಹಾರಾಜರು ಪಟ್ಟಣದ ಸುತ್ತಲೂ ಇರುವ ಕೋಟೆಗಳನ್ನು ನಿರ್ಮಿಸಿದ್ದರಿಂದ ಶ್ರೀರಂಗಪಟ್ಟಣಕ್ಕೆ ಕೋಟೆಗಳ ನಾಡು ಎಂಬ ಹೆಸರು ಬಂದಿದೆ.

ದೇಶ ವಿದೇಶದಿಂದ ಬರುವ ಪ್ರವಾಸಿಗರಿಗೆ ಇಲ್ಲಿನ ಇತಿಹಾಸವನ್ನು ನೆನೆಪಿಸುವ ಸಾಕ್ಷಿಪ್ರಜ್ಞೆಗಳಾಗಿ ಕೋಟೆಗಳಿವೆ. ಈಗಲಾದರೂ ಪುರತತ್ವ ಇಲಾಖೆ ಎಚ್ಚೆತ್ತು ಕೋಟೆಯ ಗೋಡೆಗಳನ್ನು ಉಳಿಸಿಕೊಳ್ಳಲು ಮುಂದಾಗಬೇಕಿದೆ. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.