ಬೀದಿಬದಿ ವ್ಯಾಪಾರ ತೆರವಿಗೆ 2 ದಿನ ಗಡುವು: ಮುರುಗೇಶ್
Team Udayavani, Dec 20, 2019, 2:32 PM IST
ಮದ್ದೂರು: ಪಟ್ಟಣದ ಪೇಟೇಬೀದಿ ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರ ವಹಿವಾಟಿನಿಂದ ಜನ ಮತ್ತು ವಾಹನ ಸಂಚಾರಕ್ಕೆ ಕಿರಿಕಿರಿ ಉಂಟಾಗಿದ್ದು, ಕೂಡಲೇ ತೆರವುಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ ಬೀದಿಬದಿ ವ್ಯಾಪಾರಸ್ಥರು ಸಾರ್ವಜನಿಕ ಸ್ಥಳಗಳಾದ ನ್ಯಾಯಾಲಯ, ಲೋಕೋಪಯೋಗಿ ವಸತಿ ಗೃಹ, ತಾಪಂ ಕಚೇರಿ ರಸ್ತೆ, ಸರ್ಕಾರಿ ಆಸ್ಪತ್ರೆ, ಶಾಲಾ ಆವರಣಗಳ ಬಳಿ ರಸ್ತೆಗಳಲ್ಲಿ ವ್ಯಾಪಾರ ನಡೆಸುತ್ತಿದ್ದು, ಜನ ಮತ್ತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಜತೆಗೆ ವಾಹನ ದಟ್ಟಣೆ ಮಿತಿ ಮೀರಿದ್ದು, ಕಚೇರಿಗೆ ಪ್ರತಿನಿತ್ಯ ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿವೆ ಎಂದು ಹೇಳಿದರು.
ಬೀದಿ ಬದಿ ವ್ಯಾಪಾರಸ್ಥರು ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಪುರಸಭೆ ವತಿಯಿಂದ ನಿರ್ಮಿಸಿರುವ ಮಾರುಕಟ್ಟೆಯಲ್ಲಿ ಹಣ್ಣು, ಹೂ, ತರಕಾರಿ ಮತ್ತಿತರ ಪದಾರ್ಥಗಳನ್ನು ಮಾರಾಟ ಮಾಡಬೇಕು. ಇದಕ್ಕೆಂದೇ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ. ಮಾರುಕಟ್ಟೆ ಬಿಟ್ಟು ರಸ್ತೆಗಳಲ್ಲಿ ಮಾರಾಟಕ್ಕೆ ಕುಳಿತರೆ ಕೂಡಲೇ ಕಾನೂನಾತ್ಮಕ ಕ್ರಮ ವಹಿಸುವ ಎಚ್ಚರಿಕೆ ನೀಡಿದರು.
ಮುಂದಿನ ಎರಡು ದಿನದೊಳಗೆ ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ, ಪುರಸಭೆ ಸಿಬ್ಬಂದಿ ಪೊಲೀಸರ ನೆರವಿನೊಂದಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ವಹಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ