ಪಿಂಡ ಪ್ರದಾನಕ್ಕೆ ಟೋಕನ್‌ ವ್ಯವಸ್ಥೆ


Team Udayavani, Sep 16, 2020, 3:49 PM IST

ಪಿಂಡ ಪ್ರದಾನಕ್ಕೆ ಟೋಕನ್‌ ವ್ಯವಸ್ಥೆ

ಶ್ರೀರಂಗಪಟ್ಟಣ: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪಿಂಡ ಪ್ರದಾನದ ಶ್ರಾದ್ಧ ಕಾರ್ಯಮಾಡಲು ರಾಜ್ಯದ ವಿವಿಧೆಡೆಗಳಿಂದ ಸಾರ್ವಜನಿಕರು ನದಿ ತೀರಗಳಿಗೆ ಆಗಮಿಸುವುದರಿಂದ ತಾಲೂಕು ಆಡಳಿತ ಕೆಲವು ಮುಂಜಾಗ್ರತೆಕ್ರಮಗಳನ್ನುಕೈಗೊಂಡಿದೆ.

ಶ್ರೀರಂಗಪಟ್ಟಣದ ಕಾವೇರಿ ನದಿ ತೀರದ ಸಂಗಮ, ಪಶ್ಚಿಮ ವಾಹಿನಿ, ಸ್ನಾನಘಟ್ಟ ಹಾಗೂಗೋಸಾಯಿ ಘಾಟ್‌ ಸೇರಿದಂತೆ ವಿವಿಧ ಕಡೆ ಪಿಂಡ ಪ್ರದಾನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಜನಸಂದಣಿ ಹಾಗೂ ಗಲಾಟೆಗಳು ನಡೆಯದಂತೆ ಮುಂಜಾಗ್ರತೆ ವಹಿಸಲು ಪೊಲೀಸ್‌ ಭದ್ರತೆ ನೀಡಲು ಮುಂದಾಗಿದೆ.

ಭದ್ರತೆಗಾಗಿ ತಂಡಗಳ ರಚನೆ: ಪೊಲೀಸ್‌,ಕಂದಾಯ ಹಾಗೂ ಪುರಸಭೆಅಧಿಕಾರಿಗಳ ತಂv ‌ರಚಿಸಲಾಗಿದೆ,ನದಿ ತೀರ‌ದಲ್ಲಿ ಎಲ್ಲೆಲ್ಲಿ ಪೊಜೆ, ಪಿಂಡಪ್ರದಾನ, ಶ್ರಾದ್ಧ ಕಾರ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಗಲಾಟೆ, ಗದ್ದಲಗಳು ನಡೆಯದಂತೆ ನಿಗಾ ವಹಿಸಲು ಹಾಗೂ ಸ್ವಚ್ಛತೆ ನಿಯಮ ಗಳನ್ನು ಪಾಲಿಸುವಂತೆ ಕಟ್ಟೆಚ್ಚರ  ‌ಹಿಸಲಾಗಿದೆ.

ಟೋಕನ್‌ ವ್ಯವಸ್ಥೆ: ಬರುವ ಸಾರ್ವಜನಿಕರಿಂದ ಸ್ಥಳಗಳಲ್ಲಿ ಜನಸಂದಣಿ, ಜಗಳ, ನೂಕು ನುಗ್ಗಲು ಉಂಟಾಗದಂತೆ ತಡೆಗಟ್ಟಲು ಟೋಕನ್‌ ವ್ಯವಸ್ಥೆಮಾಡಲಾಗಿದೆ. ನದಿ ತೀರದಲ್ಲಿ ಎಲ್ಲೆಲ್ಲಿ ನಡೆಯುತ್ತದೆಯೋ, ಆ ಭಾಗದಲ್ಲಿ2ಕಡೆ ಟೋಕನ್‌ ಸಿಗಲಿದ್ದು,ಅದನ್ನು ಪಡೆದು ಕೊಂಡು ಸಾರ್ವ ಜನಿಕರು ಕಾರ್ಯ ಗಳನ್ನು ನಡೆಸ ಬೇಕು.

ನಿಗದಿತ ಮಂದಿಗೆ ಅವಕಾಶ: ಪಿಂಡ ಪ್ರದಾನ ಮಾಡಲು ಬರುವ ಸಾರ್ವಜನಿಕರಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ಚಿಕ್ಕಮಕ್ಕಳಿಗೆ ಪ್ರವೇಶ ನಿಷೇಧಿಸಲಾಗಿದೆ. ಒಂದುಕುಟುಂಬದಿಂದ ಕೆಲವೇ ಮಂದಿಗೆ ಮಾತ್ರ ಅವಕಾಶ ನೀಡಲು ಕ್ರಮ ಕೈಗೊಳ್ಳಲಾಗಿದೆ.

ನಿಯಮ ಪಾಲಿಸುವಂತೆ ಸೂಚನೆ: ನದಿ ತೀರದ ಯಾವ ಭಾಗಗಳಲ್ಲಿ ಪೂಜೆ ಮಾಡಿ ಕೊಡುವ ವೈಧಿಕರು, ಪಂಡಿತರು, ಪೂಜಾರಿಗಳನ್ನು ಕರೆಸಿ ಸಭೆ  ನ‌ಡೆಸಿ ನಿರ್ದೇಶನ ‌ ನೀಡಲು ಕ್ರಮ ಕೈಗೊಳ್ಳಲಾಗಿದೆ. ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಮತ್ತೆ ನಾಳೆ ಇನ್ನೊಂದು ಸಭೆ ಕ‌ರೆಯಲಾಗುವುದು ಎಂದು ತಹಶೀಲ್ದಾರ್‌ ತಿಳಿಸಿದ್ದಾರೆ.

ಸ್ವಚ್ಛತೆಗೆ ಆದ್ಯತೆ: ನದಿಗಳಲ್ಲಿ ಪಿಂಡ ಪ್ರದಾನ ಮಾಡಲು ಬರುವ ಸಾರ್ವಜನಿಕರು ಯಾವುದೇ ರೀತಿಯ ಬಟ್ಟೆ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ನದಿಗೆ ಬಿಡದಂತೆ ಸೂಚಿಸಲಾಗಿದೆ. ಅಲ್ಲದೆ, ಪುರಸಭೆ ಸಿಬ್ಬಂದಿಗಳು ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಅನುಪಯುಕ್ತ ಬಟ್ಟೆ, ತ್ಯಾಜ್ಯಗಳನ್ನು ಒಂದು ಹಾಕುವಂತೆಪುರಸಭೆಯಿಂದ ವ್ಯವಸ್ಥೆ ಮಾಡಲಾಗಿದೆ. ಸ್ಯಾನಿಟೈಸರ್‌, ಮಾಸ್ಕ್ ಕಡ್ಡಾಯ: ಕೊರೊನಾ ಇರುವುದರಿಂದ ಬರುವ ಸಾರ್ವಜನಿಕರುಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ ಬಳಸಬೇಕು. ಅಲ್ಲದೆ, ಸಾಮಾಜಿಕ ಅಂತರಕಾಯ್ದುಕೊಂಡು ಕಾರ್ಯಗಳನ್ನು ಮಾಡಬೇಕು. ಗುಂಪು ಸೇರಬಾರದು ಎಂಬ ನಿಯಮಗಳನ್ನು ಹಾಕಲಾಗಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ತಾಲ್ಲೂಕು ಆಡಳಿತಕ್ರಮಕೈಗೊಂಡಿದೆ.

ಪೂಜೆಗಾಗಿ ನಡೆದಿತ್ತು ಮಾರಾಮಾರಿ :  ಕಳೆದ ವರ್ಷ ಕಾವೇರಿ ಸಂಗಮದಲ್ಲಿ ಪಿಂಡ ಪ್ರದಾನ ಪೂಜೆಗಾಗಿ ಸಾರ್ವಜನಿಕರನ್ನು ತಮ್ಮತ್ತ ಕರೆದುಕೊಂಡು ಹೋಗುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಕುಡುಗೋಲು, ಮಚ್ಚುಗಳಿಂದ ಪರಸ್ಪರ ಹಲ್ಲೆಗೆ ಯತ್ನಿಸಿದ ಘಟನೆಗಳು ನಡೆದಿದ್ದವು. ಈ ವಿಚಾರದಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಈ ಬಾರಿ ಯಾವುದೇ ಗಲಾಟೆ, ಗದ್ದಲಗಳು, ಜನಸಂದಣಿ ಸೇರದಂತೆ ತಾಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ.

ಅಕ್ರಮ ಕುಟೀರ ನಿರ್ಮಾಣ :  ಕಳೆದ ಬಾರಿ ನದಿ ತೀರದಲ್ಲಿ ಅಕ್ರಮವಾಗಿ ಕುಟೀರಗಳನ್ನು ನಿರ್ಮಿಸಿಕೊಂಡು ಪಿಂಡ ಪ್ರದಾನ ಹಾಗೂ ವಾಮಚಾರ ಮಾಡುವ ಮೂಲಕ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳುಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತ ಆಡಳಿತ ತೆರವುಗೊಳಿಸಿತ್ತು. ಇದರಿಂದ ಅಲ್ಲಿನ ಸಾರ್ವಜನಿಕರು ತಾಲೂಕು ಆಡಳಿತ ವಿರುದ್ಧ ಪ್ರತಿಭಟನೆ ನಡೆಸಿದ್ದರು. ನಂತರ ಮತ್ತೆಕುಟೀರಗಳು ತಲೆ ಎತ್ತಿವೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.