ಸಂಚಾರ ನಿಯಮ ಪಾಲಿಸುವುದು ಕಡ್ಡಾಯ
Team Udayavani, Aug 5, 2019, 4:55 PM IST
ಮದ್ದೂರು: ವಿದ್ಯಾರ್ಥಿಗಳು ಸಂಚಾರ ನಿಯಮ ಪಾಲಿಸಿ ಅಪಘಾತಗಳನ್ನು ತಡೆಯಬೇಕೆಂದು ಬೆಸಗರಹಳ್ಳಿ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕ ಮಹದೇವಯ್ಯ ತಿಳಿಸಿದರು.
ತಾಲೂಕಿನ ಬೆಸಗರಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಸ್ಟೂಡೆಂಟ್ ಪೊಲೀಸ್ ಕೆಡಿಟ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಕೈಗೆ ಯಾವುದೇ ವಾಹನ ಕೊಡಬಾರದು. ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು, ಜೋಶ್ನಲ್ಲಿ ಅತಿವೇಗದಲ್ಲಿ ಮಕ್ಕಳು ವಾಹನ ಚಲಾಯಿಸುವುದರಿಂದ ಅಪಘಾತಗಳಾಗುವ ಸಂಭವವಿದೆ. ವಾಹನ ಸವಾರರು ನಿಯಮಗಳನ್ನು ಪಾಲಿಸುವ ಜತೆಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದರು.
ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಹೆಚ್ಚು ಯುವಕರೇ ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕಾರಿ ವಿಚಾರ. ಧೂಮಪಾನ, ಮದ್ಯಪಾನ, ಜಾಲಿ ರೈಡಿಂಗ್, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ. ವಿದ್ಯಾರ್ಥಿಗಳು ಸ್ಥಳೀಯರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಪ್ರಾಂಶುಪಾಲ ಪ್ರಕಾಶ್, ಪೇದೆಗಳಾದ ನಾಗೇಶ, ಪ್ರದೀಪ್ಕುಮಾರ್, ಕೆಪಿಎಸ್ ಸದಸ್ಯ ಸುರೇಶ್, ಶಿಕ್ಷಕರಾದ ಶುಭಮಣಿ, ರಾಜಮ್ಮ, ರಾಜಶೇಖರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ